Homeಮುಖಪುಟಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್...

ಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್ ಚೌಟಾಲಾಗೆ ಮುಖಭಂಗ

- Advertisement -
- Advertisement -

2019 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಿಂಗ್‌ಮೇಕರ್ ಆಗಿದ್ದ ಜನನಾಯಕ್ ಜನತಾ ಪಕ್ಷವು (ಜೆಜೆಪಿ), 2024ರ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲೂ ವಿಫಲವಾಗಿದೆ. ಹಿಂದೆ ತಾನು ಗೆದ್ದಿದ್ದ ಹತ್ತೂ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿರುವಂತೆ ಭಾಸವಾಗುತ್ತಿದೆ.

ಕಿಂಗ್ ಮೇಕರ್ ಆಗಿ ಹೊರಹೊಮ್ಮುವುದರಿಂದ ಹಿಡಿದು ಐದು ವರ್ಷಗಳ ನಂತರ ಪಕ್ಷದ ಸಂಭಾವ್ಯ ನಾಶವನ್ನು ಎದುರಿಸುವವರೆಗೆ ಅದರ ಮುಖ್ಯಸ್ಥ ದುಶ್ಯಂತ್ ಚೌತಾಲಾ ಭಾರಿ ಮುಖಭಂಗ ಅನುಭವಿಸಿದ್ದಾರೆ. ಇದೇ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಕೊನೆಗೊಂಡ ನಂತರ ಜನನಾಯಕ್ ಜನತಾ ಪಕ್ಷವು ತನ್ನ ಚುನಾವಣಾ ಅದೃಷ್ಟದಲ್ಲಿ ಭಾರಿ ಕುಸಿತವನ್ನು ಕಂಡಿದೆ.

ಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಅವರು 2019 ರಲ್ಲಿ ಗೆದ್ದಿದ್ದ ಉಚ್ಚನ ಕಲಾನ್ ಅಸೆಂಬ್ಲಿ ಕ್ಷೇತ್ರದಲ್ಲೆ ಐದನೇ ಸ್ಥಾನದಲ್ಲಿ ಕುಸಿಯುವ ಮೂಲಕ ಚುನಾವಣೆಯಲ್ಲಿ ಹೀನಾಯ ಸೋಲನ್ನು ಎದುರಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಕೆಲವೇ ಕೆಲವು ಮತಗಳ ಅಂತರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಯಾಸದ ಗೆಲುವು ಕಂಡಿದೆ.

2019 ರ ಚುನಾವಣೆಯಲ್ಲಿ ಜೆಜೆಪಿ 90 ಅಸೆಂಬ್ಲಿ ಸ್ಥಾನಗಳಲ್ಲಿ 10 ಅನ್ನು ಗೆದ್ದುಕೊಂಡಿತು. ಆ ಮೂಲಕ, ಅದು ಕಿಂಗ್ ಮೇಕರ್ ಆಗಿ ಹೊರಹೊಮ್ಮಿತು. 40 ಸ್ಥಾನಗಳನ್ನು ಗೆದ್ದ ನಂತರ ಸರಳ ಬಹುಮತಕ್ಕೆ ಆರು ಸ್ಥಾನ ಕಡಿಮೆ ಇದ್ದ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಯನ್ನು ರೂಪಿಸಿತು.

ಕೌಟುಂಬಿಕ ಕಲಹದಿಂದಾಗಿ 2018 ರ ಡಿಸೆಂಬರ್‌ನಲ್ಲಿ ಪೋಷಕ ಸಂಘಟನೆ ಇಂಡಿಯನ್ ನ್ಯಾಷನಲ್ ಲೋಕದಳ (ಐಎನ್‌ಡಿಎಲ್‌) ನ ಜೊತೆಗಿನ ವಿಭಜನೆಯ ನಂತರ ಮುನ್ನೆಲೆಗೆ ಬಂದ ಅಜಯ್ ಸಿಂಗ್ ಚೌಟಾಲಾ ನೇತೃತ್ವದ ಪಕ್ಷವು ಅದರ ಗ್ರಾಫ್‌ನಲ್ಲಿ ಹಠಾತ್ ಏರಿಕೆ ಕಂಡಿತು.

ಬಿಜೆಪಿ ತನ್ನ ನಾಯಕತ್ವದಲ್ಲಿ ಬದಲಾವಣೆಯನ್ನು ಮಾಡಿದ ನಂತರ ಮೈತ್ರಿ ಮುರಿದುಬಿತ್ತು. ಮನೋಹರ್ ಲಾಲ್ ಖಟ್ಟರ್ ಅವರ ಬದಲಿಗೆ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರನ್ನು ನೇಮಿಸಲಾಯಿತು.

ಹರಿಯಾಣ ವಿಧಾನಸಭಾ ಚುನಾವಣೆಯ ಈವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ತಯಾರಿ ನಡೆಸಿದೆ. ರಾಜ್ಯದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ ಪ್ರವೃತ್ತಿಯಲ್ಲಿ ದೊಡ್ಡ ಹಿನ್ನಡೆಯನ್ನು ಎದುರಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಹರ್ಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹೇಳಿಕೊಂಡಿತ್ತು. ಆದರೆ, ಇಲ್ಲಿಯವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಹರ್ಯಾಣದಲ್ಲಿ ಸರ್ಕಾರ ರಚಿಸುತ್ತಿದೆ.

