Homeಫ್ಯಾಕ್ಟ್‌ಚೆಕ್FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ವಿವಿದೆಡೆ ಕೋಮು ದ್ವೇಷದ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ, ಸೆಪ್ಟೆಂಬರ್ 27, 2024ರಂದು ಕಾಂಗ್ರಾ ಜಿಲ್ಲೆಯ ನಗ್ರೋಟಾದಲ್ಲಿನ ದೇವಾಲಯವೊಂದರ ಶಿವಲಿಂಗ ಭಗ್ನಗೊಂಡ ರೀತಿಯಲ್ಲಿ ಪತ್ತೆಯಾಗಿತ್ತು.

ಈ ಕುರಿತು ಸಿಟಿ ನ್ಯೂಸ್ ಹಿಮಾಚಲ್ ಎಂಬ ಸ್ಥಳೀಯ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ವಿಡಿಯೋ ಕ್ಲಿಪ್‌ವೊಂದು ವ್ಯಾಪಕವಾಗಿ ವೈರಲ್ ಆಗಿತ್ತು. ವಿಡಿಯೋದಲ್ಲಿ ದೇವಸ್ಥಾಯಕ್ಕೆ ಹಾನಿ ಮಾಡಿದ ದೃಶ್ಯವಿತ್ತು. ವಿಡಿಯೋ ಕುರಿತು ವಿವರಿಸಿದ್ದ ಸುದ್ದಿ ಸಂಸ್ಥೆಯ ವರದಿಗಾರ “ಯಾರೋ ದುಷ್ಕರ್ಮಿಗಳ ಕೃತ್ಯ” ಎಂದಿದ್ದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಪೊಲೀಸರು “ಘಟನೆಯ ಕುರಿತು ತನಿಖೆ ಕೈಗೊಂಡಿದ್ದೇವೆ, ಸಿಸಿಟಿವಿ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ” ಎಂದಿದ್ದರು.

ರಾಜ್ಯದಲ್ಲಿ ಜನಸಂಖ್ಯೆಯ ಬದಲಾವಣೆಯೇ ದೇವಸ್ಥಾನ ಅಪವಿತ್ರಗೊಳ್ಳಲು ಕಾರಣ ಎಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಸೆಪ್ಟೆಂಬರ್ 27, 2024ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಲಪಂಥೀಯ ಬಳಕೆದಾರ ರೌಶನ್ ಸಿನ್ಹಾ (@MrSinha) ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳನ್ನು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ದೇವಭೂಮಿ ಹಿಮಾಚಲದಲ್ಲಿ ಹಿಂದೆ ಇದು ಸಾಮಾನ್ಯ ವಿಷಯವಾಗಿರಲಿಲ್ಲ. ಆದರೆ, ಅದು ಹೊಸ ಸಾಮಾನ್ಯ ವಿಷಯವಾಗಿದೆ. ಜನಸಂಖ್ಯಾ ಬದಲಾವಣೆಯು ನಿಜ ಮತ್ತು ಭಯಾನಕವಾಗಿದೆ” ಎಂದು ಬರೆದುಕೊಂಡಿದ್ದರು.

ದೀಪಕ್ ಶರ್ಮಾ (SonofBharat7) ಎಂಬ ಮತ್ತೋರ್ವ ಬಲಂಥೀಯ ಎಕ್ಸ್ ಬಳಕೆದಾರ ಸೆಪ್ಟೆಂಬರ್ 27ರಂದು ವಿಡಿಯೋ ಹಂಚಿಕೊಂಡು ” ಹಿಮಾಚಲ ಪ್ರದೇಶದಲ್ಲಿ 20 ವರ್ಷ ಹಳೆಯ ಶಿವಲಿಂಗ ಧ್ವಂಸಗೊಂಡಿದೆ. ದೇವಭೂಮಿಯು ಇಂತಹ ರಾಕ್ಷಸರಿಂದ ಮುಕ್ತವಾಗಿತ್ತು. ಆದರೆ, ಯಾವಾಗಿನಿಂದ ಮೃಗಗಳು ಇಲ್ಲಿ ತಮ್ಮ ದುಷ್ಟ ಕಣ್ಣುಗಳನ್ನು ನೆಟ್ಟಿತೋ, ಅಂದಿನಿಂದ ಇಂತಹ ಘಟನೆಗಳು ಹೆಚ್ಚುತ್ತಿವೆ. ಹಿಮಾಚಲದ ಜನರೇ.. ಪ್ರತಿ ರಾಕ್ಷಸರಿಗೂ ತಕ್ಕ ಪಾಠ ಕಲಿಸುವವರೆಗೆ ನಿಲ್ಲಬೇಡಿ, ಬೇಕಾದರೆ ಇಡೀ ದೇಶವೇ ನಿಮ್ಮೊಂದಿಗಿದೆ” ಎಂದು ಬರೆದುಕೊಂಡಿದ್ದರು.

