Homeಮುಖಪುಟಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

ಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

- Advertisement -
- Advertisement -

ಅತ್ಯಾಚಾರ ಹಾಗೂ ಕೊಲೆ ಅಪರಾಧದಲ್ಲಿ ಜೈಲು ಪಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರಿಗೆ ಅಕ್ಟೋಬರ್ 1 ರಂದು 20 ದಿನಗಳ ಪೆರೋಲ್ ನೀಡಿದಾಗ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಂದ ನೇರ ದಾಳಿಗೆ ಒಳಗಾಯಿತು.

ರಾಮ್ ರಹೀಮ್ ಅವರ 15ನೇ ಪೆರೋಲ್ ಕೂಡ ಚುನಾವಣೆಗೆ ಹೊಂದಿಕೆಯಾಗುತ್ತಿದ್ದಂತೆ, “ಬಿಜೆಪಿಯು ತನ್ನ ಬೆಂಬಲವನ್ನು ಪಡೆಯಲು ಅತ್ಯಾಚಾರ ಮತ್ತು ಕೊಲೆ ಅಪರಾಧಿಗೆ ಪೆರೋಲ್ ನೀಡಿದೆ” ಎಂದು ಆರೋಪಿಸಲಾಗಿದೆ. ಆದರೆ, ಕೇವಲ ಬಿಜೆಪಿಗಷ್ಟೇ ಅಲ್ಲ, ಕಾಂಗ್ರೆಸ್‌ಗೂ ಲಾಭ ಎಂಬುದನ್ನು ಚುನಾವಣಾ ಫಲಿತಾಂಶ ತೋರಿಸಿದೆ.

ಡೇರಾ ಅನುಯಾಯಿಗಳಿಗೆ ನೆಲೆಯಾಗಿದೆ ಎಂದು ನಂಬಲಾದ 28 ವಿಧಾನಸಭಾ ಕ್ಷೇತ್ರಗಳಲ್ಲಿ 15 ಕಾಂಗ್ರೆಸ್, 10 ಬಿಜೆಪಿ, ಎರಡು ಇಂಡಿಯನ್ ನ್ಯಾಷನಲ್ ಲೋಕದಳ ಮತ್ತು ಒಬ್ಬರು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಅಂದರೆ, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶೇ.53.57, ಬಿಜೆಪಿ ಶೇ.35.71, ಐಎನ್‌ಎಲ್‌ಡಿ ಶೇ.7 ಮತ್ತು ಸ್ವತಂತ್ರ ಅಭ್ಯರ್ಥಿ ಶೇ.3.57 ಮತಗಳನ್ನು ಗಳಿಸಿದ್ದಾರೆ. ಬಹುತೇಕ ಹರಿಯಾಣ ಕಾಂಗ್ರೆಸ್ ನಾಯಕರು ರಾಮ್ ರಹೀಮ್ ಪೆರೋಲ್ ಬಗ್ಗೆ ಧ್ವನಿಯೆತ್ತದಿರಲು ಇದೂ ಒಂದು ಕಾರಣವಾಗಿರಬಹುದು ಎಂಬ ಮಾತುಗಳು ಕೇಳಬಂದಿವೆ.

ಫತೇಹಾಬಾದ್, ಕೈತಾಲ್, ಕುರುಕ್ಷೇತ್ರ, ಸಿರ್ಸಾ, ಕರ್ನಾಲ್ ಮತ್ತು ಹಿಸಾರ್ ಎಂಬ ಆರು ಹರ್ಯಾಣ ಜಿಲ್ಲೆಗಳನ್ನು ವ್ಯಾಪಿಸಿರುವ ಈ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ಫತೇಹಾಬಾದ್, ರತಿಯಾ, ತೋಹಾನಾ (ಅತಿ ಹೆಚ್ಚು ಡೇರಾ ಅನುಯಾಯಿಗಳನ್ನು ಹೊಂದಿರುವ), ಕಲಾಯತ್, ಕೈತಾಲ್, ಶಹಾಬಾದ್, ಥಾನೇಸರ್, ಪೆಹೋವಾ, ಕಲನ್‌ವಾಲಿ, ಸಿರ್ಸಾ, ಎಲೆನಾಬಾದ್, ಆದಂಪುರ, ಉಕ್ಲಾನಾ ಮತ್ತು ನಾರ್ನಾಂಡ್‌ಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

ಹನ್ಸಿ, ಬರ್ವಾಲಾ, ಹಿಸಾರ್, ನಲ್ವಾ, ಅಸಂಧ್, ಘರೋಂಡಾ, ಕರ್ನಾಲ್, ಇಂದ್ರಿ, ನಿಲೋಖೇರಿ, ಲಾಡ್ವಾ ಮತ್ತು ಪುಂಡ್ರಿಯಲ್ಲಿ ಬಿಜೆಪಿ ಗೆದ್ದಿದೆ. ದಾಬ್ವಾಲಿ ಮತ್ತು ರಾನಿಯಾದಲ್ಲಿ ಐಎನ್‌ಎಲ್‌ಡಿ ಗೆದ್ದರೆ, ಹಿಸಾರ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಸಾವಿತ್ರಿ ಜಿಂದಾಲ್ ಗೆದ್ದಿದ್ದಾರೆ.

ಬಿಜೆಪಿಗೆ ಡೇರಾದ ಬೆಂಬಲ?

