Homeಮುಖಪುಟಕೇರಳ | ಡಿಎಂಕೆ ಚಳವಳಿ ಪ್ರಾರಂಭಿಸಿದ ಪಿವಿ ಅನ್ವರ್ : ರಾಜಕೀಯ ಪಕ್ಷ ಅಲ್ಲ ಎಂದ...

ಕೇರಳ | ಡಿಎಂಕೆ ಚಳವಳಿ ಪ್ರಾರಂಭಿಸಿದ ಪಿವಿ ಅನ್ವರ್ : ರಾಜಕೀಯ ಪಕ್ಷ ಅಲ್ಲ ಎಂದ ಬಂಡಾಯ ಶಾಸಕ

- Advertisement -
- Advertisement -

ಕೇರಳದ ನಿಲಂಬೂರ್‌ನ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಬಂಡಾಯ ಶಾಸಕ ಪಿವಿ ಅನ್ವರ್ ಅವರು ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿ ಅಕ್ಟೋಬರ್ 6ರ ಭಾನುವಾರದಂದು ‘ಡೆಮಾಕ್ರಟಿಕ್ ಮೂವ್‌ಮೆಂಟ್ ಕೇರಳ’ (ಡಿಎಂಕೆ) ಎಂಬ ತಮ್ಮ ‘ಸಾಮಾಜಿಕ ಚಳುವಳಿ’ಯನ್ನು ಅಧಿಕೃತವಾಗಿ ಪ್ರಾರಂಭಿಸಿದ್ದಾರೆ.

ಆಡಳಿತ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳಿಗೆ ಒಲವು ಹೊಂದಿರುವ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜನರು ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವನ್ನು ಹೋಲುವ ಧ್ವಜ ಮತ್ತು ಸ್ಕಾರ್ಫ್‌ಗಳನ್ನು ಧರಿಸಿದ್ದರು. ಗಮನಾರ್ಹವಾಗಿ, ಈ ಹಿಂದೆ ಅನ್ವರ್ ಅವರು ದ್ರಾವಿಡ ಪಕ್ಷಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿ ಪತ್ರ ಬರೆದಿದ್ದರು.

ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅನ್ವರ್, “ಪೊಲೀಸರು ಉದ್ದೇಶಪೂರ್ವಕವಾಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನಮ್ಮ ಬೆಂಬಲಿಗರ ವಾಹನಗಳನ್ನು ತಡೆದಿದ್ದಾರೆ. ಅವರು ಸಾಧ್ಯವಾಗುವ ಎಲ್ಲಾ ರೀತಿಯಲ್ಲೂ ನಮ್ಮ ಕಾರ್ಯಕ್ರಮ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಡಿಎಂಕೆ ಪಕ್ಷದ ರಾಜ್ಯ ಪದಾಧಿಕಾರಿಗಳ ಮನೆಗೆ ಭೇಟಿ ನೀಡಿ ಚಿನ್ನ ಕಳ್ಳಸಾಗಣೆಯಲ್ಲಿ ತೊಡಗಿರುವ ಬಗ್ಗೆ ಪ್ರಶ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅನ್ವರ್, “ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಲು ಹೋಗಿದ್ದು ರಾಜಕೀಯ ಪಕ್ಷ ಪ್ರಾರಂಭಿಸಲು ಅಲ್ಲ, ಬದಲಾಗಿ ಚಳವಳಿಗೆ ಅವರ ಆಶೀರ್ವಾದ ಪಡೆಯಲು ಎಂದಿದ್ದಾರೆ. ಕೇರಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅನ್ವರ್, ಡಿಎಂಕೆ ಭಾರತದಲ್ಲಿ ಅತ್ಯಂತ ಜಾತ್ಯತೀತ ಪ್ರಜಾಪ್ರಭುತ್ವ ಪಕ್ಷವಾಗಿರುವ ಕಾರಣ ನಾನು ಸ್ಟಾಲಿನ್ ಅವರನ್ನು ಭೇಟಿ ಮಾಡಲು ಹೋಗಿದ್ದೆ, ಈ ನಡುವೆ ಸಿಪಿಐ(ಎಂ)ನ ಒಬ್ಬ ವ್ಯಕ್ತಿ ಸ್ಟಾಲಿನ್ ಅವರನ್ನು ಭೇಟಿಯಾಗಿ, ನನ್ನ ವಿರುದ್ಧ ಹೇಳಿಕೆ ನೀಡುವಂತೆ ಕೋರಿದ್ದಾರೆ” ಎಂದು ಆರೋಪಿಸಿದ್ದಾರೆ. ವರದಿಗಳ ಪ್ರಕಾರ, ಸ್ಟಾಲಿನ್ ಅವರು ಅನ್ವರ್ ಅವರನ್ನು ಭೇಟಿಗೆ ನಿರಾಕರಿಸಿದ್ದಾರೆ.

