HomeಮುಖಪುಟHaryana Assembly Elections 2024 | ಒಳಜಗಳ ನಿಬಾಯಿಸುವಲ್ಲಿ ಹೈಕಮಾಂಡ್ ವಿಫಲ; ಹೀನಾಯ ಹಿನ್ನಡೆಗೆ ಕಾರಣಗಳೇನು?

Haryana Assembly Elections 2024 | ಒಳಜಗಳ ನಿಬಾಯಿಸುವಲ್ಲಿ ಹೈಕಮಾಂಡ್ ವಿಫಲ; ಹೀನಾಯ ಹಿನ್ನಡೆಗೆ ಕಾರಣಗಳೇನು?

- Advertisement -
- Advertisement -

ಪ್ರಸ್ತುತ ಹರಿಯಾಣದಲ್ಲಿ ರೈತರ ಹೋರಾಟ ಉತ್ತುಂಗದಲ್ಲಿದೆ. ಬಿಜೆಪಿ ವಿರುದ್ಧ ಅನ್ನದಾತರು ಸಿಡಿದೆದ್ದಿದ್ದು, 2024ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂದು ಹಲವು ವಿಶ್ಲೇಷಣೆಗಳು ಬಂದಿದ್ದವು. ಆಡಳಿತ ಪಕ್ಷದ ವಿರುದ್ಧದ ಆಡಳಿತ ವಿರೋಧಿ ಅಲೆಯ ನಡುವೆ ಬಹುಮತ ಪಡೆಯುವ ಪೂರಕ ವಾತಾವರಣ ಇದ್ದಾಗಲೂ ಕಾಂಗ್ರೆಸ್ ಪಕ್ಷವು ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಹೇಳಲಾಗುತ್ತಿದೆ.

ಹರಿಯಾಣ ಚುನಾವಣೆಯ ಮತ ಎಣಿಕೆಯಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚು ಮುನ್ನಡೆ ಸಾಧಿಸಿತ್ತು. ದೆಹಲಿಯ ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ಕಾರ್ಯಕರ್ತರು ಜಲೇಬಿ ಹಂಚಿ, ಡೊಳ್ಳುಗಳನ್ನು ಭಾರಿಸಿ ಸಂಭ್ರಮಾಚರಣೆ ನಡೆಸಿದರು. ನಿರ್ಜನವಾಗಿದ್ದ ಬಿಜೆಪಿ ಕಚೇರಿಯ ವಾತಾವರಣ ಈಗ ಸಂಪೂರ್ಣ ಬದಲಾಗಿದೆ.

10 ಗಂಟೆ ಬಳಿಕ, ಟ್ರೆಂಡ್ ಬದಲಾಗುವ ಮೂಲಕ ಬಿಜೆಪಿ ಆಟಕ್ಕೆ ಮರಳಿತು. ಇನ್ನೂ ಎರಡು ಗಂಟೆಗಳ ನಂತರ, ಬಿಜೆಪಿ ದೃಢವಾಗಿ ಮುನ್ನಡೆ ಕಾಯ್ದುಕೊಂಡಿದೆ. ಹರಿಯಾಣದಲ್ಲಿ ತನ್ನ ಅತಿದೊಡ್ಡ ಗೆಲುವಿನತ್ತ ಮುನ್ನಡೆದಿದೆ. ಆಡಳಿತ ಪಕ್ಷವು ಎಕ್ಸಿಟ್ ಪೋಲ್ ಭವಿಷ್ಯವಾಣಿಗಳನ್ನು ವ್ಯಾಪಕ ಅಂತರದಿಂದ ಧಿಕ್ಕರಿಸಿದೆ. ಇದೀಗ ಬಿಜೆಪಿ ಕೇಂದ್ರ ಕಚೇರಿ ಲಡ್ಡೂ, ಜಿಲೇಬಿ ಹಾಗೂ ಡೊಳ್ಳುಗಳಿಂದ ಗಿಜಿಗುಡುತ್ತಿದೆ. ಎಣಿಕೆಯ ಹಲವಾರು ಸುತ್ತುಗಳು ಇನ್ನೂ ಬಾಕಿ ಉಳಿದಿವೆ. ಆದರೆ, ಚಿತ್ರಣ ಬಹಳಷ್ಟು ಬದಲಾಗುವ ಸಾಧ್ಯತೆಯಿಲ್ಲ ಎಂದು ಹೇಳಲಾಗುತ್ತಿದೆ.

