Homeಮುಖಪುಟ'ಐಎಎಫ್ ಕೇಳಿದ್ದಕ್ಕಿಂತ ಹೆಚ್ಚಿನ ಸೌಲಭ್ಯಗಳನ್ನು ಸರ್ಕಾರ ನೀಡಿದೆ..'; ಏರ್ ಶೋ ದುರಂತದ ಕುರಿತು ಸ್ಟಾಲಿನ್ ಪ್ರತಿಕ್ರಿಯೆ

‘ಐಎಎಫ್ ಕೇಳಿದ್ದಕ್ಕಿಂತ ಹೆಚ್ಚಿನ ಸೌಲಭ್ಯಗಳನ್ನು ಸರ್ಕಾರ ನೀಡಿದೆ..’; ಏರ್ ಶೋ ದುರಂತದ ಕುರಿತು ಸ್ಟಾಲಿನ್ ಪ್ರತಿಕ್ರಿಯೆ

- Advertisement -
- Advertisement -

ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾನುವಾರ ನಡೆದ  ಏರ್ ಶೋಗಾಗಿ ಭಾರತೀಯ ವಾಯುಪಡೆ (ಐಎಎಫ್‌) ಕೋರಿದ್ದಕ್ಕಿಂತ ಹೆಚ್ಚಿನ ಸೌಲಭ್ಯಗಳನ್ನು ರಾಜ್ಯದ ಅಧಿಕಾರಿಗಳು ಒದಗಿಸಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೋಮವಾರ ಹೇಳಿದ್ದಾರೆ.

ಮರೀನಾ ಬೀಚ್‌ನಲ್ಲಿ ಏರ್ ಫೋರ್ಸ್‌ನ ಏರ್ ಶೋ ನಂತರ ಶಾಖ-ಸಂಬಂಧಿತ ಸಮಸ್ಯೆಗಳಿಂದ ಕನಿಷ್ಠ ಐದು ಜನರು ಸಾವನ್ನಪ್ಪಿದರು. 100 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಮಾನಿಕ ಪ್ರದರ್ಶನದ ನಂತರ ಶಾಖ-ಸಂಬಂಧಿತ ಸಮಸ್ಯೆಗಳಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಸ್ಟಾಲಿನ್ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು.

ಈ ವಿಷಯದ ಕುರಿತು ಮಾತನಾಡಿದ ಸ್ಟಾಲಿನ್, ಜನರು ಹಿಂತಿರುಗುವಾಗ ತಮ್ಮ ವಾಹನಗಳನ್ನು ತಲುಪಲು “ಸಾಕಷ್ಟು ತೊಂದರೆಗಳನ್ನು” ಎದುರಿಸಿದರು. ಈ ಅಂಶಗಳ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು ಮತ್ತು ಭವಿಷ್ಯದಲ್ಲಿ ಅದಕ್ಕೆ ಅನುಗುಣವಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುವುದು” ಎಂದು ಹೇಳಿದರು.

ತಮಿಳುನಾಡು ಸರ್ಕಾರವು ಐಎಎಫ್‌ ಕೋರಿದ್ದನ್ನು ಮೀರಿ ವೈಮಾನಿಕ ಪ್ರದರ್ಶನಕ್ಕೆ ಅಗತ್ಯವಾದ ಆಡಳಿತಾತ್ಮಕ ಸಹಕಾರ ಮತ್ತು ಸೌಲಭ್ಯಗಳನ್ನು ಒದಗಿಸಿದೆ. ಜನರು ತಮ್ಮ ವಾಹನಗಳನ್ನು ತಲುಪಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಪಡೆಯಲು ಸಾಕಷ್ಟು ತೊಂದರೆಗಳನ್ನು ಅನುಭವಿಸಿದರು ಎಂದು ನಾನು ತಿಳಿದುಕೊಂಡಿದ್ದೇನೆ. ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು ಎಂದು ಎಂಕೆ ಸ್ಟಾಲಿನ್ ಹೇಳಿದ್ದಾರೆ.

