Homeಮುಖಪುಟರಜನಿಕಾಂತ್ ಅಭಿನಯದ 'ವೇಟ್ಟೈಯಾನ್‌' ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

- Advertisement -
- Advertisement -

ಅಕ್ಟೋಬರ್ 10ರಂದು ಬಿಡುಗಡೆಯಾಗಲಿರುವ ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾದ ಡೈಲಾಗ್‌ಗಳ ವಿರುದ್ಧ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ನಿಗಮದ ನಿವೃತ್ತ ನಿರ್ವಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ನಲ್ಲಿರುವ ಡೈಲಾಗ್‌ಗಳು ಪೊಲೀಸರ ಕಾನೂನುಬಾಹಿರ ಹತ್ಯೆ ಅಥವಾ ಎನ್‌ಕೌಂಟರ್‌ಗಳನ್ನು ವೈಭವೀಕರಿಸುತ್ತದೆ ಎಂದು ಪಳನಿವೇಲು ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಪೊಲೀಸರ ಕಾನೂನು ಬಾಹಿರ ಕ್ರಮಗಳು, ಎನ್‌ಕೌಂಟರ್ ಹೆಸರಿನಲ್ಲಿ ಅವರು ಮಾಡುವ ಹತ್ಯೆಗಳನ್ನು “ಎನ್‌ಕೌಂಟರ್ ಕೇವಲ ಶಿಕ್ಷೆಯಲ್ಲ, ಅದು ಅಪರಾಧಗಳನ್ನು ತಡೆಗಟ್ಟುವ ಕ್ರಮ” ಎಂಬ ಸಿನಿಮಾದ ಡೈಲಾಗ್‌ ಮೂಲಕ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಅದು ‘ಅಸಂವಿಧಾನಿಕ’ ದೃಷ್ಟಿಕೋನವಾಗಿದೆ. ಕಾನೂನು ಬಾಹಿರ ಕ್ರಮಗಳನ್ನು ಗೌರವಿಸಲು ಪ್ರೇಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಕಂಡಕ್ಟರ್ ಪಳನಿವೇಲು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.

ತಮಿಳುನಾಡು ಸರ್ಕಾರ, ವೇಟ್ಟೈಯಾನ್‌ ನಿರ್ಮಾಪಕರಾದ ಲೈಕಾ ಪ್ರೊಡಕ್ಷನ್ಸ್ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ವಿರುದ್ಧ ಅರ್ಜಿ ಸಲ್ಲಿಸಿರುವ ಪಳನಿವೇಲು ಅವರು, ವಿವಾದಾತ್ಮಕ ಡೈಲಾಗ್‌ಗಳನ್ನು ತೆಗೆದು ಹಾಕುವವರೆಗೆ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು. ಸಿನಿಮಾಗೆ ನೀಡಿರುವ ‘ಯುಎ’ ಸರ್ಟಿಫಿಕೇಟ್ ಹಿಂಪಡೆದು ‘ಎ’ ಸರ್ಟಿಫಿಕೇಟ್ ನೀಡಲು ಸಿಬಿಎಫ್‌ಸಿ ಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದಾರೆ. ಮಧುರೈ ಪೀಠ ಮೂವರಿಗೂ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.

