Homeಮುಖಪುಟಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

ಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

- Advertisement -
- Advertisement -

ಅತ್ಯಾಚಾರ ಹಾಗೂ ಕೊಲೆ ಅಪರಾಧದಲ್ಲಿ ಜೈಲು ಪಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರಿಗೆ ಅಕ್ಟೋಬರ್ 1 ರಂದು 20 ದಿನಗಳ ಪೆರೋಲ್ ನೀಡಿದಾಗ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಂದ ನೇರ ದಾಳಿಗೆ ಒಳಗಾಯಿತು.

ರಾಮ್ ರಹೀಮ್ ಅವರ 15ನೇ ಪೆರೋಲ್ ಕೂಡ ಚುನಾವಣೆಗೆ ಹೊಂದಿಕೆಯಾಗುತ್ತಿದ್ದಂತೆ, “ಬಿಜೆಪಿಯು ತನ್ನ ಬೆಂಬಲವನ್ನು ಪಡೆಯಲು ಅತ್ಯಾಚಾರ ಮತ್ತು ಕೊಲೆ ಅಪರಾಧಿಗೆ ಪೆರೋಲ್ ನೀಡಿದೆ” ಎಂದು ಆರೋಪಿಸಲಾಗಿದೆ. ಆದರೆ, ಕೇವಲ ಬಿಜೆಪಿಗಷ್ಟೇ ಅಲ್ಲ, ಕಾಂಗ್ರೆಸ್‌ಗೂ ಲಾಭ ಎಂಬುದನ್ನು ಚುನಾವಣಾ ಫಲಿತಾಂಶ ತೋರಿಸಿದೆ.

ಡೇರಾ ಅನುಯಾಯಿಗಳಿಗೆ ನೆಲೆಯಾಗಿದೆ ಎಂದು ನಂಬಲಾದ 28 ವಿಧಾನಸಭಾ ಕ್ಷೇತ್ರಗಳಲ್ಲಿ 15 ಕಾಂಗ್ರೆಸ್, 10 ಬಿಜೆಪಿ, ಎರಡು ಇಂಡಿಯನ್ ನ್ಯಾಷನಲ್ ಲೋಕದಳ ಮತ್ತು ಒಬ್ಬರು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಅಂದರೆ, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶೇ.53.57, ಬಿಜೆಪಿ ಶೇ.35.71, ಐಎನ್‌ಎಲ್‌ಡಿ ಶೇ.7 ಮತ್ತು ಸ್ವತಂತ್ರ ಅಭ್ಯರ್ಥಿ ಶೇ.3.57 ಮತಗಳನ್ನು ಗಳಿಸಿದ್ದಾರೆ. ಬಹುತೇಕ ಹರಿಯಾಣ ಕಾಂಗ್ರೆಸ್ ನಾಯಕರು ರಾಮ್ ರಹೀಮ್ ಪೆರೋಲ್ ಬಗ್ಗೆ ಧ್ವನಿಯೆತ್ತದಿರಲು ಇದೂ ಒಂದು ಕಾರಣವಾಗಿರಬಹುದು ಎಂಬ ಮಾತುಗಳು ಕೇಳಬಂದಿವೆ.

ಫತೇಹಾಬಾದ್, ಕೈತಾಲ್, ಕುರುಕ್ಷೇತ್ರ, ಸಿರ್ಸಾ, ಕರ್ನಾಲ್ ಮತ್ತು ಹಿಸಾರ್ ಎಂಬ ಆರು ಹರ್ಯಾಣ ಜಿಲ್ಲೆಗಳನ್ನು ವ್ಯಾಪಿಸಿರುವ ಈ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ಫತೇಹಾಬಾದ್, ರತಿಯಾ, ತೋಹಾನಾ (ಅತಿ ಹೆಚ್ಚು ಡೇರಾ ಅನುಯಾಯಿಗಳನ್ನು ಹೊಂದಿರುವ), ಕಲಾಯತ್, ಕೈತಾಲ್, ಶಹಾಬಾದ್, ಥಾನೇಸರ್, ಪೆಹೋವಾ, ಕಲನ್‌ವಾಲಿ, ಸಿರ್ಸಾ, ಎಲೆನಾಬಾದ್, ಆದಂಪುರ, ಉಕ್ಲಾನಾ ಮತ್ತು ನಾರ್ನಾಂಡ್‌ಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

ಹನ್ಸಿ, ಬರ್ವಾಲಾ, ಹಿಸಾರ್, ನಲ್ವಾ, ಅಸಂಧ್, ಘರೋಂಡಾ, ಕರ್ನಾಲ್, ಇಂದ್ರಿ, ನಿಲೋಖೇರಿ, ಲಾಡ್ವಾ ಮತ್ತು ಪುಂಡ್ರಿಯಲ್ಲಿ ಬಿಜೆಪಿ ಗೆದ್ದಿದೆ. ದಾಬ್ವಾಲಿ ಮತ್ತು ರಾನಿಯಾದಲ್ಲಿ ಐಎನ್‌ಎಲ್‌ಡಿ ಗೆದ್ದರೆ, ಹಿಸಾರ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಸಾವಿತ್ರಿ ಜಿಂದಾಲ್ ಗೆದ್ದಿದ್ದಾರೆ.

ಬಿಜೆಪಿಗೆ ಡೇರಾದ ಬೆಂಬಲ?

