Homeಕರ್ನಾಟಕಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ...

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ ನಿರ್ಧಾರಕ್ಕೆ ಹಲವರಿಂದ ವಿರೋಧ

- Advertisement -
- Advertisement -

ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಕ್ಷೇತ್ರವನ್ನು ಸುಧಾರಿಸಲು ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ’ (ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಅವರು ತಜ್ಞರ ಸಮಿತಿಯನ್ನು ರಚಿಸಿದ್ದಾರೆ.

ಸಂಘಪರಿವಾರ ಹಿನ್ನೆಲೆಯ ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದು ಇದೀಗ ವಿರೋಧಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಡಾ.ಗುರುರಾಜ ಕರಜಗಿ ಅಧ್ಯಕ್ಷತೆ ವಹಿಸಿರುವ ಸಮಿತಿಯಲ್ಲಿ ಶಾಹೀನ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಅಬ್ದುಲ್ ಖದೀರ್, ಭಾಲ್ಕಿಯ ಶ್ರೀ ಹಿರೇಮಠ ಸ್ವಾಮೀಜಿ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಡಾ.ರುದ್ರೇಶ್, ಫಾದರ್ ಫ್ರಾನ್ಸಿಸ್, ಎನ್.ಬಿ. ಪಾಟೀಲ್ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವಾರು ಪ್ರಮುಖರು ಇದ್ದಾರೆ.

ಶುಕ್ರವಾರ ಕಲಬುರಗಿಯ ಕೆಕೆಆರ್‌ಡಿಬಿ ಕಚೇರಿಯಲ್ಲಿ ಸಮಿತಿಯ ಸಭೆ ನಡೆಸಲಾಗಿದ್ದು,ಕಲ್ಯಾಣ ಕರ್ನಾಟಕ ಭಾಗದಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ಕಾರ್ಯತಂತ್ರಗಳ ಕುರಿತು ಸದಸ್ಯರು ಚರ್ಚಿಸಿದರು. ಈ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸುವ ಕುರಿತು ಚರ್ಚೆಗಳು ಕೇಂದ್ರೀಕೃತವಾಗಿತ್ತು

‘ಅಕ್ಷರ ಆವಿಷ್ಕಾರ’ ಯೋಜನೆಗೆ ಕೆಕೆಆರ್‌ಡಿಬಿಯು ಗಮನ ನೀಡಲಾಗಿದ್ದು, ಶಾಲೆ ಮತ್ತು ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ, ಅರ್ಹ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಪ್ರಮುಖ್ಯತೆ ನೀಡಲಾಗಿದೆ.

ಕರಜಗಿ ಅಧ್ಯಕ್ಷತೆಗೆ ವಿರೋಧ:

ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದನ್ನು ಶಿಕ್ಷಣ ತಜ್ಞರಾದ ಬಿ. ಶ್ರೀಪಾದ್ ಭಟ್ ವಿರೋಧ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಕಲ್ಯಾಣಕರ್ನಾಟಕದ (ಹೈದರಾಬಾದ್ ಕರ್ನಾಟಕ) ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆರೆಸ್ಸೆಸ್ ಸಿದ್ಧಾಂತದ ಪರವಿರುವ ಗುರುರಾಜ್ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದಾರೆ. ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇದೆಯೇ? ಕರ್ಜಗಿ ಯಾವ ಬಗೆಯಲ್ಲಿ ಶಿಕ್ಷಣ ತಜ್ಞರು? ಹೈದರಾಬಾದ್ ಕರ್ನಾಟಕದ ಸಮಾಜೋ-ಆರ್ಥಿಕ-ರಾಜಕೀಯ ಬಿಕ್ಕಟ್ಟಿನ ಕುರಿತು ಇವರಿಗೆ ಯಾವ ಮಾಹಿತಿ ಇದೆ? ಇವರ ಅರ್ಹತೆ ಏನು? ಯಾವ ಮಾನದಂಡಗಳನ್ನು ಆಧರಿಸಿ ಆಯ್ಕೆ ಮಾಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

