Homeಮುಖಪುಟಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ...

ಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ ಪಕ್ಷಗಳು

- Advertisement -
- Advertisement -

ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳ ಫಲಿತಾಂಶ ನಾಳೆ(ಅ.8) ಪ್ರಕಟಗೊಳ್ಳಲಿದೆ. ಅದಕ್ಕೂ ಮುನ್ನ ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಐವರು ಸದಸ್ಯರನ್ನು ನಾಮನಿರ್ದೇನ ಮಾಡಲು ಮುಂದಾಗಿರುವುದು ವಿರೋಧಕ್ಕೆ ಕಾರಣವಾಗಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯರಾಗಿ ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡಲಿರುವ ಐವರು ಕೇಂದ್ರಾಡಳಿತ ಪ್ರದೇಶದಲ್ಲಿ ಮುಂದಿನ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದು ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವಾಲಯದ ಸಲಹೆಯನ್ನು ಆಧರಿಸಿ ಐವರು ಸದಸ್ಯರನ್ನು ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡುವರು. ಈ ಸದಸ್ಯರು ನೂತನ ಸರ್ಕಾರ ರಚನೆಯಲ್ಲಿ ನಿರ್ಣಾಯಕವಾದ ಪಾತ್ರವನ್ನು ವಹಿಸಲಿದ್ದಾರೆ.

ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸರ್ಕಾರ ರಚನೆಗೆ ಮುನ್ನ ಐವರು ಸದಸ್ಯರ ನಾಮನಿರ್ದೇಶನವನ್ನು ವಿರೋಧಿಸಿವೆ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಎಚ್ಚರಿಕೆ ನೀಡಿದೆ.

ಆಗಸ್ಟ್ 2019ರಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.

ಜಮ್ಮು ಮತ್ತು ಕಾಶ್ಮೀರ ಪುನರ್‌ರಚನಾ ಕಾಯ್ದೆ-2019ರ, ಸೆಕ್ಷನ್‌ 14 ಉಪ ನಿಯಮ (30)ರ ಅನ್ವಯ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನಂಟ್‌ ಗವರ್ನರ್ ಅವರು ಇಬ್ಬರನ್ನು ನಾಮನಿರ್ದೇಶನ ಮಾಡಬಹುದು. ಮಹಿಳೆಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ತಾವು ಭಾವಿಸಿದಲ್ಲಿ ಈ ಮೂಲಕ ಆ ಕೊರತೆ ತುಂಬಬಹುದು ಎಂದಿದೆ. ಈ ಕಾಯ್ದೆಗೆ 2023ರಲ್ಲಿ ತಿದ್ದುಪಡಿ ತರಲಾಗಿದೆ.

ತಿದ್ದುಪಡಿ ಬಳಿಕ, 15ಎ ಉಪ ನಿಯಮದ ಅನುಸಾರ, ಲೆಫ್ಟಿನಂಟ್ ಗವರ್ನರ್ ಅವರು ಇಬ್ಬರಿಗಿಂತಲೂ ಹೆಚ್ಚು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗದು. ಇಬ್ಬರಲ್ಲಿ ಒಬ್ಬರು ಕಾಶ್ಮೀರಿ ವಲಸಿಗ ಸಮುದಾಯಕ್ಕೆ ಸೇರಿದ ಮಹಿಳೆ ಆಗಿರಬೇಕು. ಉಪ ನಿಯಮ 15ಬಿ ಅನುಸಾರ ಪಾಕ್‌ ಆಕ್ರಮಿತ ಕಾಶ್ಮೀರ ಭಾಗದಿಂದ ವಲಸೆ ಬಂದಿರುವ ವ್ಯಕ್ತಿಯೊಬ್ಬರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು.

ರಾಜ್ಯಪಾಲರು ಈಗ ನಾಮನಿರ್ದೇಶನ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿರುವ ಐವರು ಸದಸ್ಯರಿಗೂ ಚುನಾಯಿತ ಸದಸ್ಯರಿಗೆ ಇರುವಂತೆಯೇ ಮತದಾನದ ಹಕ್ಕು ಇರುತ್ತದೆ ಎಂದು ಮೂಲಗಳು ತಿಳಿಸಿವೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ಲೆಫ್ಟಿನೆಂಟ್ ಗವರ್ನರ್ ನಡೆಗೆ ಆಕ್ಷೇಪ ವ್ಯಕ್ತಪಡಿಸಿವೆ. ಇದು, ‘ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾದುದು’ ಎಂದು ಟೀಕಿಸಿದೆ.

ನಾಮನಿರ್ದೇಶನ ಮಾಡುವ ನಿರ್ಧಾರವು ಮತಎಣಿಕೆಗೆ ಮೊದಲೇ ಜನಾದೇಶವನ್ನು ತಿರುಚುವ ಕೇಂದ್ರ ಸರ್ಕಾರದ ಯತ್ನವಾಗಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಎಂದು ಟೀಕಿಸಿದ್ದಾರೆ.

ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯ ಬಲ 90 ಆಗಿದೆ. ಐವರ ನಾಮ ನಿರ್ದೇಶನಗೊಂಡಲ್ಲಿ ಸದಸ್ಯ ಬಲ 95ಕ್ಕೆ ಏರಲಿದೆ. ಸರ್ಕಾರ ರಚನೆಗೆ 48 ಸದಸ್ಯರ ಸರಳ ಬಹುಮತ ಅಗತ್ಯವಾಗಿರಲಿದೆ.

ಇದನ್ನೂ ಓದಿ : ಸಾಮಾಜಿಕ ಮಾಧ್ಯಮದಲ್ಲಿ ಭವಿಶ್ ಅಗರ್ವಾಲ್-ಕುನಾಲ್ ಕಮ್ರಾ ಜಟಾಪಟಿ; ಶೇ.8 ರಷ್ಟು ಕುಸಿತ ಕಂಡ ಓಲಾ ಎಲೆಕ್ಟ್ರಿಕ್ ಷೇರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...