Homeಮುಖಪುಟರೈಲು ಹಳಿಗಳಲ್ಲಿ ಕುಕ್ಕರ್ ಬಾಂಬ್ | 6 ದುಷ್ಕರ್ಮಿಗಳಿಗೆ ಜೈಲು ಶಿಕ್ಷೆ ವಿಧಿಸಿದ INA ಕೋರ್ಟ್

ರೈಲು ಹಳಿಗಳಲ್ಲಿ ಕುಕ್ಕರ್ ಬಾಂಬ್ | 6 ದುಷ್ಕರ್ಮಿಗಳಿಗೆ ಜೈಲು ಶಿಕ್ಷೆ ವಿಧಿಸಿದ INA ಕೋರ್ಟ್

- Advertisement -
- Advertisement -

ಪಾಟ್ನಾದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಘೋರಸಾಹನ್ ಬಳಿಯ ರೈಲು ಹಳಿಗಳ ಮೇಲೆ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇಟ್ಟ 2016ರ ಪ್ರಕರಣದಲ್ಲಿ ಆರು ಆರೋಪಿಗಳಿಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿದೆ.ರೈಲು ಹಳಿಗಳಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶನಿವಾರ ತಡರಾತ್ರಿ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ, ಆರೋಪಿಗಳು ಸೆಪ್ಟೆಂಬರ್ 30, 2016 ರಂದು ಪಶ್ಚಿಮ ಚಂಪಾರಣ್ ಜಿಲ್ಲೆಯ ನರ್ಕಟಿಯಾಗಂಜ್‌ನಿಂದ ಬರುತ್ತಿದ್ದ ಪ್ಯಾಸೆಂಜರ್ ರೈಲನ್ನು ಸ್ಫೋಟಿಸುವ ಉದ್ದೇಶದಿಂದ ರೈಲ್ವೇ ಹಳಿಯಲ್ಲಿ ಪ್ರೆಶರ್ ಕುಕ್ಕರ್ ಐಇಡಿ ಇಟ್ಟಿದ್ದರು ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಇದನ್ನೂಓದಿ: ಪ್ರವಾದಿ ಮುಹಮ್ಮದರ ಕುರಿತು ದ್ವೇಷ ಭಾಷಣ : ಯತಿ ನರಸಿಂಗಾನಂದ ಬಂಧನ

ಆದಾಗ್ಯೂ, ಕೆಲವು ಸ್ಥಳೀಯ ನಿವಾಸಿಗಳು ಐಇಡಿಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ದೊಡ್ಡ ದುರ್ಘಟನೆಯೊಂದು ತಪ್ಪಿ ಹೋಗಿತ್ತು.ರೈಲು ಹಳಿಗಳಲ್ಲಿ

ಆರೋಪಿಗಳನ್ನು ಉಮಾಶಂಕರ್ ರಾವುತ್, ಗಜೇಂದ್ರ ಶರ್ಮಾ, ರಾಕೇಶ್ ಕುಮಾರ್ ಯಾದವ್, ಮುಖೇಶ್ ಕುಮಾರ್ ಯಾದವ್, ಮೋತಿಲಾಲ್ ಪಾಸ್ವಾನ್ ಮತ್ತು ರಂಜಯ್ ಕುಮಾರ್ ಶಾ ಅಲಿಯಾಸ್ ರಂಜಯ್ ಎಂದು ಗುರುತಿಸಲಾಗಿದೆ.

ತನಿಖೆಯ ಸಮಯದಲ್ಲಿ ಇಬ್ಬರು ಆರೋಪಿಗಳನ್ನು ಪೂರ್ವ ಚಂಪಾರಣ್ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಇತರ ಇಬ್ಬರನ್ನು ಎನ್ಐಎ ವಿವಿಧ ಸ್ಥಳಗಳಿಂದ ಬಂಧಿಸಿದೆ. ಏತನ್ಮಧ್ಯೆ, ಆರನೇ ಆರೋಪಿ ಫೆಬ್ರವರಿ 2017 ರಲ್ಲಿ ಶರಣಾಗಿದ್ದನು. NIA ಅದೇ ವರ್ಷದ ಜುಲೈನಲ್ಲಿ ಎಲ್ಲಾ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.

ಇದನ್ನೂಓದಿ: ಚುನಾವಣೋತ್ತರ ಸಮೀಕ್ಷೆ | ಹರಿಯಾಣ-ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಸಾಧ್ಯತೆ

ಈ ವರ್ಷದ ಸೆಪ್ಟೆಂಬರ್ 24 ರಂದು, ವಿಶೇಷ ನ್ಯಾಯಾಧೀಶ ಅಭಿಜಿತ್ ಕುಮಾರ್ ನೇತೃತ್ವದ ಎನ್ಐಎ ನ್ಯಾಯಾಲಯವು ಆರೋಪಿಯನ್ನು ತಪ್ಪಿತಸ್ಥರೆಂದು ಘೋಷಿಸಿದ್ದು, ಅಕ್ಟೋಬರ್ 5 ರಂದು ತೀರ್ಪಿಗೆ ದಿನಾಂಕವನ್ನು ನಿಗದಿಪಡಿಸಿತ್ತು. ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ವಸ್ತು ಕಾಯ್ದೆ ಮತ್ತು ರೈಲ್ವೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಅವರ ವಿರುದ್ಧದ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಿದೆ.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಎಲ್ಲಾ ಆರೋಪಿಗಳಿಗೆ ಐದು ವರ್ಷದಿಂದ 12 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5,000 ರಿಂದ ರೂ.12,000 ವರೆಗೆ ದಂಡ ವಿಧಿಸಿದೆ. ಆರೋಪಿಗಳು ದಂಡವನ್ನು ಪಾವತಿಸಲು ವಿಫಲವಾದರೆ, ಅವರ ಜೈಲು ಶಿಕ್ಷೆಯನ್ನು ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಲಾಗುವುದು ಎಂದು ಹೇಳಿದೆ.

ಈ ಮಧ್ಯೆ, ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ. ಒಟ್ಟು ಒಂಬತ್ತು ಆರೋಪಿಗಳ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

ವಿಡಿಯೊ ನೋಡಿ: ಅಟ್ರಾಸಿಟಿ’ ಕಾದಂಬರಿ; ಮನುಷ್ಯ ಲೋಕದ ರೂಪಾಂತರವನ್ನ ಕಟ್ಟುತಿದೆಯಾ? ಡಾ. ಗೀತಾ ವಸಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...