Homeಮುಖಪುಟಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

ಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

- Advertisement -
- Advertisement -

ಅತ್ಯಾಚಾರ ಹಾಗೂ ಕೊಲೆ ಅಪರಾಧದಲ್ಲಿ ಜೈಲು ಪಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರಿಗೆ ಅಕ್ಟೋಬರ್ 1 ರಂದು 20 ದಿನಗಳ ಪೆರೋಲ್ ನೀಡಿದಾಗ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಂದ ನೇರ ದಾಳಿಗೆ ಒಳಗಾಯಿತು.

ರಾಮ್ ರಹೀಮ್ ಅವರ 15ನೇ ಪೆರೋಲ್ ಕೂಡ ಚುನಾವಣೆಗೆ ಹೊಂದಿಕೆಯಾಗುತ್ತಿದ್ದಂತೆ, “ಬಿಜೆಪಿಯು ತನ್ನ ಬೆಂಬಲವನ್ನು ಪಡೆಯಲು ಅತ್ಯಾಚಾರ ಮತ್ತು ಕೊಲೆ ಅಪರಾಧಿಗೆ ಪೆರೋಲ್ ನೀಡಿದೆ” ಎಂದು ಆರೋಪಿಸಲಾಗಿದೆ. ಆದರೆ, ಕೇವಲ ಬಿಜೆಪಿಗಷ್ಟೇ ಅಲ್ಲ, ಕಾಂಗ್ರೆಸ್‌ಗೂ ಲಾಭ ಎಂಬುದನ್ನು ಚುನಾವಣಾ ಫಲಿತಾಂಶ ತೋರಿಸಿದೆ.

ಡೇರಾ ಅನುಯಾಯಿಗಳಿಗೆ ನೆಲೆಯಾಗಿದೆ ಎಂದು ನಂಬಲಾದ 28 ವಿಧಾನಸಭಾ ಕ್ಷೇತ್ರಗಳಲ್ಲಿ 15 ಕಾಂಗ್ರೆಸ್, 10 ಬಿಜೆಪಿ, ಎರಡು ಇಂಡಿಯನ್ ನ್ಯಾಷನಲ್ ಲೋಕದಳ ಮತ್ತು ಒಬ್ಬರು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಅಂದರೆ, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶೇ.53.57, ಬಿಜೆಪಿ ಶೇ.35.71, ಐಎನ್‌ಎಲ್‌ಡಿ ಶೇ.7 ಮತ್ತು ಸ್ವತಂತ್ರ ಅಭ್ಯರ್ಥಿ ಶೇ.3.57 ಮತಗಳನ್ನು ಗಳಿಸಿದ್ದಾರೆ. ಬಹುತೇಕ ಹರಿಯಾಣ ಕಾಂಗ್ರೆಸ್ ನಾಯಕರು ರಾಮ್ ರಹೀಮ್ ಪೆರೋಲ್ ಬಗ್ಗೆ ಧ್ವನಿಯೆತ್ತದಿರಲು ಇದೂ ಒಂದು ಕಾರಣವಾಗಿರಬಹುದು ಎಂಬ ಮಾತುಗಳು ಕೇಳಬಂದಿವೆ.

ಫತೇಹಾಬಾದ್, ಕೈತಾಲ್, ಕುರುಕ್ಷೇತ್ರ, ಸಿರ್ಸಾ, ಕರ್ನಾಲ್ ಮತ್ತು ಹಿಸಾರ್ ಎಂಬ ಆರು ಹರ್ಯಾಣ ಜಿಲ್ಲೆಗಳನ್ನು ವ್ಯಾಪಿಸಿರುವ ಈ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ಫತೇಹಾಬಾದ್, ರತಿಯಾ, ತೋಹಾನಾ (ಅತಿ ಹೆಚ್ಚು ಡೇರಾ ಅನುಯಾಯಿಗಳನ್ನು ಹೊಂದಿರುವ), ಕಲಾಯತ್, ಕೈತಾಲ್, ಶಹಾಬಾದ್, ಥಾನೇಸರ್, ಪೆಹೋವಾ, ಕಲನ್‌ವಾಲಿ, ಸಿರ್ಸಾ, ಎಲೆನಾಬಾದ್, ಆದಂಪುರ, ಉಕ್ಲಾನಾ ಮತ್ತು ನಾರ್ನಾಂಡ್‌ಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

ಹನ್ಸಿ, ಬರ್ವಾಲಾ, ಹಿಸಾರ್, ನಲ್ವಾ, ಅಸಂಧ್, ಘರೋಂಡಾ, ಕರ್ನಾಲ್, ಇಂದ್ರಿ, ನಿಲೋಖೇರಿ, ಲಾಡ್ವಾ ಮತ್ತು ಪುಂಡ್ರಿಯಲ್ಲಿ ಬಿಜೆಪಿ ಗೆದ್ದಿದೆ. ದಾಬ್ವಾಲಿ ಮತ್ತು ರಾನಿಯಾದಲ್ಲಿ ಐಎನ್‌ಎಲ್‌ಡಿ ಗೆದ್ದರೆ, ಹಿಸಾರ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಸಾವಿತ್ರಿ ಜಿಂದಾಲ್ ಗೆದ್ದಿದ್ದಾರೆ.

ಬಿಜೆಪಿಗೆ ಡೇರಾದ ಬೆಂಬಲ?

