Homeಕರ್ನಾಟಕಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ...

- Advertisement -
- Advertisement -

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇತ್ತೀಚೆಗೆ ತನ್ನ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಸುಮಾರು 16 ವಿವಿಧ ಅಕಾಡೆಮಿ ಹಾಗೂ ಅಧ್ಯಯನ ಕೇಂದ್ರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿತ್ತು. ಆದರೆ, ಹೀಗೆ ಸರ್ಕಾರದಿಂದ ಅಕಾಡೆಮಿಗೆ ಆಯ್ಕೆಯಾದ ಸದಸ್ಯರ ಪೈಕಿ ಬಹುತೇಕರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಭಟ್ಟಂಗಿಗಳು, ಅಕಾಡೆಮಿ ನೇಮಕಾತಿಯಲ್ಲಿ ಸಾಮಾಜಿಕ ಭೌಗೋಳಿಕ ನ್ಯಾಯ ಪಾಲಿಸಿಲ್ಲ ಎಂಬುದು ಕಾಂಗ್ರೆಸ್ ನಾಯಕರ ಆರೋಪ.

ರಾಜ್ಯದ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು-ಸದಸ್ಯರನ್ನು ನೇಮಕ ಮಾಡುವುದು ಹಾಗೂ ಈ ನೇಮಕಾತಿ ಹಿಂದೆಯೇ ಕೆಲವು ಅಪಸ್ವರಗಳು, ಟೀಕೆಟಿಪ್ಪಣಿಗಳು ಕೇಳಿಬರುವುದು ಸಾಹಿತ್ಯ ವಲಯದಲ್ಲಿ ತೀರಾ ಸಾಂಪ್ರದಾಯಿಕ ಮತ್ತು ವಾಡಿಕೆ. ಅಂತಹದ್ದೇ ವಾಡಿಕೆಯ ಟೀಕೆ ಈ ಬಾರಿಯೂ ಕೇಳಿಬಂದದ್ದು ಅಚ್ಚರಿ ಏನಲ್ಲ.

ಅಸಲಿಗೆ ಅಕಾಡೆಮಿ ಹಂತದ ಅಧ್ಯಕ್ಷರು ಸದಸ್ಯರ ಆಯ್ಕೆ ಕುರಿತ ಕಾಂಗ್ರೆಸ್ ನಾಯಕರ ಇಂತಹ ಟೀಕೆಗಳಿಗೆ ನಿಜಕ್ಕೂ ಅಷ್ಟಾಗಿ ಮಾನ್ಯತೆ ಸಿಕ್ಕಿರಲಿಲ್ಲ. ಅಕ್ಷರಶಃ ಕೆಲವು ದಿನ ಪತ್ರಿಕೆಗಳಲ್ಲಿ ಮಾತ್ರ ಈ ಹೇಳಿಕೆ ಮುದ್ರಣವಾಗಿತ್ತು. ಆ ಮುದ್ರಣವೂ ಕೇವಲ ಮೂರು ಸಾಲುಗಳಿಗಷ್ಟೇ ಮೀಸಲಾಗಿತ್ತು.

ಆದರೆ, ಹೀಗೆ ಮೂರು ಸಾಲಿಗೆ ಮಾತ್ರ ಮೀಸಲಾಗಿದ್ದ ಕಾಂಗ್ರೆಸ್ ನಾಯಕರ ಟೀಕೆಗೆ ಮತ್ತಷ್ಟು ಮೈಲೇಜ್ ಕೊಟ್ಟದ್ದು ಸಚಿವ ಸಿ.ಟಿ. ರವಿ ಅವರ ಆ ಒಂದು ಹೇಳಿಕೆ.