“ಇದ್ಯಾವುದೂ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಲ್ಲ. ಆರೆಸ್ಸೆಸ್ ನ ಕರ್ಜಗಿ ಮಾತ್ರ ಮುಖ್ಯ. ಇನ್ನು ಈ ಸಮಿತಿಯ ಇತರೇ ಸದಸ್ಯರಲ್ಲಿ ಬಹುತೇಕರು ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಅಲ್ಲಿ ಉದ್ಯೋಗದಲ್ಲಿರುವವರು. ಕಾಂಗ್ರೆಸ್‌ಗೆ ಯಾವುದೇ ಸಿದ್ಧಾಂತವಿಲ್ಲ ಎಂದು ಗೊತ್ತಿತ್ತು. ಆದರೆ, ನೈತಿಕವಾಗಿ ದಿವಾಳಿಯಾಗಿರುವುದಾಗಿ ಸಾಬೀತುಪಡಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪತ್ರಕರ್ತರಾದ ಹರ್ಷ ಕುಗ್ವೆ ಅವರು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದು, “ಈ ಗುರುರಾಜ ಕರ್ಜಗಿ ಒಬ್ಬ ಶಿಕ್ಷಣ ತಜ್ಞ ಎನ್ನುವವರು ಮುಟ್ಟಾಳರು. ಅವನಂತ ಒಬ್ಬ ಮೌಡ್ಯ ಪ್ರತಿಪಾದಕ ಮತ್ತು ಸನಾತನಿಯನ್ನ ಜವಾಬ್ದಾರಿಯುತ ಹುದ್ದೆಗೆ ನೇಮಿಸಿರುವುದು ಸರ್ಕಾರದ ಆತ್ಮಹತ್ಯಾಕಾರಿ ಕೆಲಸ. ಕರ್ಜಗಿಯಂತ ಅವಕಾಶವಾದಿ ಕನ್ನಿಂಗ್ ಚೆಡ್ಡಿಜೀವಿಗಳಿಗೆ ಮಾನ್ಯತೆ ನೀಡುವಂತ ಅದಿಕಾರಿಗಳಿಗೆ ತಲೆಯಲ್ಲಿ ಬುದ್ದಿ ಅಂತೂ ಇರಲಿಕ್ಕಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

“ಶಿಕ್ಷಣವನ್ನು ಕುಲಗಡೆಸುವ ಕೆಲಸ ಬರೀ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದಲ್ಲ ಈಗಲೂ ಮುಂದುವರೆದಿದೆ.‌ ಶಿಕ್ಷಣ ಕ್ಚೇತ್ರದಲ್ಲಿ ಹಲವಾರು ದಶಕಗಳಿಂದ ಹಗಲಿರುಳು ಕೆಲಸ ಮಾಡುತ್ತಿರುವ ಪ್ರೊ.‌ ನಿರಂಜನಾರಾದ್ಯರಂತವರು ಇರುವಾಗ ಈ ಪಡಪೋಸಿ ಕರ್ಜಗಿ ಯಾಕೆ ಬೇಕಿತ್ತು? ಮಾನ್ಯ ಸಿ ಎಂ ಸಿದ್ದರಾಮಯ್ಯ ಅವರು ಈ ಕರ್ಜಗಿ ತಮಿತಿಯನ್ಜು ಕೂಡಲೇ ಉಚ್ಚಾಟಿಸಬೇಕು. ಹೊಸ ಸಮಿತಿ ರಚಿಸಬೇಕು” ಎಂದು ಹರ್ಷ ಆಗ್ರಹಿಸಿದ್ದಾರೆ.