ಅಕ್ಟೋಬರ್ 3 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರು ಬಿಜೆಪಿಗೆ ಮತ ಹಾಕುವಂತೆ ಸಿರ್ಸಾದ ಡೇರಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಧ್ಯಮ ವರದಿಗಳು ಈ ಸಂದೇಶವನ್ನು ಸತ್ಸಂಗ (ಸಭೆ) ಸಮಯದಲ್ಲಿ ತಿಳಿಸಲಾಗಿದೆ ಎಂದು ಹೇಳುತ್ತದೆ. ಅಲ್ಲಿ ಅನುಯಾಯಿಗಳಿಗೆ ಕನಿಷ್ಠ ಐದು ಮತದಾರರನ್ನು ಬೂತ್‌ಗೆ ಕರೆತರಲು ಸೂಚಿಸಲಾಯಿತು ಎಂದು ತಿಳಿದುಬಂದಿದೆ.

ಗುರ್ಮೀತ್ ರಾಮ್ ರಹೀಮ್ ಈ ಸತ್ಸಂಗವನ್ನು ವಾಸ್ತವಿಕವಾಗಿ ಆಯೋಜಿಸಿದ್ದಾರೋ ಇಲ್ಲವೋ ಎಂಬುದು ಅಸ್ಪಷ್ಟವಾಗಿದೆ. ಏಕೆಂದರೆ, ಭಾರತದ ಚುನಾವಣಾ ಆಯೋಗವು ಆನ್‌ಲೈನ್‌ನಲ್ಲಿ ಸತ್ಸಂಗಗಳನ್ನು ಪ್ರಚಾರ ಮಾಡುವುದನ್ನು ಅಥವಾ ನಡೆಸುವುದನ್ನು ನಿಷೇಧಿಸಿದೆ.

ಡೇರಾ ಮೂಲಗಳು ಪಂಥದ ಅನುಯಾಯಿಗಳ ಸಂಖ್ಯೆ ಸುಮಾರು 1.25 ಕೋಟಿ ಎಂದು ಅಂದಾಜಿಸಿದೆ. ಅದರ 38 ಶಾಖೆಗಳಲ್ಲಿ 21 ಹರಿಯಾಣದಲ್ಲಿದೆ.

ಡೇರಾ ಸಚ್ಚಾ ಸೌಧದ ರಾಜಕೀಯ ಪ್ರಭಾವ

ಧಾರ್ಮಿಕ ಪಂಥವಾಗಿದ್ದರೂ, ಡೇರಾ ಸಚ್ಚಾ ಸೌದಾ ಗಮನಾರ್ಹ ರಾಜಕೀಯ ಹಿಡಿತವನ್ನು ಹೊಂದಿದೆ. ಗುರ್ಮೀತ್ ರಾಮ್ ರಹೀಮ್ ನೇತೃತ್ವದಲ್ಲಿ ರಾಜಕೀಯ ವಿಭಾಗವನ್ನು ನಿರ್ವಹಿಸುತ್ತಿದೆ. ಈ ಪಂಥವು ಈ ಹಿಂದೆ ಶಿರೋಮಣಿ ಅಕಾಲಿ ದಳ, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. 2007 ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಡೇರಾ ಕಾಂಗ್ರೆಸ್ ಅನ್ನು ಬೆಂಬಲಿಸಿತು.

2014ರಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿತ್ತು. 2015 ರಲ್ಲಿ, ಡೇರಾ ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಬಿಜೆಪಿಯನ್ನು ಬಹಿರಂಗವಾಗಿ ಬೆಂಬಲಿಸಿತು. ಅಂದಾಜು 3,000 ಅನುಯಾಯಿಗಳು ಬಿಹಾರದಲ್ಲಿ ಪಕ್ಷದ ಪರ ಪ್ರಚಾರ ಮಾಡಿದರು.

ಡೇರಾದ ರಾಜಕೀಯ ಪ್ರಭಾವವು ಅದರ ದೊಡ್ಡ ತಳ ಸಮುದಾಯದ ಅನುಯಾಯಿಗಳ ನೆಲೆಯಿಂದ ಹುಟ್ಟಿಕೊಂಡಿದೆ. ಇದು ಗಮನಾರ್ಹ ಸಂಖ್ಯೆಯ ದಲಿತರನ್ನು ಒಳಗೊಂಡಿದೆ. ಉದಾಹರಣೆಗೆ ಮಜಾಬಿ ಸಿಖ್‌ಗಳು (ಪರಿವರ್ತಿತ ಸಿಖ್ಖರು).

ರಾಜಕೀಯ ವಿಶ್ಲೇಷಕರು ಗಮನಿಸಿದಂತೆ ಹರಿಯಾಣದಲ್ಲಿ ಮೇಲ್ಜಾತಿ ಮತಗಳು ಸಾಮಾನ್ಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿಭಜನೆಯಾಗುತ್ತವೆ. ಕೆಳಜಾತಿಯ ಡೇರಾ ಅನುಯಾಯಿಗಳು ತಮ್ಮ ನಾಯಕನ ಸೂಚನೆಗಳಿಗೆ ಅನುಗುಣವಾಗಿ ಮತ ಚಲಾಯಿಸುತ್ತಾರೆ.

ಇದನ್ನೂ ಓದಿ; ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...