ಬಿಜೆಪಿ ನಾಯಕ ಮತ್ತು ಅಸ್ಸಾಂ ನಗರ ವ್ಯವಹಾರಗಳ ಸಚಿವ ಅಶೋಕ್ ಸಿಂಘಾಲ್ (@TheAshokSinghal)ಅವರು ಸೆಪ್ಟೆಂಬರ್ 28ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇಂದು ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ಮಾತೆ ಕಾಮಕ್ಯಳ ಭೂಮಿಯಲ್ಲಿ ಇದು ನಾಳೆಯೂ ನಡೆಯಬಹುದು. ಅದಕ್ಕಾಗಿಯೇ ನಾವು ನಮ್ಮ ಜಾತಿ, ಮತ, ಮಗಳನ್ನು ರಕ್ಷಿಸಿಕೊಳ್ಳಬೇಕು. ನಮ್ಮ ಗುರುತು, ಭೂಮಿ ಮತ್ತು ಪರಂಪರೆಯನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವ ನಮ್ಮ ಸಂಕಲ್ಪದಲ್ಲಿ ದೃಢವಾಗಿ ನಿಲ್ಲಬೇಕು. ಜನಸಂಖ್ಯಾಶಾಸ್ತ್ರವು ವಿಧಿಯಾಗಿದೆ” ಎಂದು ಬರೆದುಕೊಂಡಿದ್ದರು.

ಎಲ್ಲಾ ಪೋಸ್ಟ್‌ಗಳಲ್ಲಿ ಜನಸಂಖ್ಯೆ ಬದಲಾವಣೆ ಎಂದು ಉಲ್ಲೇಖಿಸುವ ಮೂಲಕ, ಇಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ. ಅದುವೇ ಈ ಘಟನೆಗೆ ಕಾರಣ ಎಂದು ಪರೋಕ್ಷವಾಗಿ ಹೇಳಲಾಗಿದೆ.

ದೇವಾಲಯದ ಅಪವಿತ್ರತೆಯ ಸುದ್ದಿ ವೈರಲ್ ಆದ ನಂತರ, ಸೆಪ್ಟೆಂಬರ್ 27, 2024 ರಂದು ಹಲವಾರು ಹಿಂದುತ್ವವಾದಿ ಸಂಘಟನೆಗಳು ನಗ್ರೋಟಾದ ಶಾಸಕ ರಘುಬೀರ್ ಸಿಂಗ್ ಬಾಲಿ ನೇತೃತ್ವದಲ್ಲಿ ಗಾಂಧಿ ಮೈದಾನದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿತ್ತು. ನ್ಯೂಸ್ 24 ಹಿಮಾಚಲದ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಅದನ್ನು ನೇರ ಪ್ರಸಾರ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಶಿವಲಿಂಗ ಧ್ವಂಸಗೊಳಿಸಿ, ದೇವಾಲಯವನ್ನು ಅಪವಿತ್ರಗೊಳಿಸಲಾಗಿದೆ ಎಂಬ ಸುದ್ದಿ ಕೋಮು ಆಯಾಮ ಪಡೆಯುತ್ತಿದ್ದಂತೆ ಕಂಗ್ರಾ ಡಿಎಸ್‌ಪಿ ಅಂಕಿತ್ ಶರ್ಮಾ ಘಟನೆ ಕುರಿತು ಹೇಳಿಕೆ ಕೊಟ್ಟಿದ್ದರು.