ಅಕ್ಟೋಬರ್ 3 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರು ಬಿಜೆಪಿಗೆ ಮತ ಹಾಕುವಂತೆ ಸಿರ್ಸಾದ ಡೇರಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಧ್ಯಮ ವರದಿಗಳು ಈ ಸಂದೇಶವನ್ನು ಸತ್ಸಂಗ (ಸಭೆ) ಸಮಯದಲ್ಲಿ ತಿಳಿಸಲಾಗಿದೆ ಎಂದು ಹೇಳುತ್ತದೆ. ಅಲ್ಲಿ ಅನುಯಾಯಿಗಳಿಗೆ ಕನಿಷ್ಠ ಐದು ಮತದಾರರನ್ನು ಬೂತ್‌ಗೆ ಕರೆತರಲು ಸೂಚಿಸಲಾಯಿತು ಎಂದು ತಿಳಿದುಬಂದಿದೆ.

ಗುರ್ಮೀತ್ ರಾಮ್ ರಹೀಮ್ ಈ ಸತ್ಸಂಗವನ್ನು ವಾಸ್ತವಿಕವಾಗಿ ಆಯೋಜಿಸಿದ್ದಾರೋ ಇಲ್ಲವೋ ಎಂಬುದು ಅಸ್ಪಷ್ಟವಾಗಿದೆ. ಏಕೆಂದರೆ, ಭಾರತದ ಚುನಾವಣಾ ಆಯೋಗವು ಆನ್‌ಲೈನ್‌ನಲ್ಲಿ ಸತ್ಸಂಗಗಳನ್ನು ಪ್ರಚಾರ ಮಾಡುವುದನ್ನು ಅಥವಾ ನಡೆಸುವುದನ್ನು ನಿಷೇಧಿಸಿದೆ.

ಡೇರಾ ಮೂಲಗಳು ಪಂಥದ ಅನುಯಾಯಿಗಳ ಸಂಖ್ಯೆ ಸುಮಾರು 1.25 ಕೋಟಿ ಎಂದು ಅಂದಾಜಿಸಿದೆ. ಅದರ 38 ಶಾಖೆಗಳಲ್ಲಿ 21 ಹರಿಯಾಣದಲ್ಲಿದೆ.

ಡೇರಾ ಸಚ್ಚಾ ಸೌಧದ ರಾಜಕೀಯ ಪ್ರಭಾವ

ಧಾರ್ಮಿಕ ಪಂಥವಾಗಿದ್ದರೂ, ಡೇರಾ ಸಚ್ಚಾ ಸೌದಾ ಗಮನಾರ್ಹ ರಾಜಕೀಯ ಹಿಡಿತವನ್ನು ಹೊಂದಿದೆ. ಗುರ್ಮೀತ್ ರಾಮ್ ರಹೀಮ್ ನೇತೃತ್ವದಲ್ಲಿ ರಾಜಕೀಯ ವಿಭಾಗವನ್ನು ನಿರ್ವಹಿಸುತ್ತಿದೆ. ಈ ಪಂಥವು ಈ ಹಿಂದೆ ಶಿರೋಮಣಿ ಅಕಾಲಿ ದಳ, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. 2007 ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಡೇರಾ ಕಾಂಗ್ರೆಸ್ ಅನ್ನು ಬೆಂಬಲಿಸಿತು.

2014ರಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿತ್ತು. 2015 ರಲ್ಲಿ, ಡೇರಾ ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಬಿಜೆಪಿಯನ್ನು ಬಹಿರಂಗವಾಗಿ ಬೆಂಬಲಿಸಿತು. ಅಂದಾಜು 3,000 ಅನುಯಾಯಿಗಳು ಬಿಹಾರದಲ್ಲಿ ಪಕ್ಷದ ಪರ ಪ್ರಚಾರ ಮಾಡಿದರು.

ಡೇರಾದ ರಾಜಕೀಯ ಪ್ರಭಾವವು ಅದರ ದೊಡ್ಡ ತಳ ಸಮುದಾಯದ ಅನುಯಾಯಿಗಳ ನೆಲೆಯಿಂದ ಹುಟ್ಟಿಕೊಂಡಿದೆ. ಇದು ಗಮನಾರ್ಹ ಸಂಖ್ಯೆಯ ದಲಿತರನ್ನು ಒಳಗೊಂಡಿದೆ. ಉದಾಹರಣೆಗೆ ಮಜಾಬಿ ಸಿಖ್‌ಗಳು (ಪರಿವರ್ತಿತ ಸಿಖ್ಖರು).

ರಾಜಕೀಯ ವಿಶ್ಲೇಷಕರು ಗಮನಿಸಿದಂತೆ ಹರಿಯಾಣದಲ್ಲಿ ಮೇಲ್ಜಾತಿ ಮತಗಳು ಸಾಮಾನ್ಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿಭಜನೆಯಾಗುತ್ತವೆ. ಕೆಳಜಾತಿಯ ಡೇರಾ ಅನುಯಾಯಿಗಳು ತಮ್ಮ ನಾಯಕನ ಸೂಚನೆಗಳಿಗೆ ಅನುಗುಣವಾಗಿ ಮತ ಚಲಾಯಿಸುತ್ತಾರೆ.

ಇದನ್ನೂ ಓದಿ; ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...