ಒಳ ಜಗಳ ನಿಭಾಯಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿಫಲ:

2019 ರ ಚುನಾವಣೆಯಲ್ಲಿ ಹರಿಯಾಣದಲ್ಲಿ ಕಾಂಗ್ರೆಸ್ 31 ಸ್ಥಾನಗಳನ್ನು ಗೆದ್ದಿದೆ. ಪ್ರಸ್ತುತ ಅಷ್ಟು ಸಂಖ್ಯೆಗಳನ್ನು ದಾಟಿದ್ದರೂ, ಪುನರಾಗಮನವನ್ನು ಸಕ್ರಿಯಗೊಳಿಸಲು ಪಕ್ಷವು ತನ್ನ ಕಾರ್ಯಕ್ಷಮತೆಯನ್ನು ಗಣನೀಯವಾಗಿ ಸುಧಾರಿಸಿಲ್ಲ.

ಸಳೊಗೆ ಪ್ರಮುಖ ಅಂಶವೆಂದರೆ, ಪಕ್ಷದ ಆಂತರಿಕ ಕಚ್ಚಾಟ ಮತ್ತು ಅದರ ಉನ್ನತ ನಾಯಕರು ಅಧಿಕಾರಕ್ಕಾಗಿ ಬಹಿರಂಗವಾಗಿ ಕಿತ್ತಾಡಿದ್ದು. ಚುನಾವಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಗೆಲುವು ಖಚಿತ ಎಂದು ಹೇಳಿಕೊಂಡು ಮುಖ್ಯಮಂತ್ರಿ ಹುದ್ದೆಗಾಗಿ ಕಸರತ್ತು ಆರಂಭಿಸಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಮತ್ತು ಹಿರಿಯ ನಾಯಕಿ ಕುಮಾರಿ ಸೆಲ್ಜಾ ನಡುವಿನ ಅಧಿಕಾರದ ಜಗಳ ಮುಕ್ತವಾಗಿತ್ತು, ತೆರೆಮರೆಯಲ್ಲಿ ನಡೆದ ಹೆಚ್ಚಿನ ಹಾನಿಯ ನಿಯಂತ್ರಣದ ಅಗತ್ಯವಿತ್ತು.

ಚುನಾವಣೆಯ ಪೂರ್ವದಲ್ಲಿ ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಹೆಣಗಾಡುತ್ತಿತ್ತು. ಅಭ್ಯರ್ಥಿಗಳು ಅಥವಾ ಮೈತ್ರಿಗಳನ್ನು ನಿರ್ಧರಿಸುವಲ್ಲಿ ಹೂಡಾ ಅವರಿಗೆ ಮುಕ್ತ ಹಸ್ತವನ್ನು ನೀಡಲಾಯಿತು. ಹೈಕಮಾಂಡ್‌ನ ಈ ನಿರ್ಧಾರ ಕೆಲಸ ಮಾಡಲಿಲ್ಲ ಎಂದು ಫಲಿತಾಂಶಗಳು ತೋರಿಸುತ್ತವೆ.

ಮತ ಹಂಚಿಕೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಸ್ವಲ್ಪ ಮುಂದಿದೆ. ಆದರೆ ಅದನ್ನು ಸ್ಥಾನಗಳಾಗಿ ಪರಿವರ್ತಿಸುವಲ್ಲಿ ಅದು ಹೆಚ್ಚು ಯಶಸ್ವಿಯಾಗಲಿಲ್ಲ ಎಂದು ಇತ್ತೀಚೆಗಿನ ಟ್ರೆಂಡ್ ತೋರಿಸುತ್ತವೆ. ಹಲವಾರು ಸ್ಥಾನಗಳಲ್ಲಿ, ಅಂತರವು ತುಂಬಾ ಕಡಿಮೆಯಾಗಿದೆ, ಇದು ಪ್ರಾದೇಶಿಕ ಪಕ್ಷಗಳು ಮತ್ತು ಸ್ವತಂತ್ರರು ಹರ್ಯಾಣದಲ್ಲಿ ಆಡಳಿತ ವಿರೋಧಿ ಮತಗಳನ್ನು ಪಡೆದಿರುವುದು ಸೂಚಿಸುತ್ತದೆ; ಇದು ಬಿಜೆಪಿಗೆ ಲಾಭದಾಯಕವಾಗಿದೆ.

