Homeಮುಖಪುಟದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

ದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

- Advertisement -
- Advertisement -

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇತ್ತಿಚೆಗಷ್ಟೆ ಅಧಿಕಾರ ಸ್ವೀಕರಿಸಿದ್ದ ಅತಿಶಿ ಮಾರ್ಲಿನಾ ಅವರ ವಸ್ತುಗಳನ್ನು ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಮುಖ್ಯಮಂತ್ರಿಯ ಸರ್ಕಾರಿ ಬಂಗಲೆಯಿಂದ ಹೊರಹಾಕಲಾಗಿದೆ ಎಂದು ಎಎಪಿ ಬುಧವಾರ ಆರೋಪಿಸಿದೆ. ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ವರದಿಯಾಗಿದೆ. ದೆಹಲಿ ಸಿಎಂ

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ಸಂಘರ್ಷ ಪ್ರಾರಂಭವಾಗುವ ಸೂಚನೆಯಿದ್ದು, ದೆಹಲಿ ಮುಖ್ಯಮಂತ್ರಿ ಕಚೇರಿಯು ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರು ಅತಿಶಿ ಅವರ ವಸ್ತುಗಳನ್ನು “ಬಿಜೆಪಿಯ ಆಜ್ಞೆಯ ಮೇರೆಗೆ” ಸರ್ಕಾರಿ ಬಂಗಲೆಯಿಂದ “ಬಲವಂತವಾಗಿ ತೆಗೆದುಹಾಕಿದ್ದಾರೆ” ಎಂದು ಎಎಪಿ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ದೆಹಲಿ ಮುಖ್ಯಮಂತ್ರಿ ಕಚೇರಿಯ ಆರೋಪಗಳಿಗೆ ಲೆಫ್ಟಿನೆಂಟ್ ಗವರ್ನರ್ ಕಚೇರಿ ಇನ್ನೂ ಪ್ರತಿಕ್ರಿಯಿಸಿಲ್ಲ. ಬಂಗಲೆಯು ವಿವಾದವು ಎಎಪಿ ಮತ್ತು ಬಿಜೆಪಿ ನಡುವೆ ಮತ್ತೊಂದು ಸುತ್ತಿನ ಘರ್ಷಣೆಯನ್ನು ಹುಟ್ಟುಹಾಕಿದೆ. ಎರಡೂ ಪಕ್ಷಗಳು ತಮ್ಮ ಪ್ರಕರಣವನ್ನು ಬೆಂಬಲಿಸಲು ದಾಖಲೆಗಳನ್ನು ಮುಂದಿಟ್ಟಿವೆ. ಬಂಗಲೆಯನ್ನು ಬಿಜೆಪಿ ಕಬಳಿಸಲು ಪ್ರಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ.

ಇದನ್ನೂಓದಿ: ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

ಸರ್ಕಾರಿ ನಿವಾಸದಿಂದ ಹಲವಾರು ಪೆಟ್ಟಿಗೆಗಳು ಮತ್ತು ಸಾಮಾನುಗಳನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ದೃಶ್ಯಗಳು ವೈರಲ್ ಆಗಿವೆ. ನಿವಾಸಕ್ಕೆ ಡಬಲ್ ಬೀಗ ಹಾಕಲಾಗಿದ್ದು, ಕೀಗಳನ್ನು ಹಸ್ತಾಂತರಿಸುವ ಬಗ್ಗೆ ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) ಸರಿಯಾದ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ಮುಖ್ಯಮಂತ್ರಿ ಅತಿಶಿ ಅವರ ವಸ್ತುಗಳನ್ನು ಮುಖ್ಯಮಂತ್ರಿ ನಿವಾಸದಿಂದ ಬಲವಂತವಾಗಿ ತೆಗೆದುಹಾಕಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿ ಆರೋಪಿಸಿದೆ.

ಇದನ್ನೂಓದಿ: ರಾಹುಲ್ ಗಾಂಧಿ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯಾವಕಾಶ ನೀಡಿದ ದೆಹಲಿ ಹೈಕೋರ್ಟ್

ದೆಹಲಿಯ ಈ ಹಿಂದಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅದನ್ನು ಬಂಗಲೆ ಖಾಲಿ ಮಾಡಿದ ಕೆಲವು ದಿನಗಳ ನಂತರ, ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಫ್ಲಾಗ್‌ಸ್ಟಾಫ್ ರಸ್ತೆಯಲ್ಲಿರುವ ಬಂಗಲೆ ಸಂಖ್ಯೆ 6ಕ್ಕೆ ಅತಿಶಿ ಸೋಮವಾರ ಸ್ಥಳಾಂತರಗೊಂಡಿದ್ದರು.

ಆತಿಶಿ ಅವರು ಸ್ಥಳಾಂತರಗೊಂಡ ಕೆಲವು ಗಂಟೆಗಳ ನಂತರ, ಬಂಗಲೆಯನ್ನು ಹೊಸ ಹಂಚಿಕೆಗಾಗಿ ಲೋಕೋಪಯೋಗಿ ಇಲಾಖೆ ಅಥವಾ ಪಿಡಬ್ಲ್ಯುಡಿಗೆ ಇನ್ನಷ್ಟೆ ಹಸ್ತಾಂತರಿಸಬೇಕಾಗಿದೆ ಎಂದು ಬಿಜೆಪಿ ಹೇಳಿಕೊಂಡಿತ್ತು.

ದೆಹಲಿ ಅಬಕಾರಿ ಪ್ರಕರಣದಲ್ಲಿ ಸುಮಾರು 6 ತಿಂಗಳುಗಳ ಕಾಲ ಜೈಲಿನಲ್ಲಿ ಕಳೆದಿದ್ದ ಮಾಜಿ ಮುಖ್ಯಮಂತ್ರಿ ಅರಂವಿದ್ ಕೇಜ್ರಿವಾಲ್ ಅವರು, ಪ್ರಕರಣದಲ್ಲಿ ಜಾಮೀನು ದೊರೆತು ಬಿಡುಗಡೆಯಾದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾಗಿ ಕೆಲವೆ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿ ಸಚಿವೆಯಾಗಿದ್ದ ಆತಿಶಿ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ದೆಹಲಿ ಸಿಎಂ

ವಿಡಿಯೊ ನೋಡಿ: ಪ್ರಬಲ ಜಾತಿ ಸಂಘಗಳಿಗೆ ಹಣ ಹರಿದುಬರುತ್ತೆ, ತಳಸಮುದಾಯಗಳ ಸಂಪನ್ಮೂಲ ಸಂಪೂರ್ಣ ಕಿತ್ತುಕೊಳ್ಳಲಾಗಿದೆ-ಸಿ.ಜಿ. ಲಕ್ಷ್ಮಿಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...