Homeಮುಖಪುಟಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

- Advertisement -
- Advertisement -

ಮೂವರು ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್‌ನ ಸೂರತ್ ಜಿಲ್ಲೆಯ ಮಂಗ್ರೋಲ್ ತಾಲೂಕಿನ ಬೋರ್ಸರನ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಓಡಿಸಿ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಒಂದು ವಾರದಲ್ಲಿ ಇಂತಹ ಎರಡನೇ ಘಟನೆ ನಡೆದಿದ್ದು, ಇದೆ ರೀತಿಯ ಘಟನೆ ಇತ್ತೀಚೆಗೆ ವಡೋದರಾದಲ್ಲಿ ಕೂಡಾ ನಡೆದಿತ್ತು.ಗುಜರಾತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತೆಯ ಸ್ನೇಹಿತನ ಕೂಗಾಟಕ್ಕೆ ಎಚ್ಚರಗೊಂಡ ಗ್ರಾಮಸ್ಥರು ಅರೆಬೆತ್ತಲೆ ಮತ್ತು ಗಾಯಗೊಂಡ ಅಪ್ರಾಪ್ತೆ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾಳಿಕೋರರು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮೊಬೈಲ್ ಫೋನ್‌ಗಳನ್ನು ಕದ್ದಿದ್ದಾರೆ. ಪೊಲೀಸರು ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್‌ನಲ್ಲಿರುವ ತನ್ನ ಸಹಪಾಠಿ ಸ್ನೇಹಿತನನ್ನು ಭೇಟಿಯಾಗಲು ಹುಡುಗಿ ಬಂದಿದ್ದರು ಎಂದು ಸಂತ್ರಸ್ತೆಯ ಕುಟುಂಬ ಹೇಳಿದೆ. ರಾತ್ರಿ 10:30 ರ ಸುಮಾರಿಗೆ, ಇತರ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ ನಂತರ, ಅವರು ಇಂಧನ ತುಂಬಿಸಲು ಬಿಗ್ ಬೊರ್ಸಾರಾ ಬಳಿಯ ಹೆದ್ದಾರಿ ಪೆಟ್ರೋಲ್ ಪಂಪ್‌ಗೆ ತೆರಳಿದ್ದರು. ಇದರ ನಂತರ ಅವರು ಸ್ವಲ್ಪ ಸಮಯ ರಸ್ತೆಯ ಪಕ್ಕದ ಹೊಲದಲ್ಲಿ ಕುಳಿತಿದ್ದಾಗ, ದಾಳಿಕೋರರು ಆಗಮಿಸಿ ಅಪರಾಧವನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಇಬ್ಬರು ಯೋಧರ ಅಪಹರಣ, ಒಬ್ಬರ ಮೃತದೇಹ ಮತ್ತೆ

ಸೂರತ್ ಗ್ರಾಮೀಣ ಪೊಲೀಸ್ ಅಧೀಕ್ಷಕ (ಗ್ರಾಮೀಣ) ಹಿತೇಶ್ ಜೋಯ್ಸರ್ ಮಾತನಾಡಿ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಕೊಸಾಂಬಾ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗ್ರೋಲ್ ತಾಲೂಕಿನ ಮೋಟಾ ಬೋರಸರ ಗ್ರಾಮದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದ್ದಾರೆ.

“ಬಾಲಕಿಯು ತನ್ನ ಕೋಚಿಂಗ್ ಕ್ಲಾಸ್‌ಗೆ ಹಾಜರಾದ ನಂತರ ತನ್ನ ಸ್ನೇಹಿತರನ್ನು ಭೇಟಿ ಮಾಡಲು ಕಿಮ್‌ಗೆ ಹೋಗಿದ್ದರು. ರಾತ್ರಿ 10.30ರ ಸುಮಾರಿಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ್ದಾಳೆ. ಅವಳು ಮತ್ತು ಅವಳ ಸ್ನೇಹಿತ ಮೋಟಾ ಬೋರ್ಸಾರಾ ಗ್ರಾಮದ ಬಳಿ ಹೆದ್ದಾರಿಯ ಉದ್ದಕ್ಕೂ ಪೆಟ್ರೋಲ್ ಪಂಪ್‌ಗೆ ಹೋಗುವ ದಾರಿಯಲ್ಲಿ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ ಮೂವರು ದುಷ್ಕರ್ಮಿಗಳು ಅವರ ಬಳಿಗೆ ಬಂದಿದ್ದರು ಎಂದು ಎಸ್‌ಪಿ ಹೇಳಿದ್ದಾರೆ.

“ಮೂವರು ಬಾಲಕಿಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾಗ ಆಕೆಯ ಸ್ನೇಹಿತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿ ಮತ್ತು ಅವರ ಸ್ನೇಹಿತನ ಮೊಬೈಲ್ ಫೋನ್‌ಗಳೊಂದಿಗೆ ಸ್ಥಳದಿಂದ ಪರಾರಿಯಾಗುವ ಮೊದಲು ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

“ಅಪರಾಧದಲ್ಲಿ ಭಾಗಿಯಾಗಿದ್ದ ಒಂದು ಬೈಕ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ. ಅವರು ಬಂಧಿಸಲ್ಪಟ್ಟ ನಂತರ, ನಾವು ಮೂರನೇ ಆರೋಪಿಯನ್ನೂ ಪತ್ತೆಹಚ್ಚುತ್ತೇವೆ” ಎಂದು ಅವರು ಹೇಳಿದ್ದಾರೆ.ಗುಜರಾತ್‌

ಹುಡುಗಿಯ ಸ್ನೇಹಿತ ಸ್ಥಳೀಯರನ್ನು ಎಚ್ಚರಿಸಿದ್ದು, ಅವರು ಅರ್ಧ ಗಂಟೆಯೊಳಗೆ ಘಟನಾ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. “ಅದರ ನಂತರ ಪೊಲೀಸರಿಗೂ ಸೂಚನೆ ನೀಡಲಾಗಿದ್ದು, ಅವರು ಕೂಡಾ ಸ್ವಲ್ಪ ಸಮಯದಲ್ಲೆ ಗ್ರಾಮಸ್ಥರ ಪ್ರಯತ್ನಗಳೊಂದಿಗೆ ಸೇರಿಕೊಂಡರು” ಎಂದು ಅವರು ಹೇಳಿದ್ದಾರೆ.

ಕೊಸಾಂಬ ಪೊಲೀಸರು BNS ಕಾಯಿದೆಯ ಸೆಕ್ಷನ್ 70(2), 115(2), 54, ಮತ್ತು 309(4) ಸೇರಿದಂತೆ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ. ಪ್ರಕರಣವು ದರೋಡೆಯನ್ನು ಸಹ ಒಳಗೊಂಡಿದ್ದು ಸೆಕ್ಷನ್ 352 ಮತ್ತು 351(3) ಸೆಕ್ಷನ್ ಕೂಡಾ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಕ್ಟೋಬರ್ 4 ರಂದು ವಡೋದರದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ ಮೂವರು ದುಷ್ಕರ್ಮಿಗಳು ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...