ವಿದ್ಯಾರ್ಥಿ ಹೋರಾಟಗಾರ ಪಿ. ನಂದಕುಮಾರ್ ಅವರು ಪ್ರತಿಕ್ರಿಯಿಸಿ,  “ಗುರುರಾಜ ಕರ್ಜಿಗಿಯವರು ಸನಾತನಿ ಸಂತತಿಯ ಅವಕಾಶವಾದಿ ಹಾಗೂ ಸಂಘ ಪರಿವಾರದ ವ್ಯಕಿ ಎನ್ನುವುದು ಈಗಾಗಲೇ ನಾಡಿನ ಪ್ರಜ್ಞಾವಂತ ನಾಗರೀಕರಿಗೆ ತಿಳಿದಿರುವಂತದ್ದೆ. ಅವರು ಕರ್ನಾಟಕದ ವಿವಿಧೆಡೆ ಕಾರ್ಯಕ್ರಮಗಳು ಆಯೋಜನೆಗೊಳ್ಳುವುದು ಕೇಶವ ಕೃಪೆಯಿಂದ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಈ ಮೂಲಕವೇ ಅವರು ಇವತ್ತು ಶಿಕ್ಷಣ ತಜ್ಞರಾದವರು. ಕೇವಲ ಭಾವನಾತ್ಮಕ ಮಾತುಗಳ ಮೂಲಕವೇ ಸಾಮಾನ್ಯ ಜನರನ್ನು ಮೂಡರನ್ನಾಗಿಸುವಲ್ಲಿ ನಿಸ್ಸಿಮರು. ಇಂತಹ ವ್ಯಕ್ತಿಯನ್ನು ಅದರಲ್ಲೂ ಮುಖ್ಯವಾಗಿ ಜಾತಿ ವಿನಾಶದ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟದ ಸುಧಾರಣ ಸಮಿತಿಗೆ ಸರ್ಕಾರ ಈ ಮನುವಾದದ ಪ್ರತಿಪಾದಕರನ್ನು ನೇಮಿಸಿರುವುದು ಒಪ್ಪಲಾಗದು” ಎಂದು ಹೇಳಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕ ಸರ್ಕಾರವು ಗುರುರಾಜ ಕರಜಗಿಯವರ ನೇಮಕ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು. ಇತ್ತೀಚೆಗೆ ಕರ್ನಾಟಕ ಸರ್ಕಾರ ಕೈಗೊಳ್ಳುತ್ತೀರಿವ ಈ ರೀತಿಯ ನಿರ್ಧಾರ ಕಾರಣಕ್ಕೆ ನಮ್ಮಂತ ಬಹುತೇಕರು ಕರ್ನಾಟಕ ಸರ್ಕಾರವನ್ನು ಅನುಮಾನದಿಂದ ಮತ್ತು ಅಸಹನೆಯಿಂದ ನೋಡುವಂತ ಪರಿಸ್ಥಿತಿ ಬಂದೊದಗಿದೆ. ಇದು ಈ ಸರ್ಕಾರದ ನೈತಿಕತೆ ಕುಸಿತವನ್ನು ಎತ್ತಿ ತೋರಿಸುವಂತೆ ಕಾಣುತ್ತಿದೆ. ಬಹಳ ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ರಾಜಕೀಯ ಚಿಂತನೆಯಲ್ಲೇ ಆಗಿರುವ ಬಹು ದೊಡ್ಡ ಲೋಪವನ್ನು ತೋರಿಸುತ್ತದೆ. ಸಮಾಜದಲ್ಲಿ ಸೂಕ್ಷ್ಮ ಮತ್ತು ತೀಕ್ಷ್ಣವಾದ ರಾಜಕೀಯ ಪ್ರಜ್ಞೆಯನ್ನು ಬಿಟ್ಟು ಕೊಡುವುದು ಬಹು ಘೋರ ದುರಂತಕ್ಕೆಡೆ ಮಾಡಿಕೊಡುತ್ತದೆ ಎನ್ನುವುದು ಆಳುವ ಸರ್ಕಾರ ಅರಿತುಕೊಳ್ಳಬೇಕು” ಎಂದು ಅವರು ಕಾಂಗ್ರೆಸ್‌ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವೈಚಾರಿಕ ತಿಳುವಳಿಕೆ, ಅನಿಕೇತನ ಪ್ರಜ್ಞೆಯ ನೀತಿಯನ್ನು ಹಾಗೂ ಕವಿರಾಜ ಮಾರ್ಗಕಾರ ಹಾಕಿರುವ ವಿವೇಕ ತತ್ವಕ್ಕೆ ಬುನಾದಿ ಹಾಕುವಂತ ಶಿಕ್ಷಣ ತಜ್ಞರನ್ನು ನೇಮಿಸಿದರೆ ಶೈಕ್ಷಣಿಕವಾಗಿ ಹಿಂದುಳಿದ ಹೈದ್ರಾಬಾದ್ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕರ್ನಾಟಕವಾಗುವುದು. ಈಗಿರುವುದು ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕವಾಗಿದೆ ಅಷ್ಟೇ. ಹಾಗಾಗಿ, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಸಮಿತಿಗೆ ನೇಮಕಗೊಂಡ ಗುರುರಾಜ್ ಕರ್ಜಿಗಿಯವರನ್ನು ಕೈಬಿಟ್ಟು, ರಾಜ್ಯದ ಹಿರಿಯ ಬುದ್ಧಿಜೀವಿಗಳ,ಸಾಹಿತಿಗಳ ಸಲಹೆಗಳನ್ನು ಪಡೆದು ಸಮಿತಿ ಸದಸ್ಯರನ್ನು ನೇಮಕ ಮಾಡುವುದು ಒಳಿತು” ಎಂದು ನಂದಕುಮಾರ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ವಿರುದ್ದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...