“ಲೋಕಸಭೆ ಚುನಾವಣೆಯ ಸಂದರ್ಭ ಕೊಯಮತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಕೆ ಅಣ್ಣಾಮಲೈ ವಿರುದ್ಧ ಸ್ಪರ್ಧಿಸಲು ಡಿಎಂಕೆ ಸಿಪಿಐನ ಸೀಟು ಕಿತ್ತುಕೊಂಡಿದ್ದಕ್ಕೆ ತ್ರಿಶೂರ್‌ನಲ್ಲಿ ಬಿಜೆಪಿ ಗೆಲುವಿಗೆ ಕೇರಳ ಮುಖ್ಯಮಂತ್ರಿಯೇ ದಾರಿ ಮಾಡಿಕೊಟ್ಟಿದ್ದಾರೆ ಎಂದು ಪಿಣರಾಯಿ ವಿಜಯನ್‌ರ ಹೆಸರನ್ನು ಉಲ್ಲೇಖಿಸದೆ ಅನ್ವರ್ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಉಪಚುನಾವಣೆಗೆ ಬಿಜೆಪಿ ಮತ್ತು ಸಿಪಿಎಂ ನಡುವೆ ಒಳ ಒಪ್ಪಂದ ಆಗಿದೆ. ಸಿಪಿಐ(ಎಂ) ನೆರವಿನಿಂದ ಪಾಲಕ್ಕಾಡ್ ಕ್ಷೇತ್ರವನ್ನು ಬಿಜೆಪಿ ಭದ್ರಪಡಿಸಿಕೊಳ್ಳಲಿದೆ ಮತ್ತು ಚೇಲಕ್ಕರಾದಲ್ಲಿ ಬಿಜೆಪಿ ಸಿಪಿಐಎಂಗೆ ಮತ ಹಾಕಲಿದೆ” ಎಂದಿದ್ದಾರೆ. ಡಿಎಂಕೆ ಮತ್ತು ಸ್ಟಾಲಿನ್ ಅವರನ್ನು ಅನ್ವರ್ ಹಾಡಿ ಹೊಗಲಿದ್ದಾರೆ.

“ತ್ರಿಶೂರ್ ಪೂರಂ ವೇಳೆ ಉದ್ದೇಶಪೂರ್ವಕವಾಗಿ ವಿವಾದ ಎಬ್ಬಿಸಿದ್ದು ಎಡಿಜಿಪಿ ಅಜಿತ್ ಕುಮಾರ್. ನಾನು ತ್ರಿಶೂರ್ ಪೂರಂ ಸಮಯದಲ್ಲಿ ನಡೆದ ತಂತ್ರಗಳನ್ನು ಎತ್ತಿ ತೋರಿಸಿದೆ. ಅದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಯಿತು ಎಂದೆ. ಆದರೆ, ಎಡಿಜಿಪಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಿಎಂ ಸಿದ್ಧರಿರಲಿಲ್ಲ” ಎಂದು ಹೇಳಿದ್ದಾರೆ.

ತನ್ನ ಹೊಸ ಆಂದೋಲನದ ಪ್ರಣಾಳಿಕೆಯನ್ನು ಅನ್ವರ್ ಬಿಡುಗಡೆ ಮಾಡಿದ್ದು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾಭಿಮಾನ ಮತ್ತು ಫೆಡರಲಿಸಂಗೆ ಒತ್ತು ನೀಡುವ ಮೂಲಕ ಡಿಎಂಕೆ ಪ್ರಣಾಳಿಕೆಗೆ ಸಾಮ್ಯತೆ ಇರುವ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಮಲಬಾರ್ ಪ್ರದೇಶವನ್ನು ದೀರ್ಘಕಾಲದಿಂದ ನಿರ್ಲಕ್ಷಿಸಲಾಗಿದೆ ಎಂದು ಪ್ರಣಾಳಿಕೆಯಲ್ಲಿ ಒತ್ತಿ ಹೇಳಿರುವ ಅನ್ವರ್ ಅವರು, ಕೇರಳದ 14 ಜಿಲ್ಲೆಗಳ ಜೊತೆಗೆ ಹೊಸ ಜಿಲ್ಲೆಯ ರಚನೆ, ಜಾತಿ ಜನ ಗಣತಿ ನಡೆಸುವುದು, ವಲಸೆ ನಿವಾಸಿಗಳಿಗೆ ಮತದಾನದ ಹಕ್ಕು ನೀಡುವುದು, ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನ, ಶಾಲಾ ಅವಧಿ ಕಡಿತಗೊಳಿಸುವುದು, ಕೃಷಿ ಬಜೆಟ್, ಕೃಷಿ ಪ್ರವಾಸೋದ್ಯಮ ಸೇರಿದಂತೆ ಹಲವು ವಿಷಯಗಳ ಭರವಸೆ ನೀಡಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಒನ್ ನೇಷನ್ ಒನ್ ಎಲೆಕ್ಷನ್‌ನಂತಹ ಫೆಡರಲಿಸಂ ಅನ್ನು ನಾಶಪಡಿಸುವ ಕೇಂದ್ರ ಸರ್ಕಾರದ ನೀತಿಗಳನ್ನು ಅವರು ವಿರೋಧಿಸಿದ್ದಾರೆ.

ಮಲಪ್ಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳನ್ನು ವಿಭಜಿಸಿ 15ನೇ ಜಿಲ್ಲೆ ರಚಿಸುವ ಪ್ರಸ್ತಾಪವನ್ನು ಅನ್ವರ್ ಮುಂದಿಟ್ಟಿದ್ದಾರೆ. ಕೇರಳ ಡೆಮಾಕ್ರಟಿಕ್ ಮೂವ್‌ಮೆಂಟ್ (ಡಿಎಂಕೆ) ರಾಜಕೀಯ ಪಕ್ಷ ಅಲ್ಲ ಎಂದಿದ್ದಾರೆ. ಆದರೆ, ಅನ್ವರ್ ಅವರು ಡಿಎಂಕೆ ಮತ್ತು ಎಂ.ಕೆ ಸ್ಟಾಲಿನ್ ಅವರನ್ನು ಹೊಗಳುವುದು ನೋಡಿದ್ರೆ, ತಮಿಳುನಾಡಿನ ಡಿಎಂಕೆಯನ್ನು ಕೇರಳಕ್ಕೆ ವಿಸ್ತರಿಸಿರುವ ಎಲ್ಲಾ ಲಕ್ಷಣ ಕಾಣುತ್ತಿದೆ.

ಇದನ್ನೂ ಓದಿ : ಬಹುಜನರಿಗೆ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ : ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...