ಅಕಾಡೆಮಿಗಳಿಗೆ ಸದಸ್ಯರ ನೇಮಕ ವಿಚಾರ ಕುರಿತಂತೆ ಮಾಧ್ಯಮಗಳ ಎದುರು ಏಕಾಏಕಿ ಹೇಳಿಕೆ ನೀಡಿದ್ದ ಸಿ.ಟಿ. ರವಿ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ಮನೆಹಾಳು ಜನರನ್ನು ದೂರ ಇಡಲಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಕಟ್ಟಲು ನಾವು ಬದ್ಧರಿದ್ದೇವೆ. ಆದರೆ, ಈ ಕ್ಷೇತ್ರವನ್ನು ಕದಡುವ, ಒಡೆಯುವ ಮನಸ್ಥಿತಿ ಇರುವ ಜನರನ್ನು ನೇಮಕ ಮಾಡಿಲ್ಲ. ಈ ಸಲ ಮನೆಹಾಳು ಮಂದಿಗೆ ಅಧಿಕಾರ ಕೊಟ್ಟಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಚಿವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಕಿಡಿ ಹೊತ್ತಿಸಿದೆ. ಈ ಹೇಳಿಕೆಯ ವಿರುದ್ಧ ಕನ್ನಡ ಸಾಹಿತ್ಯ ಲೋಕ ಇದೀಗ ಮುರಿದುಕೊಂಡು ಬಿದ್ದಿದೆ. ಸಿ.ಟಿ. ರವಿ ಅವರ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಗುರಿಪಡಿಸಲಾಗುತ್ತಿದೆ.

ಬಿಜೆಪಿ ಸರ್ಕಾರ ಪ್ರಸ್ತುತ ಅಕಾಡೆಮಿ ಸದಸ್ಯರ ಆಯ್ಕೆ ವಿಚಾರದಲ್ಲಿ ಮನೆಹಾಳರನ್ನು ಅಧಿಕಾರದ ವ್ಯಾಪ್ತಿಗೆ ಬಿಟ್ಟುಕೊಂಡಿಲ್ಲ ಎಂದಾದರೆ ಈವರೆಗೆ ಅಕಾಡೆಮಿಯಲ್ಲಿ ಕೆಲಸ ನಿರ್ವಹಿಸಿದವರು ಮನೆಹಾಳು ಜನರೇ? ಸರಿ, ಸಚಿವರು ಹೇಳಿದಂತೆ ಹಿಂದೆಲ್ಲ ನೇಮಕಗೊಂಡ ಮನೆಹಾಳರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಅಂತ ನೋಡೋಣ. ಬೇರೆ ಅಕ್ಯಾಡೆಮಿಗಳ ಮಾತಿರಲಿ, ಸಾಹಿತ್ಯ ಅಕಾಡೆಮಿಯನ್ನೇ ಪರಿಗಣಿಸುವುದಾದರೆ ಅ.ನ.ಕೃ, ಕೆ.ವಿ.ಶಂಕರೇಗೌಡ್ರು, ಹಾ.ಮಾ.ನಾಯಕ್, ನಿತ್ಯೋತ್ಸವ ಕವಿ ನಿಸಾರ್ ಅಹಮದ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಬರಗೂರು ರಾಮಚಂದ್ರಪ್ಪ, ಗಿರಡ್ಡಿ ಗೋವಿಂದರಾಜರು, ಗೀತಾ ನಾಗಭೂಷಣ…. ಇಂತವರೆಲ್ಲ ಅಧ್ಯಕ್ಷರಾಗಿದ್ದಂತವರು. ಇಲ್ಲಿಯವರೆಗೆ ಇವರನ್ನೆಲ್ಲ ಕನ್ನಡದ, ಕರ್ನಾಟಕದ ಹೆಮ್ಮೆ ಎಂದೇ ನಾವೇ ಭಾವಿಸಿದ್ದೆವು. ಆದರೆ ಸಚಿವರ ಗೀತೋಪದೇಶದಿಂದ ಇವರೆಲ್ಲ ಅನಾಮತ್ತು `ಮನೆಹಾಳರ’ ಪಟ್ಟಿಗೆ ಸೇರಿದಂತಾಗಿದೆ. ಇಂತಹ ಹೇಳಿಕೆಗಳ ಮೂಲಕ ಸಚಿವ ಸಿ.ಟಿ. ರವಿ ಕನ್ನಡ ಸಾಹಿತಿಗಳನ್ನು ಅವಮಾನಿಸಿದ್ದಾರೆ ಎಂಬುದು ಟೀಕಾಕಾರದ ಪ್ರಬಲ ವಾದ.

