Homeಮುಖಪುಟಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್...

ಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್ ಚೌಟಾಲಾಗೆ ಮುಖಭಂಗ

- Advertisement -
- Advertisement -

2019 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಿಂಗ್‌ಮೇಕರ್ ಆಗಿದ್ದ ಜನನಾಯಕ್ ಜನತಾ ಪಕ್ಷವು (ಜೆಜೆಪಿ), 2024ರ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲೂ ವಿಫಲವಾಗಿದೆ. ಹಿಂದೆ ತಾನು ಗೆದ್ದಿದ್ದ ಹತ್ತೂ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿರುವಂತೆ ಭಾಸವಾಗುತ್ತಿದೆ.

ಕಿಂಗ್ ಮೇಕರ್ ಆಗಿ ಹೊರಹೊಮ್ಮುವುದರಿಂದ ಹಿಡಿದು ಐದು ವರ್ಷಗಳ ನಂತರ ಪಕ್ಷದ ಸಂಭಾವ್ಯ ನಾಶವನ್ನು ಎದುರಿಸುವವರೆಗೆ ಅದರ ಮುಖ್ಯಸ್ಥ ದುಶ್ಯಂತ್ ಚೌತಾಲಾ ಭಾರಿ ಮುಖಭಂಗ ಅನುಭವಿಸಿದ್ದಾರೆ. ಇದೇ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಕೊನೆಗೊಂಡ ನಂತರ ಜನನಾಯಕ್ ಜನತಾ ಪಕ್ಷವು ತನ್ನ ಚುನಾವಣಾ ಅದೃಷ್ಟದಲ್ಲಿ ಭಾರಿ ಕುಸಿತವನ್ನು ಕಂಡಿದೆ.

ಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಅವರು 2019 ರಲ್ಲಿ ಗೆದ್ದಿದ್ದ ಉಚ್ಚನ ಕಲಾನ್ ಅಸೆಂಬ್ಲಿ ಕ್ಷೇತ್ರದಲ್ಲೆ ಐದನೇ ಸ್ಥಾನದಲ್ಲಿ ಕುಸಿಯುವ ಮೂಲಕ ಚುನಾವಣೆಯಲ್ಲಿ ಹೀನಾಯ ಸೋಲನ್ನು ಎದುರಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಕೆಲವೇ ಕೆಲವು ಮತಗಳ ಅಂತರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಯಾಸದ ಗೆಲುವು ಕಂಡಿದೆ.

2019 ರ ಚುನಾವಣೆಯಲ್ಲಿ ಜೆಜೆಪಿ 90 ಅಸೆಂಬ್ಲಿ ಸ್ಥಾನಗಳಲ್ಲಿ 10 ಅನ್ನು ಗೆದ್ದುಕೊಂಡಿತು. ಆ ಮೂಲಕ, ಅದು ಕಿಂಗ್ ಮೇಕರ್ ಆಗಿ ಹೊರಹೊಮ್ಮಿತು. 40 ಸ್ಥಾನಗಳನ್ನು ಗೆದ್ದ ನಂತರ ಸರಳ ಬಹುಮತಕ್ಕೆ ಆರು ಸ್ಥಾನ ಕಡಿಮೆ ಇದ್ದ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಯನ್ನು ರೂಪಿಸಿತು.

ಕೌಟುಂಬಿಕ ಕಲಹದಿಂದಾಗಿ 2018 ರ ಡಿಸೆಂಬರ್‌ನಲ್ಲಿ ಪೋಷಕ ಸಂಘಟನೆ ಇಂಡಿಯನ್ ನ್ಯಾಷನಲ್ ಲೋಕದಳ (ಐಎನ್‌ಡಿಎಲ್‌) ನ ಜೊತೆಗಿನ ವಿಭಜನೆಯ ನಂತರ ಮುನ್ನೆಲೆಗೆ ಬಂದ ಅಜಯ್ ಸಿಂಗ್ ಚೌಟಾಲಾ ನೇತೃತ್ವದ ಪಕ್ಷವು ಅದರ ಗ್ರಾಫ್‌ನಲ್ಲಿ ಹಠಾತ್ ಏರಿಕೆ ಕಂಡಿತು.

ಬಿಜೆಪಿ ತನ್ನ ನಾಯಕತ್ವದಲ್ಲಿ ಬದಲಾವಣೆಯನ್ನು ಮಾಡಿದ ನಂತರ ಮೈತ್ರಿ ಮುರಿದುಬಿತ್ತು. ಮನೋಹರ್ ಲಾಲ್ ಖಟ್ಟರ್ ಅವರ ಬದಲಿಗೆ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರನ್ನು ನೇಮಿಸಲಾಯಿತು.

ಹರಿಯಾಣ ವಿಧಾನಸಭಾ ಚುನಾವಣೆಯ ಈವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ತಯಾರಿ ನಡೆಸಿದೆ. ರಾಜ್ಯದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ ಪ್ರವೃತ್ತಿಯಲ್ಲಿ ದೊಡ್ಡ ಹಿನ್ನಡೆಯನ್ನು ಎದುರಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಹರ್ಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹೇಳಿಕೊಂಡಿತ್ತು. ಆದರೆ, ಇಲ್ಲಿಯವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಹರ್ಯಾಣದಲ್ಲಿ ಸರ್ಕಾರ ರಚಿಸುತ್ತಿದೆ.