“ಮುಂದಿನ ಬಾರಿ, ಅಂತಹ ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಿದಾಗ, ಈ ಅಂಶಗಳ ಬಗ್ಗೆ ಹೆಚ್ಚಿನ ಗಮನವನ್ನು ನೀಡಲಾಗುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಲಾಗುವುದು” ಎಂದು ಸ್ಟಾಲಿನ್ ಹೇಳಿದರು.

ಘಟನೆ ಬಗ್ಗೆ ನಟ ಕಮ್ ರಾಜಕಾರಣಿ ಥಲಪತಿ ವಿಜಯ್ ಅವರು ವಾಯುಪಡೆಯ ಕಾರ್ಯಕ್ರಮದ ಸಮಯದಲ್ಲಿ ಸಾವಿಗೆ ಸಂತಾಪ ಸೂಚಿಸಿದರು. ಭವಿಷ್ಯದಲ್ಲಿ ಈ ಪ್ರಮಾಣದ ಯಾವುದೇ ಘಟನೆಯ ಸಂದರ್ಭದಲ್ಲಿ ಸೌಲಭ್ಯಗಳು ಮತ್ತು ಭದ್ರತೆಯ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

“ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮೂಲ ಸೌಕರ್ಯ, ಸಾರಿಗೆ ಸೌಲಭ್ಯ, ಭದ್ರತೆ ಇತ್ಯಾದಿಗಳ ಬಗ್ಗೆ ಸಾಕಷ್ಟು ಗಮನ ಹರಿಸಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ” ಎಂದು ವಿಜಯ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಮೂಲಭೂತ ಸೌಲಭ್ಯಗಳು ಮತ್ತು ಭದ್ರತೆಗಳ ಪರಿಣಾಮಕಾರಿ ಅನುಷ್ಠಾನದ ಮೇಲೆ ಕೇಂದ್ರೀಕರಿಸಲು ತಮಿಳುನಾಡು ಸರ್ಕಾರವನ್ನು ನಾನು ವಿನಂತಿಸುತ್ತೇನೆ” ಎಂದು ಅವರು ಹೇಳಿದರು.

ರಾಜ್ಯದ ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಪ್ರಕಾರ, ಐದು ಜನರು ಶಾಖದ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ.

ಮರೀನಾ ಬೀಚ್ ಬಳಿ ಅಸ್ವಸ್ಥರಾಗಿದ್ದ ಸುಮಾರು 100 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರಲ್ಲಿ ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು 93 ಜನರನ್ನು ಬಿಡುಗಡೆ ಮಾಡಲಾಗಿದೆ.

ಭಾನುವಾರ ಮರೀನಾ ಬೀಚ್‌ನ ಆಕಾಶದಲ್ಲಿ ಭಾರತೀಯ ವಾಯುಪಡೆಯ ವಿಮಾನದ ವೈಮಾನಿಕ ಪ್ರದರ್ಶನವು ಸಾವಿರಾರು ಪ್ರೇಕ್ಷಕರನ್ನು ಆಕರ್ಷಿಸಿತು.

ಸುಮಾರು ಮೂರು ಗಂಟೆಗಳ ಕಾಲ ಜನರು ಸುಡುವ ಬಿಸಿಲಿನಲ್ಲಿ ನಿಂತಿದ್ದರು ಮತ್ತು ಹೆಚ್ಚಿನವರು ಶಾಖದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಛತ್ರಿ ಹಿಡಿದಿದ್ದರು. ಏರ್ ಶೋ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ನಡೆಯಿತಾದರೂ, ಕನಿಷ್ಠ ಒಂದು ಗಂಟೆಗೂ ಮುನ್ನವೇ ಹೆಚ್ಚಿನ ಜನರು ಸ್ಥಳದಲ್ಲಿ ಜಮಾಯಿಸಿದ್ದರು.

ಇದನ್ನೂ ಓದಿ; ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...