ಆದರೆ, ಸಚಿವ ಸಿ.ಟಿ. ರವಿ ಹಾಗೂ ಅವರ ಟೀಕಾಕಾರರ ನಡುವಿನ ವಾಗ್ಯುದ್ಧ ಜೋರಾಗುತ್ತಿದ್ದಂತೆ ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಮಾತುಗಳು ಸರ್ಕಾರಕ್ಕೆ ಮತ್ತು ಸಚಿವರಿಗೆ ಮತ್ತಷ್ಟು ಇರಿಸುಮುರಿಸಿಗೆ ಕಾರಣವಾಗಿದೆ.

ಅಸಲಿಗೆ ಬ್ಯಾರಿ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿರುವ ಡಾ. ಮುನೀರ್ ಬಾವ, ಫಝಲ್ ಆಸೈಗೋಳಿ ಮತ್ತು ಸಿರಾಜುದ್ದೀನ್ ಮುಡಿಪು ಎಂಬ ಮೂವರೂ ಸಾಹಿತಿಗಳಲ್ಲ, ಕವಿಗಳೂ ಅಲ್ಲ, ಅಲ್ಲದೆ ಇವರಿಗೆ ಬ್ಯಾರಿ ಭಾಷೆಯೂ ಬರಲ್ಲ. ಈ ಮೂವರು ಇತ್ತೀಚೆಗೆ ಸ್ವತಃ ಮಾಧ್ಯಮಗಳ ಎದುರು ಬಹಿರಂಗ ಹೇಳಿಕೆ ನೀಡಿದ್ದು, “ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ. ಅಲ್ಲದೆ, ಈ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆಯೂ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆ.

ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಈ ಮಾತುಗಳು ಹಾಗೂ ಗೊಂದಲ ಅಸಲಿಗೆ ಮನೆಹಾಳರು ಯಾರು? ಎಂಬ ಕುರಿತು ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಕಡೆಗೆ ಬೊಟ್ಟು ಮಾಡುತ್ತಿದೆ. ಅಸಲಿಗೆ ಬ್ಯಾರಿ ಅಕಾಡೆಮಿ ಕೆಲಸವೇನು? ಇತಿಹಾಸವೇನು? ಇಲ್ಲಿದೆ ಡೀಟೈಲ್ಸ್

ಏನದು ಬ್ಯಾರಿ ಅಕಾಡೆಮಿ ರಾದ್ಧಾಂತ?
ಕನ್ನಡ ರಾಜ್ಯದ ನಾಡಭಾಷೆಯಾದರೂ, ಕರ್ನಾಟಕ ಎಂಬುದು ವಿವಿಧ ಭಾಷೆ ಮತ್ತು ಶ್ರೀಮಂತ ಸಂಸ್ಕೃತಿಗಳ ಕಣಜ. ಪ್ರತಿ 40 ಕಿಮಿ ಗೂ ಭಾಷೆ ಮತ್ತು ಸಂಸ್ಕೃತಿಯಲ್ಲಿರುವ ಬದಲಾವಣೆ, ಜನರ ಬದುಕುವ ಕ್ರಮದಲ್ಲಿನ ವಿಭಿನ್ನತೆಯನ್ನು ನಾವಿಲ್ಲಿ ಕಾಣಬಹುದು.ಭಾಗಶಃ ಭಾರತದ ಬೇರೆ ಯಾವ ರಾಜ್ಯಕ್ಕೂ ಇಲ್ಲದಷ್ಟು ವಿವಿಧತೆಯ ಶ್ರೀಮಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ ಎಂದರೆ ತಪ್ಪಾಗಲಾರದು.

ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ ಮೂಲಕ ಭಾಷೆಯ ಅಭಿವೃದ್ಧಿಗೆ, ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರೇರಣೆ ನೀಡಲಾಗುತ್ತಿದೆ. ಇದೇ ರೀತಿ ಕನ್ನಡದ ಸಹೋದರ ಭಾಷೆಯಾದ ತುಳು, ಕೊಂಕಣಿ, ಕೊಡವ ಭಾಷೆಗಳ ಅಭಿವೃದ್ಧಿಗೂ ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಅಕಾಡೆಮಿ ರಚಿಸಲಾಗಿದೆ.
ಒಂದು ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ ಎಂದಾದರೆ ಆ ಭಾಷೆಗೆ ಸರ್ಕಾರದಿಂದ ಮಾನ್ಯತೆ ಸಿಕ್ಕಿದೆ ಎಂದೇ ಅರ್ಥ. ಕೊಂಕಣಿ, ಕೊಡವ ಹಾಗೂ ತುಳು ಭಾಷೆಯಂತೆ ಕರಾವಳಿ ಭಾಗದಲ್ಲಿ ಪ್ರಚಲಿತವಿರುವ ಮತ್ತೊಂದು ಭಾಷೆಯೇ ಬ್ಯಾರಿ. ಉರ್ದು ಬಾಷೆಗೂ ಅಕಾಡೆಮಿ ರಚಿಸಿರುವ ರಾಜ್ಯ ಸರ್ಕಾರ ತೀರಾ ಇತ್ತೀಚೆಗೆ ಬ್ಯಾರಿ ಭಾಷೆಗೂ ಒಂದು ಅಕಾಡೆಮಿ ರಚಿಸಿತ್ತು.
ಕರಾವಳಿ ಹಾಗೂ ಕೊಡಗು ಭಾಗದಲ್ಲಿ ಬಹುಪಾಲು ಇಸ್ಲಾಂ ಜನರಿಂದ ಬಳಕೆಯಾಗುತ್ತಿರುವ ಭಾಷೆಗಳಲ್ಲಿ ಬ್ಯಾರಿ ಎಂಬುದು ಚಿರಪರಿಚಿತ ಭಾಷೆ. ಕನ್ನಡ ಭಾಷೆಯಷ್ಟೇ ಪ್ರಾಚೀನ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯಲ್ಲಿ ಜನಪದ ಸಾಹಿತ್ಯದ ಭಂಡಾರವೇ ಇದೆ. ಬ್ಯಾರಿ ಜನರ ಮದುವೆ ಸಮಾರಂಭಗಳಲ್ಲಿ, ಹಬ್ಬದ ದಿನಗಳಲ್ಲಿ, ಧಾರ್ಮಿಕ ದಿನಾಚರಣೆಗಳ ಸಂದರ್ಭದಲ್ಲಿ ಹೆಂಗಸರು, ಮಕ್ಕಳು ಹಾಗೂ ಪುರುಷರು ಬ್ಯಾರಿ ಜನಪದ ಸಾಹಿತ್ಯವನ್ನು ಹಾಡಿ ಕುಣಿದು ಸಂತೋಷ ಪಡುತ್ತಾರೆ. ಆದರೆ, ಇಂತಹ ಬ್ಯಾರಿ ಜನಪದ ಸಾಹಿತ್ಯ ಇಂದು ನವ ನಾಗರಿಕತೆಯ ಸೆಳೆತಕ್ಕೆ ಸಿಲುಕಿ ಅಳಿವಿನ ಅಂಚಿಗೆ ಸರಿದಿದೆ.

 

 

ಹೀಗಾಗಿ ಇಂತಹ ಶ್ರೀಮಂತ ಜನಪದ ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಬ್ಯಾರಿ ಸಮಾಜದ ಪ್ರತಿಭಾವಂತ ಲೇಖಕರು, ಲೇಖಕಿಯರ ಪ್ರತಿಭೆಯನ್ನು ಪೋಷಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಈ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿತ್ತು. ಇದರ ಕೇಂದ್ರ ಕಚೇರಿ ಮಂಗಳೂರಿನಲ್ಲಿದೆ.