ಸಿಸಿಟಿವಿ ಕ್ಯಾಮಾರಗಳ ಪರಿಶೀಲನೆ ಬಳಿಕ, ಶಿವಲಿಂಗವನ್ನು ಧ್ವಂಸಗೊಳಿಸಿ, ದೇವಸ್ಥಾನವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 35 ವರ್ಷದ ನಿಶಾ ದೇವಿ ಎಂಬಾಕೆಯ ಮೇಲೆ ಬಿಎನ್‌ಎಸ್‌ ಸೆಕ್ಷನ್ 298ರ ಅಡಿ ನಗ್ರೋಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಮುಂಜಾನೆ 3:30 ರಿಂದ 4:00 ಗಂಟೆಯ ನಡುವೆ ಈ ಕೃತ್ಯ ನಡೆದಿದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ನಿಶಾ ದೇವಿಯನ್ನು ಯೋಲ್‌ನಲ್ಲಿ ಬಂಧಿಸಿದ್ದಾರೆ. ಮಹಿಳೆ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ. 2020ರಲ್ಲಿ, ಅವರು ಧರ್ಮಶಾಲಾದ ಫತೇಪುರದ ದೇವಸ್ಥಾನದಲ್ಲಿ ಶಿವಲಿಂಗವನ್ನು ಹಾನಿಗೊಳಿಸಿದ್ದರು. ದೇವಸ್ಥಾನಗಳಲ್ಲಿ ವಿಗ್ರಹಗಳಿಗೆ ಹಾನಿ ಮಾಡುತ್ತಲೇ ಇರುತ್ತಾರೆ. ಮಹಿಳೆ ಮಾನಸಿಕವಾಗಿ ವಿಭಿನ್ನ ಸಾಮರ್ಥ್ಯ ಹೊಂದಿರುವವಳು. ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಡಿಎಸ್‌ಪಿ ವಿವರಿಸಿದ್ದರು.

ಅನಂತ್ ಜ್ಞಾನ್ ಎಂಬ ಸ್ಥಳೀಯ ಹಿಂದಿ ಮಾಧ್ಯಮವು ಸೆಪ್ಟೆಂಬರ್ 27, 2024 ರಂದು ಸಿಸಿಟಿವಿ ದೃಶ್ಯವೊಂದನ್ನು ಅಪ್ಲೋಡ್ ಮಾಡಿತ್ತು. ಅದರಲ್ಲಿ ಶಾಲು ಹೊದ್ದು ವ್ಯಕ್ತಿಯೊಬ್ಬರು ಮಧ್ಯರಾತ್ರಿ 03:39 ರಿಂದ 03:44 ರವರೆಗೆ ದೇವಸ್ಥಾನದ ಒಳಗೆ ಮತ್ತು ಹೊರಗೆ ಹೋಗುತ್ತಿರುವುದನ್ನು ನೋಡಬಹುದು “ನಗ್ರೋಟಾದಲ್ಲಿ ಶಿವಲಿಂಗಕ್ಕೆ ಹಾನಿ ಮಾಡಿದ ವ್ಯಕ್ತಿ ಮಹಿಳೆ” ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆಯಲಾಗಿತ್ತು.

ಘಟನೆಯ ಕುರಿತ ಪಂಜಾಬ್ ಕೇಸರಿ ಹಿಮಾಚಲ ಸುದ್ದಿ ಸಂಸ್ಥೆಯ ವರದಿಯನ್ನೂ ನಾವು ಪರಿಶೀಲಿಸಿದ್ದೇವೆ. ಅದರಲ್ಲಿ “ಕಳೆದ ಗುರುವಾರ ರಾತ್ರಿ ಗಾಂಧಿ ಮೈದಾನದ ಬಳಿ ಶಿವಲಿಂಗಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಯಶಸ್ಸನ್ನು ಸಾಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಒಂದು ದಿನದ ನಂತರ ಯೋಲ್ ಬಳಿ ಬಂಧಿಸಿದ್ದಾರೆ. ಆರೋಪಿ ಮಹಿಳೆಯನ್ನು ನಿಶಾದೇವಿ ಎಂದು ಗುರುತಿಸಲಾಗಿದ್ದು, ಅವರು ಯೋಲ್ ಕಡೆಗೆ ಹೋಗುತ್ತಿದ್ದರು. ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದ ಮಹಿಳೆ ಅದೇ ಬಟ್ಟೆಯನ್ನು ಧರಿಸಿ ಕೈಯಲ್ಲಿ ಅದೇ ಚೀಲವನ್ನು ಹಿಡಿದಿರುವುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಅನುಮಾನ ದೃಢಪಟ್ಟಿದೆ” ಎಂದು ತಿಳಿಸಲಾಗಿತ್ತು.

ಒಟ್ಟಿನಲ್ಲಿ, ಶಿವಲಿಂಗ ಧ್ವಂಸ ಮತ್ತು ದೇವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣದ ಆರೋಪಿ ನಿಶಾ ದೇವಿ ಎಂಬಾಕೆಯಾಗಿದ್ದು, ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮ ಇಲ್ಲ.

ಇದನ್ನೂ ಓದಿ : FACT CHECK : ಬೆಂಗಳೂರು ಬಳಿ ಗುಹೆಯಲ್ಲಿ 188 ವರ್ಷದ ವ್ಯಕ್ತಿ ಪತ್ತೆ? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...