HomeಮುಖಪುಟJammu and Kashmir Assembly Elections 2024 | ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶ

Jammu and Kashmir Assembly Elections 2024 | ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶ

- Advertisement -
- Advertisement -

ಮೂರು ಹಂತಗಳಲ್ಲಿ ನಡೆದ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷ ಹೊರ ಹೊಮ್ಮಿದೆ. ರಾಜ್ಯದ ಈ ಹಿಂದಿನ ಆಡಳಿತರೂಢ ಪಕ್ಷವಾದ ಬಿಜೆಪಿ ಮತ್ತು ಪಿಡಿಪಿ ಪಕ್ಷಗಳಿಗೆ ಹಿನ್ನಡೆಯಾಗಿದೆ. Jammu and Kashmir Assembly Elections 2024  ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

ಇಲ್ಲಿಕ್ಲಿಕ್ ಮಾಡಿ

ಈ ವರೆಗೆ ಟ್ರೆಂಡ್ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 42 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮೈತ್ರಿ ಪಕ್ಷವಾದ ಕಾಂಗ್ರೆಸ್ 8 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೊತೆಗೆ ಮೈತ್ರಿಯ ಮತ್ತೊಂದು ಪಕ್ಷವಾದ ಸಿಪಿಐ(ಎಂ) ಕೂಡಾ ತನಗೆ ಸಿಕ್ಕ 1 ಕ್ಷೇತ್ರದಲ್ಲಿ ಅನಾಯಸವಾಗಿ ಮುನ್ನಡೆ ಕಾಯ್ದುಕೊಂಡಿದೆ.

ವಿಡಿಯೊನೋಡಿ: ಜಾತಿ ಗಣತಿ ವರದಿ ಜಾರಿ | ಅ.18ರಂದು ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

90 ಕ್ಷೇತ್ರಗಳಿರುವ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್‌ ಮತ್ತು ಸಿಪಿಐ(ಎಂ) ಮೈತ್ರಿಯು ಒಟ್ಟು 51 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 30 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ರಾಜ್ಯದ ಮಾಜಿ ಆಡಳಿತರೂಢ ಪಕ್ಷವಾದ ಪಿಡಿಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೊತೆಗೆ ಪಕ್ಷೇತರರು 6 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. Jammu and Kashmir Assembly

ನ್ಯಾಷನಲ್ ಕಾನ್ಫರೆನ್ಸ್  42
BJP                                30
ಕಾಂಗ್ರೆಸ್                        08
ಪಕ್ಷೇತರ                         06
PDP                                03
ಸಿಪಿಐ(ಎಂ)                     01

ಜಮ್ಮು ಕಾಶ್ಮೀರದ ವಿಶೇಷಾಧಿಕಾರ ಆರ್ಟಿಕಲ್ 370 ರದ್ದತಿ ಮತ್ತು ಹಿಂದಿನ ರಾಜ್ಯದ ವಿಭಜನೆಯ ನಂತರ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ. 90 ವಿಧಾನಸಭಾ ಕ್ಷೇತ್ರಗಳ ಪೈಕಿ 9 ಪರಿಶಿಷ್ಟ ಪಂಗಡಕ್ಕೆ ಮತ್ತು 7 ಪರಿಶಿಷ್ಟ ಜಾತಿಗೆ ಮೀಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಕೊನೆಯ ವಿಧಾನಸಭೆ ಚುನಾವಣೆ 2014 ರಲ್ಲಿ ನಡೆದಿದ್ದವು. ಈ ವೇಳೆ ಪಿಡಿಪಿ ಮತ್ತು ಬಿಜೆಪಿ ಸಮ್ಮಿಶ್ರ ಆಡಳಿತ ನಡೆಸಿದ್ದವು. ಅದರ ನಂತರ ಸರ್ಕಾರ ವಿಸರ್ಜನೆಯಾಗಿ ರಾಜ್ಯಪಾಲರ ಆಡಳಿತ ರಾಜ್ಯದಲ್ಲಿ ಹೇರಲ್ಪಟ್ಟಿದ್ದವು. ತರುವಾಯ, 2019 ರಲ್ಲಿ ರಾಷ್ಟ್ರಪತಿ ಆಳ್ವಿಕೆಯ ಅಡಿಯಲ್ಲಿ, ಕೇಂದ್ರ ಸರ್ಕಾರವು ರಾಜ್ಯವನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ಪುನರ್ರಚಿಸಿತು.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...