ಕಳೆದ ಒಂದು ದಶಕದಿಂದ ಬ್ಯಾರಿ ಭಾಷೆ, ಸಾಹಿತ್ಯ ಕಲೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬ್ಯಾರಿ ಸಂಸ್ಕೃತಿಗೆ ಪೂರಕವಾಗಿ ಬ್ಯಾರಿಗಳ ವಿಶಿಷ್ಟ ಹಬ್ಬಗಳಾದ ಪೆರ್ನಾಲ್, ಸಂದೋಲ ಹಬ್ಬಗಳನ್ನು ಬ್ಯಾರಿ ಜನರ ನಡುವೆ ಸಡಗರದಿಂದ ಆಚರಿಸಲಾಗುತ್ತಿದೆ. ಬ್ಯಾರಿ ಜಾನಪದ ಸಂಗೀತ, ನಾಟಕಗಳಿಗೆ ಸಂಬಂಧಿಸಿದಂತೆ ಉತ್ಸವ, ಸಮಾವೇಶ, ಸಮ್ಮೇಳನ, ದಫ್ ಸ್ಪರ್ಧೆ, ಬ್ಯಾರಿ ನಾಟಕ ಸ್ಪರ್ಧೆ ಮತ್ತು ಬ್ಯಾರಿ ಜಾನಪದ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆಗಳಲ್ಲಿ ಬ್ಯಾರಿ ಅಕಾಡೆಮಿ ವತಿಯಿಂದ ಆಯೋಜಿಸಲಾಗುತ್ತಿದೆ.

ಅಳಿವಿನ ಅಂಚಿನಲ್ಲಿರುವ ಬ್ಯಾರಿ ಸಂಸ್ಕೃತಿಯನ್ನು ಭಾಷೆಯನ್ನು ಉಳಿಸಿಕೊಳ್ಳಲು ಇಂತಹ ಹತ್ತಾರು ಕಾರ್ಯಕ್ರಮಗಳ ಅಗತ್ಯ ಇರುವಂತೆ, ಇಂತಹ ಅಕಾಡೆಮಿಗಳಿಗೆ ಭಾಷೆಯ ಮೇಲೆ ಪ್ರೀತಿ ಇರುವ ಹಾಗೂ ಈ ಕ್ಷೇತ್ರದಲ್ಲಿ ವಿಫುಲ ಕೃಷಿ ಮಾಡಿರುವ ವ್ಯಕ್ತಿಗಳ ಅಗತ್ಯತೆಯೂ ಇದೆ. ಅಧಿಕಾರ ವಲಯದಲ್ಲಿ ಅಂತವರು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ.

ಆದರೆ, ಇಂತಹ ಅಕಾಡೆಮಿಗಳ ಜವಾಬ್ದಾರಿಯುತ ಹುದ್ದೆಗೆ ಆಡಳಿತದ ಚುಕ್ಕಾಣಿ ಹಿಡಿದಿರುವವರು ಅಷ್ಟೇ ಬೇಜವಾಬ್ದಾರಿಯಿಂದ ಬ್ಯಾರಿ ಭಾಷೆಯ ಕುರಿತು ಅರಿವಿಲ್ಲದ, ಸಾಹಿತಿಗಳಲ್ಲದ ಹಾಗೂ ಕೊನೆಗೆ ಈ ಹುದ್ದೆಯನ್ನು ಕೋರಿ ಅರ್ಜಿಯನ್ನೂ ಹಾಕದ ಅನಾಮಧೇಯ ಜನರನ್ನು ಆ ಸ್ಥಾನಗಳಿಗೆ ತಂದು ಕೂರಿಸಿರುವುದು ಯಾವ ಪುರುಷಾರ್ಥದ ಮನೆ ಉದ್ಧಾರಕ ಕೆಲಸ? ಎಂಬುದು ಪ್ರಸ್ತುತ ಸಾಹಿತ್ಯ ವಲಯದಲ್ಲಿ ಸಚಿವ ಸಿ.ಟಿ. ರವಿ ವಿರುದ್ಧ ಕೇಳಿಬರುತ್ತಿರುವ ಕಟುಪ್ರಶ್ನೆ. ಆದರೆ, ಈ ಕುರಿತ ಟೀಕೆಗೆ ಅವರು ಉತ್ತರಿಸಬೇಕು ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...