Homeಮುಖಪುಟತಮಿಳುನಾಡು | ಜಾತಿ ತಾರತಮ್ಯ ಆರೋಪ : ಡಿಎಂಕೆ ಬೆಂಬಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

ತಮಿಳುನಾಡು | ಜಾತಿ ತಾರತಮ್ಯ ಆರೋಪ : ಡಿಎಂಕೆ ಬೆಂಬಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಆರೋಪಿಸಿ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಪ್ಪಕುಡಿ ಗ್ರಾಮ ಪಂಚಾಯತ್‌ನ ಡಿಎಂಕೆ ಬೆಂಬಲಿತ ಅಧ್ಯಕ್ಷೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ ಎರಡು ವಾರಗಳಲ್ಲಿ ತಮಿಳುನಾಡಿನ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರು ಜಾತಿ ತಾರತಮ್ಯ ಆರೋಪ ಮಾಡಿರುವ ಬಗ್ಗೆ ಸುದ್ದಿಯಾಗಿರುವ ಎರಡನೇ ಪ್ರಕರಣ ಇದಾಗಿದೆ.

ಪಪ್ಪಕುಡಿ ಪಂಚಾಯತ್‌ನ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಅಧ್ಯಕ್ಷೆ ಪೂಂಗೊಥೈ ಶಶಿಕುಮಾರ್ ಅವರು ಇತ್ತೀಚೆಗೆ ತಿರುನಲ್ವೇಲಿ ಜಿಲ್ಲಾಧಿಕಾರಿ ಡಾ. ಕೆಪಿ ಕಾರ್ತಿಕೇಯನ್ ಮತ್ತು ಡಿಎಂಕೆ ನಾಯಕರಿಗೆ ತನ್ನ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅತಿ ಹಿಂದುಳಿದ ವರ್ಗದವರಾದ ಪಂಚಾಯತ್ ಉಪಾಧ್ಯಕ್ಷರು ಜಾತಿ ಆಧಾರಿತ ತಾರತಮ್ಯ ಮಾಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.

ಪೂಂಗೊಥೈ ಶಶಿಕುಮಾರ್ ಅವರು ಜಾತಿ ತಾರತಮ್ಯ ಆರೋಪಿಸಿ ಎರಡು ವರ್ಷಗಳ ಹಿಂದೆ ತಮ್ಮ ಹುದ್ದೆಯನ್ನು ತ್ಯಜಿಸಲು ಮುಂದಾಗಿದ್ದರು. ಅಂದಿನ ಕಲೆಕ್ಟರ್ ವಿ ವಿಷ್ಣು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಆದರೆ, ಡಿಎಂಕೆ ಪಕ್ಷದ ನಾಯಕತ್ವವು ಪೂಂಗೊಥೈ ಅವರ ಮನವೊಲಿಸಿ ಮುಂದುವರೆಯಲು ಹೇಳಿತ್ತು. ಆದರೆ, ಈಗ ದೌರ್ಜನ್ಯ ಹೆಚ್ಚಾಗಿರುವ ಕಾರಣ ಪೂಂಗೊಥೈ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

