Homeಮುಖಪುಟಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

- Advertisement -
- Advertisement -

ಮೂವರು ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್‌ನ ಸೂರತ್ ಜಿಲ್ಲೆಯ ಮಂಗ್ರೋಲ್ ತಾಲೂಕಿನ ಬೋರ್ಸರನ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಓಡಿಸಿ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಒಂದು ವಾರದಲ್ಲಿ ಇಂತಹ ಎರಡನೇ ಘಟನೆ ನಡೆದಿದ್ದು, ಇದೆ ರೀತಿಯ ಘಟನೆ ಇತ್ತೀಚೆಗೆ ವಡೋದರಾದಲ್ಲಿ ಕೂಡಾ ನಡೆದಿತ್ತು.ಗುಜರಾತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತೆಯ ಸ್ನೇಹಿತನ ಕೂಗಾಟಕ್ಕೆ ಎಚ್ಚರಗೊಂಡ ಗ್ರಾಮಸ್ಥರು ಅರೆಬೆತ್ತಲೆ ಮತ್ತು ಗಾಯಗೊಂಡ ಅಪ್ರಾಪ್ತೆ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾಳಿಕೋರರು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮೊಬೈಲ್ ಫೋನ್‌ಗಳನ್ನು ಕದ್ದಿದ್ದಾರೆ. ಪೊಲೀಸರು ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್‌ನಲ್ಲಿರುವ ತನ್ನ ಸಹಪಾಠಿ ಸ್ನೇಹಿತನನ್ನು ಭೇಟಿಯಾಗಲು ಹುಡುಗಿ ಬಂದಿದ್ದರು ಎಂದು ಸಂತ್ರಸ್ತೆಯ ಕುಟುಂಬ ಹೇಳಿದೆ. ರಾತ್ರಿ 10:30 ರ ಸುಮಾರಿಗೆ, ಇತರ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ ನಂತರ, ಅವರು ಇಂಧನ ತುಂಬಿಸಲು ಬಿಗ್ ಬೊರ್ಸಾರಾ ಬಳಿಯ ಹೆದ್ದಾರಿ ಪೆಟ್ರೋಲ್ ಪಂಪ್‌ಗೆ ತೆರಳಿದ್ದರು. ಇದರ ನಂತರ ಅವರು ಸ್ವಲ್ಪ ಸಮಯ ರಸ್ತೆಯ ಪಕ್ಕದ ಹೊಲದಲ್ಲಿ ಕುಳಿತಿದ್ದಾಗ, ದಾಳಿಕೋರರು ಆಗಮಿಸಿ ಅಪರಾಧವನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಇಬ್ಬರು ಯೋಧರ ಅಪಹರಣ, ಒಬ್ಬರ ಮೃತದೇಹ ಮತ್ತೆ

ಸೂರತ್ ಗ್ರಾಮೀಣ ಪೊಲೀಸ್ ಅಧೀಕ್ಷಕ (ಗ್ರಾಮೀಣ) ಹಿತೇಶ್ ಜೋಯ್ಸರ್ ಮಾತನಾಡಿ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಕೊಸಾಂಬಾ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗ್ರೋಲ್ ತಾಲೂಕಿನ ಮೋಟಾ ಬೋರಸರ ಗ್ರಾಮದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದ್ದಾರೆ.

“ಬಾಲಕಿಯು ತನ್ನ ಕೋಚಿಂಗ್ ಕ್ಲಾಸ್‌ಗೆ ಹಾಜರಾದ ನಂತರ ತನ್ನ ಸ್ನೇಹಿತರನ್ನು ಭೇಟಿ ಮಾಡಲು ಕಿಮ್‌ಗೆ ಹೋಗಿದ್ದರು. ರಾತ್ರಿ 10.30ರ ಸುಮಾರಿಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ್ದಾಳೆ. ಅವಳು ಮತ್ತು ಅವಳ ಸ್ನೇಹಿತ ಮೋಟಾ ಬೋರ್ಸಾರಾ ಗ್ರಾಮದ ಬಳಿ ಹೆದ್ದಾರಿಯ ಉದ್ದಕ್ಕೂ ಪೆಟ್ರೋಲ್ ಪಂಪ್‌ಗೆ ಹೋಗುವ ದಾರಿಯಲ್ಲಿ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ ಮೂವರು ದುಷ್ಕರ್ಮಿಗಳು ಅವರ ಬಳಿಗೆ ಬಂದಿದ್ದರು ಎಂದು ಎಸ್‌ಪಿ ಹೇಳಿದ್ದಾರೆ.

“ಮೂವರು ಬಾಲಕಿಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾಗ ಆಕೆಯ ಸ್ನೇಹಿತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿ ಮತ್ತು ಅವರ ಸ್ನೇಹಿತನ ಮೊಬೈಲ್ ಫೋನ್‌ಗಳೊಂದಿಗೆ ಸ್ಥಳದಿಂದ ಪರಾರಿಯಾಗುವ ಮೊದಲು ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

“ಅಪರಾಧದಲ್ಲಿ ಭಾಗಿಯಾಗಿದ್ದ ಒಂದು ಬೈಕ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ. ಅವರು ಬಂಧಿಸಲ್ಪಟ್ಟ ನಂತರ, ನಾವು ಮೂರನೇ ಆರೋಪಿಯನ್ನೂ ಪತ್ತೆಹಚ್ಚುತ್ತೇವೆ” ಎಂದು ಅವರು ಹೇಳಿದ್ದಾರೆ.ಗುಜರಾತ್‌

ಹುಡುಗಿಯ ಸ್ನೇಹಿತ ಸ್ಥಳೀಯರನ್ನು ಎಚ್ಚರಿಸಿದ್ದು, ಅವರು ಅರ್ಧ ಗಂಟೆಯೊಳಗೆ ಘಟನಾ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. “ಅದರ ನಂತರ ಪೊಲೀಸರಿಗೂ ಸೂಚನೆ ನೀಡಲಾಗಿದ್ದು, ಅವರು ಕೂಡಾ ಸ್ವಲ್ಪ ಸಮಯದಲ್ಲೆ ಗ್ರಾಮಸ್ಥರ ಪ್ರಯತ್ನಗಳೊಂದಿಗೆ ಸೇರಿಕೊಂಡರು” ಎಂದು ಅವರು ಹೇಳಿದ್ದಾರೆ.

ಕೊಸಾಂಬ ಪೊಲೀಸರು BNS ಕಾಯಿದೆಯ ಸೆಕ್ಷನ್ 70(2), 115(2), 54, ಮತ್ತು 309(4) ಸೇರಿದಂತೆ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ. ಪ್ರಕರಣವು ದರೋಡೆಯನ್ನು ಸಹ ಒಳಗೊಂಡಿದ್ದು ಸೆಕ್ಷನ್ 352 ಮತ್ತು 351(3) ಸೆಕ್ಷನ್ ಕೂಡಾ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಕ್ಟೋಬರ್ 4 ರಂದು ವಡೋದರದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ ಮೂವರು ದುಷ್ಕರ್ಮಿಗಳು ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...