Homeಕರ್ನಾಟಕPoSH ಸಮಿತಿ ರಚನೆ ಬಗ್ಗೆ 15 ದಿನಗಳ ಕಾಲಾವಕಾಶ ಕೋರಿದ ಕರ್ನಾಟಕ ಫಿಲ್ಮ್ ಚೇಂಬರ್

PoSH ಸಮಿತಿ ರಚನೆ ಬಗ್ಗೆ 15 ದಿನಗಳ ಕಾಲಾವಕಾಶ ಕೋರಿದ ಕರ್ನಾಟಕ ಫಿಲ್ಮ್ ಚೇಂಬರ್

- Advertisement -
- Advertisement -

ಲೈಂಗಿಕ ಕಿರುಕುಳ ತಡೆ ಕಾಯ್ದೆ(PoSH)ಗೆ ಅನುಗುಣವಾಗಿ ಕನ್ನಡ ಚಲನಚಿತ್ರೋದ್ಯಮದಲ್ಲಿ ಆಂತರಿಕ ಸಮಿತಿ(IC)ಯನ್ನು ಸ್ಥಾಪಿಸಬೇಕೆಂಬ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಬೇಡಿಕೆಗೆ ಪ್ರತಿಕ್ರಿಯಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಹೆಚ್ಚುವರಿ 15 ದಿನಗಳ ಕಾಲಾವಕಾಶವನ್ನು ಕೋರಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಲೈಂಗಿಕ ಕಿರುಕುಳ ತಡೆಗಟ್ಟುವ ಸಮಿತಿಯನ್ನು ರಚಿಸುವ ಕ್ರಿಯಾ ಯೋಜನೆಯನ್ನು ರೂಪಿಸಲು ಅಥವಾ ಅದನ್ನು ರಚಿಸಲು ಯಾಕೆ ಸಾಧ್ಯವಾವುದಿಲ್ಲ ಎಂಬ ಕಾರಣಗಳನ್ನು ನೀಡಲು ಕೆಎಫ್‌ಸಿಸಿಗೆ ಸೆಪ್ಟೆಂಬರ್ 16 ರಂದು 15 ದಿನಗಳ ಗಡುವನ್ನು ನೀಡಿದ್ದರು.

ಇದನ್ನೂ ಓದಿ: ಗಾಜಾ | ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ; ಕನಿಷ್ಠ 21 ಜನರು ಸಾವು

ಚಿತ್ರೋದ್ಯಮದ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ, ಮಹಿಳಾ ಆಯೋಗವು ಸೆಪ್ಟೆಂಬರ್ 18 ರಂದು ಕೆಎಫ್‌ಸಿಸಿಗೆ ಪತ್ರವನ್ನು ಕಳುಹಿಸಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆ, ಹಕ್ಕುಗಳು ಮತ್ತು ಕಲ್ಯಾಣದ ಬಗ್ಗೆ ವಿವರವಾದ ಮಾಹಿತಿಯನ್ನು ಕೋರಿದೆ.

ಕೇರಳದಲ್ಲಿ ಹೇಮಾ ಸಮಿತಿಯ ವರದಿಯು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಪ್ರಚಲಿತದಲ್ಲಿರುವ ಅಸಹನೀಯ ಪರಿಸ್ಥಿತಿಗಳು ಮತ್ತು ಲೈಂಗಿಕ ಕಿರುಕುಳವನ್ನು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರೋದ್ಯಮದಲ್ಲಿ ಐಸಿ ಸ್ಥಾಪನೆಗೆ ಆಯೋಗವು ಪ್ರಸ್ತಾಪಿಸಿತ್ತು. ಕೆಲಸದ ಸ್ಥಳಗಳಲ್ಲಿ IC ಗಳ ರಚನೆ ಮಾಡುವುದು PoSH ಕಾಯಿದೆಯ ಪ್ರಕಾರ ಕಡ್ಡಾಯವಾಗಿದೆ.

