Homeಮುಖಪುಟಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ನಿರೀಕ್ಷೆ ಮೂಡಿಸಿದ್ದ ರಶೀದ್-ಆಜಾದ್ ಪಕ್ಷಗಳಿಂದ ಕಳಪೆ ಪ್ರದರ್ಶನ

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ನಿರೀಕ್ಷೆ ಮೂಡಿಸಿದ್ದ ರಶೀದ್-ಆಜಾದ್ ಪಕ್ಷಗಳಿಂದ ಕಳಪೆ ಪ್ರದರ್ಶನ

- Advertisement -
- Advertisement -

ವಿಶೇಷ ಸ್ಥಾನಮಾನ ರದ್ಧತಿಯ ಬಳಿಕ ತನ್ನ ಮೊದಲ ವಿಧಾನಸಭೆ ಚುನಾವಣೆಯನ್ನು ನೋಡುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು ಮುಂದಿನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ಆದರೆ, ಗೆಲುವಿನ ಪ್ರಮಾಣವು ಸಣ್ಣ ಪಕ್ಷಗಳನ್ನು ಮೀರಿಸಿದೆ.

ಈ ವರ್ಷದ ಚುನಾವಣೆಯಲ್ಲಿ ಜಮಾತ್-ಎ-ಇಸ್ಲಾಮಿ ಚುನಾವಣಾ ಪ್ರಕ್ರಿಯೆಯಲ್ಲಿ ದಶಕಗಳ ನಂತರ ಮರುಪ್ರವೇಶವನ್ನು ಕಂಡಿತು. ಈ ಚುನಾವಣೆಯಲ್ಲಿ ಅದರ ಅಭ್ಯರ್ಥಿಗಳು ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದರ ಮೇಲೆ ಎಲ್ಲರ ಕಣ್ಣುಗಳಿದ್ದವು. ಲೋಕಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದ ಇಂಜಿನಿಯರ್ ರಶೀದ್ ಅವರ ಅವಾಮಿ ಇತ್ತೆಹಾದ್ ಪಕ್ಷವು ಜಮಾತ್‌ನೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಕುತೂಹಲ ಮತ್ತಷ್ಟು ಹೆಚ್ಚಾಯಿತು.

ನಾಮಪತ್ರ ಸಲ್ಲಿಕೆ ವೇಳೆ ಜಮಾತ್ ಬೆಂಬಲಿತ 10 ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದರು. ಆದರೆ, ಕೆಲವರು ಕಣದಿಂದ ಹಿಂದೆ ಸರಿದಿದ್ದರು. ಎಲ್ಲ ಜಮಾತ್ ಬೆಂಬಲಿತ ಅಭ್ಯರ್ಥಿಗಳು ತಮ್ಮತಮ್ಮ ಕ್ಷೇತ್ರಗಳಲ್ಲಿ ಹಿಂದುಳಿದಿದ್ದಾರೆ ಎಂದು ಫಲಿತಾಂಶ ತೋರಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಗೆಲುವಿನ ಹೊರತಾಗಿಯೂ, ಇಂಜಿನಿಯರ್ ರಶೀದ್ ಅವರು ವಿಧಾನಸಭೆ ಚುನಾವಣೆಯಲ್ಲಿ ಛಾಪು ಮೂಡಿಸಲು ಸಾಧ್ಯವಾಗಲಿಲ್ಲ. ಅವರ ಪಕ್ಷದ ಬೆಂಬಲಿತ ಅಭ್ಯರ್ಥಿ, ಅವರ ಸಹೋದರ ಖುರ್ಷೀದ್ ಅಹ್ಮದ್ ಶೇಖ್ ಮುನ್ನಡೆ ಸಾಧಿಸಿದ್ದರು.

ಕಳಪೆ ಪ್ರದರ್ಶನ ಕೊಟ್ಟ ಗುಲಾಂ ನಬಿ ಆಜಾದ್ ಪಕ್ಷದ

ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್‌ನಿಂದ ಬೇರ್ಪಟ್ಟ ನಂತರ 2022 ರಲ್ಲಿ ಸ್ಥಾಪನೆಯಾದ ಡೆಮಾಕ್ರಟಿಕ್ ಪ್ರೋಗ್ರೆಸ್ಸಿವ್ ಆಜಾದ್ ಪಕ್ಷವು ಸಹ ಕಳಪೆ ಪ್ರದರ್ಶನ ನೀಡಿದೆ. ಸ್ಪರ್ಧಿಸಿದ ಎಲ್ಲ ಸ್ಥಾನಗಳಲ್ಲಿ ಹಿಂದುಳಿದಿದೆ. ತನ್ನ ಚುನಾವಣಾ ಚೊಚ್ಚಲವಾದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹಾಕಿದ್ದ ಎಲ್ಲ ಮೂರು ಕ್ಷೇತ್ರಗಳನ್ನು ಕಳೆದುಕೊಂಡ ನಂತರ ಪಕ್ಷವು ಈಗಾಗಲೇ ಅಸ್ತವ್ಯಸ್ತವಾಗಿದೆ. ಲೋಕಸಭೆ ಸೋಲಿನ ಬಳಿಕ ಅದರ ಅನೇಕ ನಾಯಕರು ಪಕ್ಷ ತ್ಯಜಿಸಿದ್ದರು.

ಈ ಎಲ್ಲ ವೈಫಲ್ಯಗಳಲ್ಲಿನ ಸಾಮಾನ್ಯ ವಿಷಯವೆಂದರೆ, ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟದ ಮತಗಳನ್ನು ತನ್ನತ್ತ ಸೆಳೆಯಲು ಬಿಜೆಪಿಯು ಈ ರಾಜಕೀಯ ಪಕ್ಷಗಳನ್ನು ಬೆಂಬಲಿಸಿದೆ ಎಂಬ ಮಾತುಗಳು ಕೇಳಿ ಬಂದಿವೆ. ಏಕೆಂದರೆ, ಇಂಜಿನಿಯರ್ ರಶೀದ್ ಅವರು ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಾಗ ಈ ಗಾಳಿಸುದ್ದಿಯ ಗ್ರಹಿಕೆಯನ್ನು ಮತ್ತಷ್ಟು ಬಲಪಡಿಸಿತು.

ಕೇವಲ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಮೆಹಬೂಬಾ ಮುಫ್ತಿ ಅವರ ಪಿಡಿಪಿಗೆ ಬಿಜೆಪಿಯ ಆಪ್ತತೆಯ ಕುರಿತ ಊಹಾಪೋಹಗಳು ಕೂಡ ಘಾಸಿಗೊಳಿಸಿವೆ. ಮುಫ್ತಿ ಅವರ ಪುತ್ರಿ ಇಲ್ತಿಜಾ ಕೂಡ ಶ್ರೀಗುಫ್ವಾರಾ-ಬಿಜ್‌ಬೆಹರಾ ಕ್ಷೇತ್ರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ.

2018 ರಲ್ಲಿ ಮೈತ್ರಿ ಕುಸಿಯುವವರೆಗೂ ಮೆಹಬೂಬಾ ಮುಫ್ತಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರವನ್ನು ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ಒಂದು ವರ್ಷದ ನಂತರ ತೆಗೆದುಹಾಕಲಾಯಿತು. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರಾಂತ್ಯಗಳನ್ನಾಗಿ ರಾಜ್ಯವನ್ನು ಎರಡು ಒಕ್ಕೂಟಗಳಾಗಿ ವಿಂಗಡಿಸಲಾಯಿತು.

ಇದನ್ನೂ ಓದಿ; ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...