Homeಫ್ಯಾಕ್ಟ್‌ಚೆಕ್FACT CHECK : ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದ್ರಾ?

FACT CHECK : ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದ್ರಾ?

- Advertisement -
- Advertisement -

ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ಹೈದರಾಬಾದ್‌ನ ಬಿಜೆಪಿ ಶಾಸಕ ಹಾಗೂ ಹಿಂದುತ್ವವಾದಿ ಟೈಗರ್ ರಾಜಾ ಸಿಂಗ್ ಹೆಸರಿನಲ್ಲಿರುವ ಎಕ್ಸ್‌ ಖಾತೆಯಲ್ಲಿ ಅಕ್ಟೋಬರ್ 4ರಂದು ವಿಡಿಯೋ ಹಂಚಿಕೊಂಡು “ಪ್ಯಾಲೆಸ್ತೀನಿಯರು ಭಾರತದ ತ್ರಿವರ್ಣ ಧ್ವಜ ಹಿಡಿದು ದೇಶದಿಂದ ಪಲಾಯನ ಮಾಡುತ್ತಿದ್ದಾರೆ. ಏಕೆಂದರೆ, ಇಸ್ರೇಲ್ ಭಾರತದ ತ್ರಿವರ್ಣ ಧ್ವಜದ ಮೇಲೆ ದಾಳಿ ಮಾಡುವುದಿಲ್ಲ. ಇಸ್ರೇಲ್ ಮಾತ್ರವಲ್ಲ, ಈಗ ಜಗತ್ತಿನಲ್ಲಿ ಯಾವ ದೇಶಕ್ಕೂ ತ್ರಿವರ್ಣ ಧ್ವಜದ ಮೇಲೆ ದಾಳಿ ಮಾಡಲು ಧೈರ್ಯ ಇಲ್ಲ. ಇದು ತ್ರಿವರ್ಣ ಧ್ವಜದ ಮತ್ತು ಮೋದಿಯವರ ಶಕ್ತಿ” ಎಂದು ಬರೆದುಕೊಳ್ಳಲಾಗಿತ್ತು.

ಇನ್ನೂ ಕೆಲ ಎಕ್ಸ್‌, ಫೇಸ್‌ಬುಕ್ ಖಾತೆಗಳಲ್ಲಿ ಇದೇ ಬರಹದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದಿರುವುದಲ್ಲ. ಅದು 2023ರಲ್ಲಿ ಭಾರತೀಯ ಯಾತ್ರಾರ್ಥಿಗಳು ಇರಾಕ್‌ನ ಮುಸ್ಲಿಮರ ಪವಿತ್ರ ಸ್ಥಳ ಕರ್ಬಲಾಗೆ ನಡೆದುಕೊಂಡು ಹೋದ ಅಥವಾ ‘ಅರ್ಬಯೀನ್ ವಾಕ್‌’ನ ದೃಶ್ಯವಾಗಿದೆ.

‘ಅರ್ಬಯೀನ್ ವಾಕ್‌’ ಎಂದರೆ ನಲ್ವತ್ತನೇ ನಡಿಗೆ ಎಂದರ್ಥ. ಮುಸ್ಲಿಮರು, ವಿಶೇಷವಾಗಿ ಶಿಯಾ ಮುಸ್ಲಿಮರು ಇಮಾಮ್ ಹುಸೇನ್ ಅವರು ಹುತಾತ್ಮರಾದ 40ನೇ ದಿನದಂದು, ಇರಾಕ್‌ನ ಕರ್ಬಾಲಾದಲ್ಲಿರುವ ಅವರ ಸಮಾಧಿಯ ಬಳಿಗೆ ನಡೆದುಕೊಂಡು ಹೋಗುತ್ತಾರೆ.

ವೈರಲ್ ವಿಡಿಯೋ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ನಮಗೆ ಅದು ಅರ್ಬಯೀನ್ ವಾಕ್‌ನ ದೃಶ್ಯ ಎಂಬುವುದು ಖಚಿತವಾಗಿದೆ.