ವೇಟ್ಟೈಯಾನ್‌ ಸಿನಿಮಾದ ಮೊದಲ ಟೀಸರ್ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಿತ್ತು. ಅಕ್ಟೋಬರ್ 2 ರಂದು ಅಂತಿಮ ಟ್ರೇಲರ್ ಬಿಡುಗಡೆಗೊಳಿಸಲಾಗಿದೆ. ಚಿತ್ರವು ಅಕ್ಟೋಬರ್ 10 ರಂದು ತೆರೆಗೆ ಬರಲಿದೆ. ರಜನಿಕಾಂತ್, ಮಂಜು ವಾರಿಯರ್, ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್, ದುಶಾರ ವಿಜಯನ್ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾದಲ್ಲಿ ರಜನಿಕಾಂತ್ ಅವರ ‘ಪ್ರಸಿದ್ಧ ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂಬ ಪಾತ್ರದ ಕುರಿತು ಪಳನಿವೇಲು ತನ್ನ ಅರ್ಜಿಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಎನ್‌ಕೌಂಟರ್ ಎನ್ನುವುದು ಅಪರಾಧಿಗಳು ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದಾಗ ಗುಂಡು ಹಾರಿಸುವ ಮೂಲಕ ಅಥವಾ ಗುಂಡಿಕ್ಕಿ ಕೊಲ್ಲುವ ಮೂಲಕ ಆತ್ಮರಕ್ಷಣೆ ಮಾಡುವ ಪ್ರಕ್ರಿಯೆ. ಒಬ್ಬ ಪೋಲೀಸ್‌ ತನ್ನ ಸೇವಾವಧಿಯಲ್ಲಿ ಒಂದು ಅಥವಾ ಎರಡು ಬಾರಿ ಇಂತಹ ಅಹಿತಕರ ಘಟನೆಯನ್ನು ಎದುರಿಸಬಹುದು ಅಥವಾ ‘ಎನ್ಕೌಂಟರ್’ ಮಾಡಬಹುದು. ಯಾವುದೇ ಪೊಲೀಸರು ‘ಹೆಸರಾಂತ ಎನ್‌ಕೌಂಟರ್ ಸ್ಪೆಷಲಿಸ್ಟ್’ ಆಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಸಿನಿಮಾದ ಡೈಲಾಗ್‌ಗಳು ಸಂವಿಧಾನ ವಿರೋಧಿ ನೀತಿಯನ್ನು ವೈಭವೀಕರಿಸುತ್ತದೆ. ಇದಕ್ಕೆ ಅನುಮತಿ ನೀಡಿದರೆ, ಸಂವಿಧಾನದ ಮೌಲ್ಯಗಳು ಮನೋರಂಜನೆಯ ವಸ್ತುವಾಗಿ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಕುತ್ತು ತರಬಹುದು. ಅಸಂವಿಧಾನಿಕ ಡೈಲಾಗ್‌ಗಳ ಪ್ರದರ್ಶನಕ್ಕೆ ಅನುಮತಿಸಿದರೆ, ಜನರು ನ್ಯಾಯಾಂಗ ವಿಚಾರಣೆಯ ಮೂಲಕ ಅಪರಾಧಿಯನ್ನು ಕಂಬಿ ಹಿಂದೆ ತಳ್ಳುವ ಬದಲು, ಪ್ರತಿ ಕ್ರಿಮಿನಲ್ ಪ್ರಕರಣದಲ್ಲಿ ‘ಎನ್‌ಕೌಂಟರ್’ ಪರಿಹಾರವನ್ನು ಕೇಳಬಹುದು. ಆ ಸಂದರ್ಭದಲ್ಲಿ, ಅಪರಾಧಿಯು ಭಾರತದ ಸಂವಿಧಾನದ 21 ನೇ ವಿಧಿಯಡಿ ನೀಡಿರುವ ರಕ್ಷಣೆಯ ಮೂಲಭೂತ ಹಕ್ಕನ್ನು ಕಳೆದುಕೊಳ್ಳುವ ಮೂಲಕ ರಕ್ಷಣೆಯಿಲ್ಲದವನಾಗುತ್ತಾನೆ” ಎಂದು ಪಲನಿವೇಳು ತನ್ನ ಅರ್ಜಿಯಲ್ಲಿ ವಿವರಿಸಿದ್ದಾರೆ.

ರಜನಿಕಾಂತ್ ಮತ್ತು ಕಾಲಿವುಡ್ ಚಲನಚಿತ್ರಗಳಲ್ಲಿ ನಾಯಕನ ಆರಾಧನೆಯನ್ನು ಉತ್ತೇಜಿಸುವ ಪ್ರವೃತ್ತಿಯನ್ನು ಪಳನಿವೇಲು ಟೀಕಿಸಿದ್ದು, “ಸಿನಿಮಾವನ್ನು ಕೇವಲ ಮನರಂಜನೆ ಎಂದು ನಾವು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಸಿನೆಮಾದಲ್ಲಿನ ವೈಭವೀಕರಣವು ನೈತಿಕ, ಕಲಾತ್ಮಕ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಹುಟ್ಟುಹಾಕುವ ಒಂದು ಸಂಕೀರ್ಣ ವಿದ್ಯಮಾನವಾಗಿದೆ. ಹಿಂಸಾಚಾರದಲ್ಲಿ ತೊಡಗುವ ಪಾತ್ರಗಳನ್ನು, ಆಕ್ರಮಣಕಾರಿ ಕ್ರಮಗಳ ಹೊರತಾಗಿಯೂ ವೀರರು, ಕೆಚ್ಚೆದೆಯ, ಪ್ರಶಂಸನೀಯ ಮತ್ತು ‘ಜೀವನಕ್ಕಿಂತ ದೊಡ್ಡವರು’ ಎಂದು ಚಿತ್ರಿಸಲಾಗುತ್ತಿದೆ. ವೇಟ್ಟೈಯಾನ್‌ ಸಿನಿಮಾದಲ್ಲೂ ‘ಎನ್‌ಕೌಂಟರ್’ ಹಿಂಸೆಯನ್ನು ಜನರ ಸಂರಕ್ಷಕನಂತೆ ಬಿಂಬಿಸಲಾಗಿದೆ” ಎಂದಿದ್ದಾರೆ.

ಸೌಜನ್ಯ : thenewsminute.com

ಇದನ್ನೂ ಓದಿ : ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...