ದುಶ್ಯಂತ್ ಚೌಟಾಲಾ ಅವರ ಪಕ್ಷವಾದ ಜೆಜೆಪಿ ಹರಿಯಾಣದಲ್ಲಿ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದಾರೆ.

ಈ ಬಾರಿ ಜೆಜೆಪಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಜೆಜೆಪಿ 70 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) 20 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, 70 ಸ್ಥಾನಗಳಲ್ಲಿ ಯಾವುದೇ ಜೆಜೆಪಿ ಅಭ್ಯರ್ಥಿ ಗೆದ್ದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹರಿಯಾಣದಿಂದ ಜೆಜೆಪಿ ನಿರ್ನಾಮವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಬಿರುಸಿನ ಸಿದ್ಧತೆಗಳ ನಡುವೆಯೇ ಜನನಾಯಕ ಜನತಾ ಪಕ್ಷ (ಜೆಜೆಪಿ) ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಬಹುದು. 2019ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದಿದ್ದ ಜೆಜೆಪಿ ಈ ಚುನಾವಣೆಗೂ ಮುನ್ನ ಸಾಕಷ್ಟು ಸಂಕಷ್ಟ ಎದುರಿಸಿತ್ತು. ಏಕೆಂದರೆ, ಅದರ ಅನೇಕ ಶಾಸಕರು ಬಂಡಾಯವೆದ್ದಿದ್ದರು. ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ನಿರಾಶಾದಾಯಕವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದಿದ್ದರು.

2019 ರಲ್ಲಿ ಮೊದಲ ಬಾರಿಗೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೆಜೆಪಿ ಸ್ಪರ್ಧಿಸಿತ್ತು. ಆಗ 10 ಸ್ಥಾನ ಗೆದ್ದಿತ್ತು. ಆ ಸಮಯದಲ್ಲಿ ಅದು ಹರಿಯಾಣ ಮತ್ತು ಜೆಜೆಪಿಗೆ ದೊಡ್ಡ ಯಶಸ್ಸು. ದುಶ್ಯಂತ್ ಚೌಟಾಲಾ ಇದರ ಹಿಂದಿನ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿತ್ತು. 2019ರ ಚುನಾವಣಾ ಫಲಿತಾಂಶದ ನಂತರ, ಜೆಜೆಪಿ ಖಟ್ಟರ್ ಸರ್ಕಾರವನ್ನು ಬೆಂಬಲಿಸಿತು ಮತ್ತು ಬಿಜೆಪಿಯ ಸಹಯೋಗದೊಂದಿಗೆ ಸರ್ಕಾರವನ್ನು ನಡೆಸಿತು. ಈ ಸರ್ಕಾರ ನಾಲ್ಕೂವರೆ ವರ್ಷಗಳ ಕಾಲ ಇದ್ದು, ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿ ಮತ್ತು ಜೆಜೆಪಿ ಪಕ್ಷಗಳು ಬೇರ್ಪಟ್ಟವು.

ಪಕ್ಷದ ಕಾರ್ಯವೈಖರಿ ನೋಡಿದರೆ ಜೆಜೆಪಿಗೆ ರೈತರ ವಿರೋಧ ವ್ಯಕ್ತವಾಗಿದೆ ಎನ್ನಬಹುದು. ರೈತ ಚಳವಳಿಯ ಸಂದರ್ಭದಲ್ಲಿ ಬಿಜೆಪಿಯೊಂದಿಗೆ ನಿಂತಿದ್ದಕ್ಕಾಗಿ ಜೆಜೆಪಿ ನಾಯಕರು ಭಾರಿ ವಿರೋಧವನ್ನು ಎದುರಿಸಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದುಷ್ಯಂತ್ ಚೌಟಾಲಾ ಅವರ ತಾಯಿ ಮತ್ತು ಶಾಸಕಿ ನೈನಾ ಚೌತಾಲಾ ಅವರು ಹಿಸಾರ್‌ನಿಂದ ಜೆಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ, ಅವರು ರೈತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು.

ಶೇ. 1ರಷ್ಟೂ ಮತ ಪಡೆಯದ ಜೆಜೆಪಿ

ಕಳೆದ ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ತೀರಾ ಕಳಪೆಯಾಗಿದ್ದು, ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಅದರ ಸ್ಥಿತಿ ಎಷ್ಟು ಹದಗೆಟ್ಟಿತ್ತು ಎಂದರೆ, ಶೇ.1 ರಷ್ಟೂ ಮತಗಳಿಗೆ ಪಡೆದಿರಲಿಲ್ಲ. ಇದೀಗ ಹರಿಯಾಣದ 90 ವಿಧಾನಸಭಾ ಸ್ಥಾನಗಳ ಒಂದರಲ್ಲಿಯೂ ಜೆಜೆಪಿ ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಸೋತಿದ್ದು, ಬಹುತೇಕರು ಠೇವಣಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಹರಿಯಾಣ ಚುನಾವಣಾ ಫಲಿತಾಂಶವು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆ: ಕುಮಾರಿ ಶೆಲ್ಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...