HomeಮುಖಪುಟJammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ...

Jammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ ಕಾಂಗ್ರೆಸ್; ಪಾರಮ್ಯ ಮೆರೆದ ಎನ್‌ಸಿ!

- Advertisement -
- Advertisement -

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದೆ. ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದು, ಜಮ್ಮುಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ), ಕಾಂಗ್ರೆಸ್ ಮತ್ತು ಸಿಪಿಐ(ಎಂ) ಮೈತ್ರಿ ಗೆದ್ದಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಸೋತರೂ ಗೆದ್ದ BJP Jammu and Kashmir Assembly Elections 2024

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಎನ್‌ಸಿ ತನ್ನ ಪ್ರಾಬಲ್ಯ ಮರೆದಿದ್ದು, ಬಿಜೆಪಿಗೆ ಸೆಡ್ಡು ಹೊಡೆದಿದೆ. ಎನ್‌ಸಿ ನೇತೃತ್ವದ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಜೊತೆಗಿನ ಮೈತ್ರಿ ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡಿದೆ. ಎನ್‌ಸಿ ಸ್ಪರ್ಧಿಸಿದ್ದ 56 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದಿದ್ದು, ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಇದನ್ನೂಓದಿ: ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಅದಾಗ್ಯೂ, ಎನ್‌ಸಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. ಮೈತ್ರಿಯ ಮತ್ತೊಂದು ಪಕ್ಷವಾದ ಸಿಪಿಐ(ಎಂ) ತನಗೆ ನೀಡಿದ ಒಂದು ಕ್ಷೇತ್ರವನ್ನು ಅನಾಯಸವಾಗಿ ಗೆದ್ದುಕೊಂಡಿದೆ.

ಈ ನಡುವೆ ರಾಷ್ಟ್ರೀಯ ಮಟ್ಟದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷವಾಗಿರುವ ಎಎಪಿ ಜಮ್ಮು ಕಾಶ್ಮೀರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಖಾತೆ ತೆರೆದಿದೆ. ಒಟ್ಟು 7 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎಎಪಿ 1 ಸ್ಥಾನವನ್ನು ವಶಪಡಿಸಿಕೊಂಡಿದೆ. ಈ ಮೂಲಕ ಪಕ್ಷವೂ 5ನೇ ರಾಜ್ಯದಲ್ಲಿ ತನ್ನ ಖಾತೆ ತೆರೆದಿದೆ.ಸೋತರೂ ಗೆದ್ದ BJP

ಅದಾಗ್ಯೂ, ರಾಜ್ಯದ ಈ ಹಿಂದಿನ ಆಡಳಿತ ಪಕ್ಷವಾಗಿದ್ದ ಪಿಡಿಪಿ ತೀವ್ರ ಮುಖಭಂಗಕ್ಕೊಳಗಾಗಿದ್ದು 80 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 3 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದೆ. ಇದರ ಜೊತೆಗೆ ಜೆಕೆಪಿಎಫ್‌ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 1 ಕ್ಷೇತ್ರದಲ್ಲಿ ಗೆಲುವು ಕಂಡಿದ್ದು, ರಾಜ್ಯದ 7 ಕ್ಷೇತ್ರಗಳಲ್ಲಿ ಪಕ್ಷೇತರರು ವಿಜಯಿಯಾಗಿದ್ದಾರೆ.

ಸೋತರೂ ಬಲ ಹೆಚ್ಚಿಸಿಕೊಂಡ ಬಿಜೆಪಿ, ಗೆದ್ದರೂ ಸೋತ ಕಾಂಗ್ರೆಸ್; ಪ್ರಾಬಲ್ಯ ಮೆರೆದ ಎನ್‌ಸಿ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಆದರೂ ತನ್ನ ಬಲವನ್ನು ಹೆಚ್ಚಿಕೊಂಡಿರುವ ಬಿಜೆಪಿ ರಾಜ್ಯದ 2ನೇ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 10 ವರ್ಷಗಳ ಹಿಂದೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಜಮ್ಮುಕಾಶ್ಮೀರ ಪ್ರಾಂತ್ಯದ 90 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ 4 ಸ್ಥಾನಗಳನ್ನು ಹೆಚ್ಚಿಸಿಕೊಂಡಿವೆ.

ಇದನ್ನೂಓದಿ: ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. 2014ರಲ್ಲಿ ಈ ಪ್ರಾಂತ್ಯದಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ 6 ಕ್ಷೇತ್ರಗಳನ್ನು ಕಳೆದುಕೊಂಡಿದೆ.

ರಾಜ್ಯದ ಅತಿ ದೊಡ್ಡ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್‌(ಎನ್‌ಸಿ) ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 90 ವಿಧಾನಸಭಾ ಸ್ಥಾನಗಳಿರುವ ಜಮ್ಮು ಕಾಶ್ಮೀರದಲ್ಲಿ 42ರನ್ನು ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. 2014ರಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಸಿ 15 ಸ್ಥಾನಗಳನ್ನಷ್ಟೆ ಗೆದ್ದುಕೊಂಡಿತ್ತು. ಈ ಬಾರಿ ಅದು ಹೆಚ್ಚುವರಿಯಾಗಿ 27 ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದಿದೆ.

ರಾಜ್ಯದ ಈ ಹಿಂದಿನ ಆಡಳಿತರೂಢ ಪಕ್ಷವಾಗಿದ್ದ ಪಿಡಿಪಿ 28 ಕ್ಷೇತ್ರಗಳಿಂದ 3ಕ್ಕೆ ಇಳಿದಿದೆ. ಈ ಹಿಂದೆ 2 ಕ್ಷೇತ್ರಗಳನ್ನು ಹೊಂದಿದ್ದ ಜೆಪಿಸಿ ಸೊನ್ನೆಗೆ ಇಳಿದಿದ್ದು, ಜೆಕೆಪಿಎಫ್‌ 1 ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಹಾಗೆಯೆ ಉಳಿಸಿಕೊಂಡಿದೆ. ಆದರೆ ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಿಂದ 7ಕ್ಕೆ ಏರಿಕೆಯಾಗಿದ್ದಾರೆ.ಸೋತರೂ ಗೆದ್ದ BJP

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...