ಕೆಎಫ್‌ಸಿಸಿ 15 ದಿನಗಳ ವಿಸ್ತರಣೆಯನ್ನು ಕೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದ್ದು, ಇದರ ನಂತರ ಆಯೋಗವು ತನ್ನ ಮುಂದಿನ ಕ್ರಮಗಳನ್ನು ನಿರ್ಧರಿಸುತ್ತದೆ. ಈ ನಡುವೆ ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅವರು ಸಂದರ್ಶನವೊಂದರಲ್ಲಿ ಕನ್ನಡ ಚಿತ್ರರಂಗದಲ್ಲಿ ಹೇಮಾ ಸಮಿತಿಯಂತಹ ಸಮಿತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಾಜಿ ಶಾಸಕ ಮೊಹಿಯುದ್ದೀನ್ ಬಾವಾರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ!

ಕರ್ನಾಟಕ ಸರ್ಕಾರ ಹೇಮಾ ಮಾದರಿ ಸಮಿತಿ  ಸ್ಥಾಪಿಸಲು ನಿರ್ಧರಿಸಿದರೆ ಕೆಎಫ್‌ಸಿಸಿ ಅದನ್ನು ಸ್ವಾಗತಿಸುತ್ತದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಅದೇ ದಿನ ಅವರು ನೀಡಿದ್ದ ಮತ್ತೊಂದು ಸಂದರ್ಶನದಲ್ಲಿ, ಅಂತಹ ಸಮಿತಿಯ ರಚನೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದು, ಕೆಎಫ್‌ಸಿಸಿ ಈಗಾಗಲೇ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದರನ್ನು ಪರಿಹರಿಸುತ್ತಿರುವಾಗಲೆ ಹೆಚ್ಚುವರಿ ಸಮಿತಿಯ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಕೆಎಸ್‌ಸಿಸಿ ಕಾಲಾವಕಾಶ ಕೇಳಿರುವ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ಅವರು ಸಮಯಾವಕಾಶ ಕೇಳಿದ್ದು, ನಾವು ಅದಕ್ಕೆ ‘ಓಕೆ’ ಎಂದು ಹೇಳಿದ್ದೇವೆ. ನಾವು ಕೇಳಿರುವ ಪ್ರತಿಯೊಂದು ಅಂಶಗಳನ್ನು ಉಲ್ಲೇಖಿಸಿ ಅವರು ಉತ್ತರಿಸಬೇಕಾಗಿದೆ ಎಂದು ಹೇಳಿದರು.

“ಮೊದಲನೆಯದಾಗ ಕನ್ನಡ ಚಿತ್ರರಂಗದಲ್ಲಿ PoSH ಸಮಿತಿಯೆ ಇಲ್ಲ. ಅಂತಹ ಯಾವುದೆ ನಿಯಮಗಳನ್ನ ಮಾಡಿಕೊಂಡೆ ಇಲ್ಲ. ಅವರಲ್ಲೆ ಬಹಳ ವಿರೋಧಗಳು ಇವೆ. ಇಂತಹ ಸಮಯದಲ್ಲಿ ನಾವು ಸ್ವಲ್ಪ ಕಾಲಾವಕಾಶ ನೀಡಬೇಕಾಗುತ್ತದೆ. ಅದರಲ್ಲಿ ತಪ್ಪೇನಿಲ್ಲ. ನಾವು ಕೇವಲ PoSH ಸಮಿತಿ ರಚನೆ ಬಗ್ಗೆ ಮಾತ್ರ ಕೇಳಿಲ್ಲ. ಇನ್ನಿತರ ಮುಖ್ಯ ವಿಚಾರಗಳನ್ನು ಕೂಡಾ ನಾವು ಉಲ್ಲೇಖಿಸಿದ್ದೇವೆ. ಅದಕ್ಕೆಲ್ಲಾ ಅವರು ಉತ್ತರಿಸಬೇಕಾಗುತ್ತದೆ” ಎಂದು ನಾಗಲಕ್ಷ್ಮಿ ಅವರು ನಾನುಗೌರಿ.ಕಾಂ ಜೊತೆಗೆ ಹೇಳಿದರು.

ವಿಡಿಯೊ ನೋಡಿ:  ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...