ದುಶ್ಯಂತ್ ಚೌಟಾಲಾ ಅವರ ಪಕ್ಷವಾದ ಜೆಜೆಪಿ ಹರಿಯಾಣದಲ್ಲಿ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದಾರೆ.

ಈ ಬಾರಿ ಜೆಜೆಪಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಜೆಜೆಪಿ 70 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) 20 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, 70 ಸ್ಥಾನಗಳಲ್ಲಿ ಯಾವುದೇ ಜೆಜೆಪಿ ಅಭ್ಯರ್ಥಿ ಗೆದ್ದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹರಿಯಾಣದಿಂದ ಜೆಜೆಪಿ ನಿರ್ನಾಮವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಬಿರುಸಿನ ಸಿದ್ಧತೆಗಳ ನಡುವೆಯೇ ಜನನಾಯಕ ಜನತಾ ಪಕ್ಷ (ಜೆಜೆಪಿ) ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಬಹುದು. 2019ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದಿದ್ದ ಜೆಜೆಪಿ ಈ ಚುನಾವಣೆಗೂ ಮುನ್ನ ಸಾಕಷ್ಟು ಸಂಕಷ್ಟ ಎದುರಿಸಿತ್ತು. ಏಕೆಂದರೆ, ಅದರ ಅನೇಕ ಶಾಸಕರು ಬಂಡಾಯವೆದ್ದಿದ್ದರು. ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ನಿರಾಶಾದಾಯಕವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದಿದ್ದರು.

2019 ರಲ್ಲಿ ಮೊದಲ ಬಾರಿಗೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೆಜೆಪಿ ಸ್ಪರ್ಧಿಸಿತ್ತು. ಆಗ 10 ಸ್ಥಾನ ಗೆದ್ದಿತ್ತು. ಆ ಸಮಯದಲ್ಲಿ ಅದು ಹರಿಯಾಣ ಮತ್ತು ಜೆಜೆಪಿಗೆ ದೊಡ್ಡ ಯಶಸ್ಸು. ದುಶ್ಯಂತ್ ಚೌಟಾಲಾ ಇದರ ಹಿಂದಿನ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿತ್ತು. 2019ರ ಚುನಾವಣಾ ಫಲಿತಾಂಶದ ನಂತರ, ಜೆಜೆಪಿ ಖಟ್ಟರ್ ಸರ್ಕಾರವನ್ನು ಬೆಂಬಲಿಸಿತು ಮತ್ತು ಬಿಜೆಪಿಯ ಸಹಯೋಗದೊಂದಿಗೆ ಸರ್ಕಾರವನ್ನು ನಡೆಸಿತು. ಈ ಸರ್ಕಾರ ನಾಲ್ಕೂವರೆ ವರ್ಷಗಳ ಕಾಲ ಇದ್ದು, ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿ ಮತ್ತು ಜೆಜೆಪಿ ಪಕ್ಷಗಳು ಬೇರ್ಪಟ್ಟವು.

ಪಕ್ಷದ ಕಾರ್ಯವೈಖರಿ ನೋಡಿದರೆ ಜೆಜೆಪಿಗೆ ರೈತರ ವಿರೋಧ ವ್ಯಕ್ತವಾಗಿದೆ ಎನ್ನಬಹುದು. ರೈತ ಚಳವಳಿಯ ಸಂದರ್ಭದಲ್ಲಿ ಬಿಜೆಪಿಯೊಂದಿಗೆ ನಿಂತಿದ್ದಕ್ಕಾಗಿ ಜೆಜೆಪಿ ನಾಯಕರು ಭಾರಿ ವಿರೋಧವನ್ನು ಎದುರಿಸಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದುಷ್ಯಂತ್ ಚೌಟಾಲಾ ಅವರ ತಾಯಿ ಮತ್ತು ಶಾಸಕಿ ನೈನಾ ಚೌತಾಲಾ ಅವರು ಹಿಸಾರ್‌ನಿಂದ ಜೆಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ, ಅವರು ರೈತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು.

ಶೇ. 1ರಷ್ಟೂ ಮತ ಪಡೆಯದ ಜೆಜೆಪಿ

ಕಳೆದ ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ತೀರಾ ಕಳಪೆಯಾಗಿದ್ದು, ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಅದರ ಸ್ಥಿತಿ ಎಷ್ಟು ಹದಗೆಟ್ಟಿತ್ತು ಎಂದರೆ, ಶೇ.1 ರಷ್ಟೂ ಮತಗಳಿಗೆ ಪಡೆದಿರಲಿಲ್ಲ. ಇದೀಗ ಹರಿಯಾಣದ 90 ವಿಧಾನಸಭಾ ಸ್ಥಾನಗಳ ಒಂದರಲ್ಲಿಯೂ ಜೆಜೆಪಿ ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಸೋತಿದ್ದು, ಬಹುತೇಕರು ಠೇವಣಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಹರಿಯಾಣ ಚುನಾವಣಾ ಫಲಿತಾಂಶವು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆ: ಕುಮಾರಿ ಶೆಲ್ಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...