“ಪಂಚಾಯತ್ ಅಧ್ಯಕ್ಷೆ ಪೂಂಗೊಥೈ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಅದರಲ್ಲಿ, ಅಧ್ಯಕ್ಷರು, ಅವರ ಪತಿ ಮತ್ತು ಉಪಾಧ್ಯಕ್ಷರ ನಡುವಿನ ಜಗಳದ ಆರೋಪಗಳಿವೆ. ವಿವರವಾದ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಪೂರ್ಣಗೊಂಡ ಬಳಿಕವಷ್ಟೇ ಅವರ ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯ” ಎಂದು ಜಿಲ್ಲಾಧಿಕಾರಿ ಡಾ. ಕೆಪಿ ಕಾರ್ತಿಕೇಯನ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾವು ಪೂಂಗೊಥೈಯನ್ನು ಸಂಪರ್ಕಿಸಿದ್ದು, ಅವರ ಪತಿ ಶಶಿಕುಮಾರ್ ಕರೆ ಸ್ವೀಕರಿಸಿ “ಆಕೆ ಖಿನ್ನತೆಗೆ ಒಳಗಾಗಿದ್ದಾಳೆ. ಮಾತನಾಡುವ ಸ್ಥಿತಿಯಲ್ಲಿ ಇಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪಂಚಾಯತ್ ಉಪಾಧ್ಯಕ್ಷ ಹಾಗೂ ಡಿಎಂಕೆ ಯೂನಿಯನ್ ಕಾರ್ಯದರ್ಶಿ ಮರಿವಣ್ಣಮುತ್ತು ಅವರು ಜಾತಿಯ ಕಾರಣಕ್ಕಾಗಿ ಪೂಂಗೊಥೈ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಆಕೆಗೆ ಕಚೇರಿಯಲ್ಲಿ ಕೂರಲು ಸರಿಯಾದ ಕುರ್ಚಿ, ಮೇಜು ಕೂಡ ನೀಡಿಲ್ಲ. ಇತ್ತೀಚೆಗೆ ಮರಿವಣ್ಣಮುತ್ತು ಅವರ ಬೆಂಬಲಿಗರೊಬ್ಬರು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಅಧ್ಯಕ್ಷೆ ಎಂದು ಹೇಳಿಕೊಂಡಿದ್ದರು. ನಮ್ಮ ಪಕ್ಷದ ಅಧ್ಯಕ್ಷ ಎಂಕೆ ಸ್ಟಾಲಿನ್, ಸಂಸದೆ ಕನಿಮೊಳಿ ಮತ್ತು ಪಕ್ಷದ ಜಂಟಿ ಸಂಘಟನಾ ಕಾರ್ಯದರ್ಶಿ ಅನ್ಬಗಂ ಕಲೈ ಅವರ ಬಳಿ ನಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ” ಎಂದು ಶಶಿಕುಮಾರ್ ವಿವರಿಸಿದ್ದಾರೆ ಎಂದು ವರದಿ ಹೇಳಿದೆ.

ಆದರೆ, ಎಲ್ಲಾ ಆರೋಪಗಳನ್ನು ಪಂಚಾಯತ್ ಉಪಾಧ್ಯಕ್ಷ ಮರಿವಣ್ಣಮುತ್ತು ನಿರಾಕರಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಅವರು “ನಾನು ಕಳೆದ 25 ವರ್ಷಕ್ಕಿಂತ ಹೆಚ್ಚು ಕಾಲ ಡಿಎಂಕೆಯ ಯೂನಿಯನ್ ಕಾರ್ಯದರ್ಶಿಯಾಗಿದ್ದೇನೆ ಮತ್ತು ಎರಡು ಬಾರಿ ಪಪ್ಪಕುಡಿ ಪಂಚಾಯತ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಸಾಮಾಜಿಕ ನ್ಯಾಯದ ತತ್ವವನ್ನು ಅನುಸರಿಸುತ್ತೇನೆ. ಪೂಂಗೊಥೈ ಅಥವಾ ಯಾರನ್ನೂ ಅವರ ಜಾತಿಯ ಆಧಾರದ ಮೇಲೆ ಕೆಟ್ಟದಾಗಿ ನಡೆಸಿಕೊಂಡಿಲ್ಲ” ಎಂದಿದ್ದಾರೆ.

“ಕೌನ್ಸಿಲರ್‌ಗಳು ಯಾವುದೇ ಆರ್ಥಿಕ ಪ್ರತಿಫಲವನ್ನು ನಿರೀಕ್ಷಿಸದೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಆದರೆ, ಅವರ ಪತಿ ಅವರ ಅಧಿಕೃತ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕೆಲವು ಕೈಗಾರಿಕೆಗಳಿಂದ ಹಣಕ್ಕಾಗಿಯೂ ಬೇಡಿಕೆ ಇಟ್ಟಿದ್ದರು. ನಾನು ಅವರ ಕ್ರಮವನ್ನು ವಿರೋಧಿಸಿದ್ದರಿಂದ ಅವರು ಈಗ ನನ್ನ ವಿರುದ್ಧ ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ” ಎಂದು ಮರಿವಣ್ಣಮುತ್ತು ಹೇಳಿದ್ದಾರೆ.

ಎರಡು ವಾರದೊಳಗೆ ಎರಡು ಪ್ರಕರಣ :

ಕಳೆದ ಎರಡು ವಾರಗಳಲ್ಲಿ ತಮಿಳುನಾಡಿ ಪಂಚಾಯತ್ ಅಧ್ಯಕ್ಷರೊಬ್ಬರು ಜಾತಿ ದೌರ್ಜನ್ಯ ಆರೋಪದ ಮಾಡಿದ ಎರಡನೇ ಪ್ರಕರಣ ಇದಾಗಿದೆ.

ಅಕ್ಟೋಬರ್ 3ರಂದು ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದರು.

ಆ ಕುರಿತ ವರದಿ ಇಲ್ಲಿದೆ- ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...