ಆಗಸ್ಟ್ 31, 2023ರಂದು ಭಾರತದ ಮೂಲದ ಇನ್‌ಸ್ಟಾಗ್ರಾಂ ಖಾತೆ ಫಲಕ್ ಹಕ್‌ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ‘ನಜಾಫ್-ಅಲ್‌-ಅಶ್ರಾ’ ಎಂದು ಸ್ಥಳವನ್ನು ಉಲ್ಲೇಖಿಸಲಾಗಿತ್ತು. ‘ಅರ್ಬಯೀನ್ ವಾಕ್-2023’ ಎಂದು ವಿಡಿಯೋಗೆ ಕ್ಯಾಪ್ಶನ್ ಕೊಡಲಾಗಿತ್ತು. ಇಲ್ಲಿ ನಜಾಫ್ ಎಂಬುವುದು ಇರಾಕ್‌ನಲ್ಲಿರುವ ಮುಸ್ಲಿಮರ ಮತ್ತೊಂದು ಪವಿತ್ರ ಸ್ಥಳವಾಗಿದೆ.

ಈ ನಜಾಫ್‌ನಲ್ಲಿ ಪ್ರವಾದಿ ಮುಹಮ್ಮದ್ ಅವರ ಅಳಿಯಾ ಹಾಗೂ ಇಸ್ಲಾಮಿನ ನಾಲ್ಕನೇ ಖಲೀಫಾ ಇಮಾಮ್ ಅಲೀ ಅವರ ಸಮಾಧಿಯಿದೆ. ಇಲ್ಲಿಂದ ಸುಮಾರು 70 ಕಿ.ಮೀ ದೂರದಲ್ಲಿ ಕರ್ಬಲಾದಲ್ಲಿ ಅಲೀ ಅವರ ಮಗ ಹಝ್ರತ್ ಹುಸೇನ್ ಅವರ ಸಮಾಧಿಯಿದೆ. ಹಝ್ರತ್ ಹುಸೇನ್ ಮುಹಮ್ಮದ್ ಪೈಗಂಬರ್ ಅವರ ಮೊಮ್ಮಗ. ಅವರು ಹುತಾತ್ಮರಾದ ದಿನದಂದು ಮೊಹರಂ ಆಚರಣೆ ಮಾಡಲಾಗುತ್ತದೆ. ಶಿಯಾ ಮುಸ್ಲಿಮರಿಗೆ ನಜಾಫ್ ಮತ್ತು ಕರ್ಬಲಾ ಎರಡೂ ಜಾಗಗಳು ಅತ್ಯಂತ ಪವಿತ್ರವಾಗಿದೆ.

ಸೆಪ್ಟೆಂಬರ್ 8, 2023 ರಲ್ಲಿ ಎನ್‌ಡಿಟಿವಿ ಪ್ರಕಟಿಸಿದ್ದ ವರದಿಯಲ್ಲಿ, “2023ರ ಅರ್ಬಯೀನ್ ವಾಕ್ ಸೆಪ್ಟೆಂಬರ್ 6ರಂದು ಕರ್ಬಲಾದಲ್ಲಿ ಕೊನೆಗೊಂಡಿದ್ದು, ಭಾರತದಿಂದ ಸುಮಾರು 1 ಲಕ್ಷ ಶಿಯಾ ಮುಸ್ಲಿಮರು ನಡಿಗೆಯಲ್ಲಿ ಪಾಲ್ಗೊಳ್ಳಲು ಕರ್ಬಲಾಕ್ಕೆ ತೆರಳಿದ್ದರು” ಎಂದು ಹೇಳಲಾಗಿತ್ತು.

ಎನ್‌ಡಿವಿ ಸುದ್ದಿಯ ಜೊತೆ ವ್ಯಕ್ತಿಯೊಬ್ಬರು ಮಗುವನ್ನು ಹಿಡಿದುಕೊಂಡಿರುವುದು ಮತ್ತು ಆ ಮಗು ಭಾರತದ ತ್ರಿವರ್ಣ ಧ್ವಜ ಹೊದ್ದುಕೊಂಡಿದ್ದ ಫೋಟೋ ಸೇರಿಸಿತ್ತು.

