Homeಕರ್ನಾಟಕಮುಸ್ಲಿಂ ಮುಖಂಡ ಮುಮ್ತಾಝ್ ಅಲಿ ಮೃತದೇಹ ಪತ್ತೆ : 6 ಮಂದಿಯ ವಿರುದ್ದ ಎಫ್ಐಆರ್

ಮುಸ್ಲಿಂ ಮುಖಂಡ ಮುಮ್ತಾಝ್ ಅಲಿ ಮೃತದೇಹ ಪತ್ತೆ : 6 ಮಂದಿಯ ವಿರುದ್ದ ಎಫ್ಐಆರ್

- Advertisement -
- Advertisement -

ನಾಪತ್ತೆಯಾಗಿದ್ದ ಮುಸ್ಲಿಂ ಮುಖಂಡ ಮುಮ್ತಾಝ್ ಅಲಿ ಕೃಷ್ಣಾಪುರ ಅವರ ಮೃತದೇಹ ಇಂದು (ಅ.7) ಬೆಳಿಗ್ಗೆ ಮಂಗಳೂರಿನ ಕೂಳೂರು ಸೇತುವೆ ಬಳಿ ನದಿಯಲ್ಲಿ ಪತ್ತೆಯಾಗಿದೆ.

ಮಾಜಿ ಶಾಸಕ ಮೊಯ್ದಿನ್ ಬಾವ ಮತ್ತು ಹಾಲಿ ವಿಧಾನಪರಿಷತ್ ಸದಸ್ಯ ಬಿಎಂ ಫಾರೂಕ್ ಅವರ ಸಹೋದರರಾಗಿರುವ ಉದ್ಯಮಿ ಮುಮ್ತಾಝ್ ಅಲಿ, ಕರಾವಳಿ ಭಾಗದ ಮುಸ್ಲಿಂ ಮುಖಂಡರಾಗಿದ್ದರು. ಹಲವಾರು ಶೈಕ್ಷಣಿಕ, ಸಾಮಾಜಿಕ ಸಂಘ-ಸಂಸ್ಥೆಗಳ ಜೊತೆ ಗುರುತಿಸಿಕೊಂಡಿದ್ದರು.

ಭಾನುವಾರ (ಅ.6) ಮುಂಜಾನೆ ಮನೆಯಿಂದ ಹೊರಟಿದ್ದ ಮುಮ್ತಾಝ್ ಅಲಿ ಅವರು ನಾಪತ್ತೆಯಾಗಿದ್ದರು. ಅವರ ಬಿಎಂಡಬ್ಲ್ಯೂ ಕಾರು ಮಂಗಳೂರು ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 66ರ ಕೂಳೂರು ಸೇತುವೆ ಬಳಿ ಅಪಘಾತವಾದ ರೀತಿಯಲ್ಲಿ ಪತ್ತೆಯಾಗಿತ್ತು.

ಮುಮ್ತಾಝ್ ಅಲಿ ಕಾರು ನಿಲ್ಲಿಸಿ ನದಿಗೆ ಹಾರಿರಬಹುದು ಎಂಬ ಶಂಕೆ ಮೇಲೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ಕರಾವಳಿ ರಕ್ಷಣಾ ಪಡೆಯ ತಂಡಗಳು ಸ್ಥಳೀಯರ ಸಹಾಯದೊಂದಿಗೆ ನದಿಯಲ್ಲಿ ಶೋಧ ಕಾರ್ಯ ನಡೆಸಿತ್ತು. ಇಂದು ಬೆಳಿಗ್ಗೆ 10.40ರ ಸುಮಾರಿಗೆ ಸ್ಥಳೀಯ ಮೀನುಗಾರರ ದೋಣಿಗೆ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಆರು ಮಂದಿಯ ಮೇಲೆ ಎಫ್‌ಐಆರ್

ಮುಮ್ತಾಝ್ ಅಲಿ ಅವರದ್ದು ಆತ್ಮಹತ್ಯೆಯೇ? ಎಂಬುವುದು ತನಿಖೆಯಿಂದ ಖಚಿತವಾಗಬೇಕಿದೆ. ಪ್ರಸ್ತುತ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವರದಿಗಳ ಪ್ರಕಾರ, ಮುಮ್ತಾಝ್ ಅವರನ್ನು ಬೆದರಿಸಿ, ಬ್ಲ್ಯಾಕ್ ಮೇಲೆ ಮಾಡಿ ಲಕ್ಷಾಂತರ ರೂಪಾಯಿ ಹಣ ಕಿತ್ತಿದ್ದಲ್ಲದೆ, ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಮಹಿಳೆ ಸೇರಿದಂತೆ 6 ಜನರ ಮೇಲೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್‌ 173ರ ಅಡಿ ಎಫ್‌ಐಆರ್ ದಾಖಲಾಗಿದೆ.

ಮುಮ್ತಾಝ್ ಅವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತಪಡಿಸಿ ಅವರ ಸಹೋದರ ಹೈದರ್ ಅಲಿ ಎಂಬವರು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಶುಐಬ್, ಸತ್ತಾರ್ ಅವರ ಕಾರು ಚಾಲಕ ಸಿರಾಜ್ ಎಂಬವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.

ತನಿಖೆಗೆ ಆಗ್ರಹಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ 

ಮುಮ್ತಾಝ್ ಅಲಿ ಯಾವತ್ತೂ ಆತ್ಮಹತ್ಯೆಯಂತಹ ಕೃತ್ಯಕ್ಕೆ ಇಳಿಯುವವರೆಂದು ಊಹಿಸಲೂ ಸಾಧ್ಯವಿಲ್ಲ . ಅವರ ಸಾವಿನ ಹಿಂದೆ ನಿಗೂಢತೆಗಳು ಎದ್ದು ಕಾಣುತ್ತಿದ್ದು, ಆದ್ಧರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸರಿಯಾದ ತನಿಖೆ ನಡೆಸಿ, ಸತ್ಯವನ್ನು ಹೊರತರಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಆಗ್ರಹಿಸಿದೆ.

ಇದನ್ನೂ ಓದಿ : PoSH ಸಮಿತಿ ರಚನೆ ಬಗ್ಗೆ 15 ದಿನಗಳ ಕಾಲಾವಕಾಶ ಕೋರಿದ ಕರ್ನಾಟಕ ಫಿಲ್ಮ್ ಚೇಂಬರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...