ಅಕ್ಟೋಬರ್ 3 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರು ಬಿಜೆಪಿಗೆ ಮತ ಹಾಕುವಂತೆ ಸಿರ್ಸಾದ ಡೇರಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಧ್ಯಮ ವರದಿಗಳು ಈ ಸಂದೇಶವನ್ನು ಸತ್ಸಂಗ (ಸಭೆ) ಸಮಯದಲ್ಲಿ ತಿಳಿಸಲಾಗಿದೆ ಎಂದು ಹೇಳುತ್ತದೆ. ಅಲ್ಲಿ ಅನುಯಾಯಿಗಳಿಗೆ ಕನಿಷ್ಠ ಐದು ಮತದಾರರನ್ನು ಬೂತ್‌ಗೆ ಕರೆತರಲು ಸೂಚಿಸಲಾಯಿತು ಎಂದು ತಿಳಿದುಬಂದಿದೆ.

ಗುರ್ಮೀತ್ ರಾಮ್ ರಹೀಮ್ ಈ ಸತ್ಸಂಗವನ್ನು ವಾಸ್ತವಿಕವಾಗಿ ಆಯೋಜಿಸಿದ್ದಾರೋ ಇಲ್ಲವೋ ಎಂಬುದು ಅಸ್ಪಷ್ಟವಾಗಿದೆ. ಏಕೆಂದರೆ, ಭಾರತದ ಚುನಾವಣಾ ಆಯೋಗವು ಆನ್‌ಲೈನ್‌ನಲ್ಲಿ ಸತ್ಸಂಗಗಳನ್ನು ಪ್ರಚಾರ ಮಾಡುವುದನ್ನು ಅಥವಾ ನಡೆಸುವುದನ್ನು ನಿಷೇಧಿಸಿದೆ.

ಡೇರಾ ಮೂಲಗಳು ಪಂಥದ ಅನುಯಾಯಿಗಳ ಸಂಖ್ಯೆ ಸುಮಾರು 1.25 ಕೋಟಿ ಎಂದು ಅಂದಾಜಿಸಿದೆ. ಅದರ 38 ಶಾಖೆಗಳಲ್ಲಿ 21 ಹರಿಯಾಣದಲ್ಲಿದೆ.

ಡೇರಾ ಸಚ್ಚಾ ಸೌಧದ ರಾಜಕೀಯ ಪ್ರಭಾವ

ಧಾರ್ಮಿಕ ಪಂಥವಾಗಿದ್ದರೂ, ಡೇರಾ ಸಚ್ಚಾ ಸೌದಾ ಗಮನಾರ್ಹ ರಾಜಕೀಯ ಹಿಡಿತವನ್ನು ಹೊಂದಿದೆ. ಗುರ್ಮೀತ್ ರಾಮ್ ರಹೀಮ್ ನೇತೃತ್ವದಲ್ಲಿ ರಾಜಕೀಯ ವಿಭಾಗವನ್ನು ನಿರ್ವಹಿಸುತ್ತಿದೆ. ಈ ಪಂಥವು ಈ ಹಿಂದೆ ಶಿರೋಮಣಿ ಅಕಾಲಿ ದಳ, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. 2007 ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಡೇರಾ ಕಾಂಗ್ರೆಸ್ ಅನ್ನು ಬೆಂಬಲಿಸಿತು.

2014ರಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿತ್ತು. 2015 ರಲ್ಲಿ, ಡೇರಾ ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಬಿಜೆಪಿಯನ್ನು ಬಹಿರಂಗವಾಗಿ ಬೆಂಬಲಿಸಿತು. ಅಂದಾಜು 3,000 ಅನುಯಾಯಿಗಳು ಬಿಹಾರದಲ್ಲಿ ಪಕ್ಷದ ಪರ ಪ್ರಚಾರ ಮಾಡಿದರು.

ಡೇರಾದ ರಾಜಕೀಯ ಪ್ರಭಾವವು ಅದರ ದೊಡ್ಡ ತಳ ಸಮುದಾಯದ ಅನುಯಾಯಿಗಳ ನೆಲೆಯಿಂದ ಹುಟ್ಟಿಕೊಂಡಿದೆ. ಇದು ಗಮನಾರ್ಹ ಸಂಖ್ಯೆಯ ದಲಿತರನ್ನು ಒಳಗೊಂಡಿದೆ. ಉದಾಹರಣೆಗೆ ಮಜಾಬಿ ಸಿಖ್‌ಗಳು (ಪರಿವರ್ತಿತ ಸಿಖ್ಖರು).

ರಾಜಕೀಯ ವಿಶ್ಲೇಷಕರು ಗಮನಿಸಿದಂತೆ ಹರಿಯಾಣದಲ್ಲಿ ಮೇಲ್ಜಾತಿ ಮತಗಳು ಸಾಮಾನ್ಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿಭಜನೆಯಾಗುತ್ತವೆ. ಕೆಳಜಾತಿಯ ಡೇರಾ ಅನುಯಾಯಿಗಳು ತಮ್ಮ ನಾಯಕನ ಸೂಚನೆಗಳಿಗೆ ಅನುಗುಣವಾಗಿ ಮತ ಚಲಾಯಿಸುತ್ತಾರೆ.

ಇದನ್ನೂ ಓದಿ; ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...