ಅಲ್ಲದೆ, 6 ಸೆಪ್ಟೆಂಬರ್ 2023ರಂದು ಎನ್‌ಡಿವಿ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ನಜಾಫ್‌ನಿಂದ ಗ್ರೌಂಡ್‌ ರಿಪೋರ್ಟ್ ಕುರಿತ ವಿಡಿಯೋ ಅಪ್ಲೋಡ್ ಮಾಡಿತ್ತು. ಅದರಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಭಾರತದ ತ್ರಿವರ್ಣ ಧ್ವಜ ಹಿಡಿದು ಮಾತನಾಡಿರುವುದು ಇದೆ.

ಭಾರತದ ಧ್ವಜ ಏಕೆ?

ಜಗತ್ತಿನಲ್ಲಿ ನಾಲ್ಕೈದು ಮುಸ್ಲಿಮರ ಪ್ರಮುಖ ಪವಿತ್ರ ಸ್ಥಳಗಳಿವೆ. ಅಲ್ಲಿಗೆ ವಿಶ್ವದ ಮೂಲೆ ಮೂಲೆಗಳಿಂದ ಮುಸ್ಲಿಮರು ತೆರಳುತ್ತಾರೆ. ಮಕ್ಕಾ, ಮದೀನಾ, ಕರ್ಬಲಾ, ನಜಾಫ್ ಮತ್ತು ಬೈತುಲ್ ಮುಕದ್ದಸ್ ಅಥವಾ ಜೆರುಸಲೇಂನ ಮಸ್ಜಿದುಲ್ ಅಕ್ಸಾ ಆ ಪ್ರಮುಖ ಧಾರ್ಮಿಕ ಕೇಂದ್ರಗಳಾಗಿವೆ.

ಸಾಮಾನ್ಯವಾಗಿ ಮಕ್ಕಾಗೆ ಹಜ್‌-ಉಮ್ರಾಗೆ ತೆರಳಿದಾಗ, ನಜಾಫ್-ಕರ್ಬಲಾಗೆ ತೆರಳಿದಾಗ ಆಯಾ ದೇಶದ ಜನರು ತಮ್ಮ ದೇಶದ ಮೇಲಿನ ಪ್ರೀತಿಯಿಂದ ಮತ್ತು ಜನರ ನಡುವೆ ಒಬ್ಬರಿಗೊಬ್ಬರನ್ನು ಸುಲಭವಾಗಿ ಗುರುತಿಸಲು ರಾಷ್ಟ್ರ ಧ್ವಜಗಳನ್ನು ಹಿಡಿಯುತ್ತಾರೆ. ಅದೇ ರೀತಿ ಭಾರತೀಯರು ಕೂಡ ತಮ್ಮ ದೇಶದ ತ್ರಿವರ್ಣ ಧ್ವಜ ಹಿಡಿದು ನಡೆಯುತ್ತಾರೆ.

ಆದ್ದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಇಸ್ರೇಲ್‌ ದಾಳಿಯಿಂದ ರಕ್ಷಿಸಿಕೊಳ್ಳಲು ಪ್ಯಾಲೆಸ್ತೀಯರು ಭಾರತ ಧ್ವಜ ಹಿಡಿದಿರುವುದಕ್ಕೆ ಸಂಬಂಧಿಸಿದ್ದಲ್ಲ. ಅದು ಅರ್ಬಯೀನ್ ನಡಿಗೆಯ ವೇಳೆ ಭಾರತೀಯ ಶಿಯಾ ಮುಸ್ಲಿಮರು ಇರಾಕ್‌ನ ಕರ್ಬಲಾ ಕಡೆಗೆ ಧ್ವಜ ಹಿಡಿದು ಸಾಗಿದ ದೃಶ್ಯವಾಗಿದೆ.

ಇದನ್ನೂ ಓದಿ : FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...