ಆದರೆ, ಈ ಬಾರಿಯ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಹೆಚ್ಚಿನ ಸ್ಥಾನ ಗಳಿಸುವಲ್ಲಿ ವಿಫಲವಾಗಿವೆ. ಪ್ರಸ್ತುತ ಐಎನ್‌ಎಲ್‌ಡಿ ಮತ್ತು ಬಿಎಸ್‌ಪಿ ತಲಾ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದು, ನಾಲ್ವರು ಪಕ್ಷೇತರರು ಮುಂದಿದ್ದಾರೆ.

ಜಾಟ್ ವಿರೋಧಿ ಬಲವರ್ಧನೆ:

ಹೂಡಾ ನೇತೃತ್ವದ ಕಾಂಗ್ರೆಸ್ ಜಾಟ್ ಮತಗಳ ಮೇಲೆ ಕೇಂದ್ರೀಕರಿಸಿದರೆ, ಬಿಜೆಪಿ ಪರವಾಗಿ ಜಾಟ್-ಯೇತರ ಮತಗಳ ಪ್ರತಿ ಕ್ರೋಢೀಕರಣವು ಸ್ಪಷ್ಟವಾಗಿ ಕಂಡುಬಂದಿದೆ.  ಕಾಂಗ್ರೆಸ್ ಗೆಲುವು ರಾಜ್ಯದಲ್ಲಿ ಪ್ರಭಾವಿ ಸಮುದಾಯದ ಹಿನ್ನಡೆಯನ್ನು ಸೂಚಿಸುತ್ತದೆ. ಬದಲಾಗಿ, ಇತರ ಸಮುದಾಯಗಳು ಆಡಳಿತ ಪಕ್ಷದ ಪರವಾಗಿ ಅಗಾಧವಾಗಿ ಮತ ಚಲಾಯಿಸಿದಂತಿದೆ.

ಬಿಜೆಪಿಯ ನಗರ ಪ್ರಾಬಲ್ಯ:

ಕಳೆದ ದಶಕದಲ್ಲಿ, ಹರಿಯಾಣದ ನಗರ ಪ್ರದೇಶಗಳಾದ ಗುರ್ಗಾಂವ್ ಮತ್ತು ಫರಿದಾಬಾದ್‌ನಲ್ಲಿ ಬಿಜೆಪಿ ಬೆಂಬಲವನ್ನು ಕ್ರೋಢೀಕರಿಸಿದೆ. ಕಾಂಗ್ರೆಸ್ ಗ್ರಾಮಾಂತರ ಪ್ರದೇಶವನ್ನು ಕ್ಲೀಸ್‌ಸ್ವೀಪ್ ಮಾಡಲಿದೆ ಎಂದು ನಿರೀಕ್ಷಿಸಿತ್ತು. ಆದರೆ, ಅದು ಎಣಿಸಿದಂತೆ ನಡೆದಂತೆ ಕಾಣುತ್ತಿಲ್ಲ. ಗುರ್ಗಾಂವ್, ಫರಿದಾಬಾದ್ ಮತ್ತು ಬಲ್ಲಭಗಢದಲ್ಲಿ ಬಿಜೆಪಿ ಈವರೆಗೆ ಮುನ್ನಡೆಯಲ್ಲಿದೆ.

ಇದನ್ನೂ ಓದಿ; Haryana Assembly Elections 2024 | ಹರಿಯಾಣ ಚುನಾವಣಾ ಫಲಿತಾಂಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...