Homeಮುಖಪುಟಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

- Advertisement -
- Advertisement -

ಮೂವರು ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್‌ನ ಸೂರತ್ ಜಿಲ್ಲೆಯ ಮಂಗ್ರೋಲ್ ತಾಲೂಕಿನ ಬೋರ್ಸರನ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಓಡಿಸಿ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಒಂದು ವಾರದಲ್ಲಿ ಇಂತಹ ಎರಡನೇ ಘಟನೆ ನಡೆದಿದ್ದು, ಇದೆ ರೀತಿಯ ಘಟನೆ ಇತ್ತೀಚೆಗೆ ವಡೋದರಾದಲ್ಲಿ ಕೂಡಾ ನಡೆದಿತ್ತು.ಗುಜರಾತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತೆಯ ಸ್ನೇಹಿತನ ಕೂಗಾಟಕ್ಕೆ ಎಚ್ಚರಗೊಂಡ ಗ್ರಾಮಸ್ಥರು ಅರೆಬೆತ್ತಲೆ ಮತ್ತು ಗಾಯಗೊಂಡ ಅಪ್ರಾಪ್ತೆ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾಳಿಕೋರರು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮೊಬೈಲ್ ಫೋನ್‌ಗಳನ್ನು ಕದ್ದಿದ್ದಾರೆ. ಪೊಲೀಸರು ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್‌ನಲ್ಲಿರುವ ತನ್ನ ಸಹಪಾಠಿ ಸ್ನೇಹಿತನನ್ನು ಭೇಟಿಯಾಗಲು ಹುಡುಗಿ ಬಂದಿದ್ದರು ಎಂದು ಸಂತ್ರಸ್ತೆಯ ಕುಟುಂಬ ಹೇಳಿದೆ. ರಾತ್ರಿ 10:30 ರ ಸುಮಾರಿಗೆ, ಇತರ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ ನಂತರ, ಅವರು ಇಂಧನ ತುಂಬಿಸಲು ಬಿಗ್ ಬೊರ್ಸಾರಾ ಬಳಿಯ ಹೆದ್ದಾರಿ ಪೆಟ್ರೋಲ್ ಪಂಪ್‌ಗೆ ತೆರಳಿದ್ದರು. ಇದರ ನಂತರ ಅವರು ಸ್ವಲ್ಪ ಸಮಯ ರಸ್ತೆಯ ಪಕ್ಕದ ಹೊಲದಲ್ಲಿ ಕುಳಿತಿದ್ದಾಗ, ದಾಳಿಕೋರರು ಆಗಮಿಸಿ ಅಪರಾಧವನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಇಬ್ಬರು ಯೋಧರ ಅಪಹರಣ, ಒಬ್ಬರ ಮೃತದೇಹ ಮತ್ತೆ

ಸೂರತ್ ಗ್ರಾಮೀಣ ಪೊಲೀಸ್ ಅಧೀಕ್ಷಕ (ಗ್ರಾಮೀಣ) ಹಿತೇಶ್ ಜೋಯ್ಸರ್ ಮಾತನಾಡಿ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಕೊಸಾಂಬಾ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗ್ರೋಲ್ ತಾಲೂಕಿನ ಮೋಟಾ ಬೋರಸರ ಗ್ರಾಮದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದ್ದಾರೆ.

“ಬಾಲಕಿಯು ತನ್ನ ಕೋಚಿಂಗ್ ಕ್ಲಾಸ್‌ಗೆ ಹಾಜರಾದ ನಂತರ ತನ್ನ ಸ್ನೇಹಿತರನ್ನು ಭೇಟಿ ಮಾಡಲು ಕಿಮ್‌ಗೆ ಹೋಗಿದ್ದರು. ರಾತ್ರಿ 10.30ರ ಸುಮಾರಿಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ್ದಾಳೆ. ಅವಳು ಮತ್ತು ಅವಳ ಸ್ನೇಹಿತ ಮೋಟಾ ಬೋರ್ಸಾರಾ ಗ್ರಾಮದ ಬಳಿ ಹೆದ್ದಾರಿಯ ಉದ್ದಕ್ಕೂ ಪೆಟ್ರೋಲ್ ಪಂಪ್‌ಗೆ ಹೋಗುವ ದಾರಿಯಲ್ಲಿ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ ಮೂವರು ದುಷ್ಕರ್ಮಿಗಳು ಅವರ ಬಳಿಗೆ ಬಂದಿದ್ದರು ಎಂದು ಎಸ್‌ಪಿ ಹೇಳಿದ್ದಾರೆ.

“ಮೂವರು ಬಾಲಕಿಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾಗ ಆಕೆಯ ಸ್ನೇಹಿತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿ ಮತ್ತು ಅವರ ಸ್ನೇಹಿತನ ಮೊಬೈಲ್ ಫೋನ್‌ಗಳೊಂದಿಗೆ ಸ್ಥಳದಿಂದ ಪರಾರಿಯಾಗುವ ಮೊದಲು ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

“ಅಪರಾಧದಲ್ಲಿ ಭಾಗಿಯಾಗಿದ್ದ ಒಂದು ಬೈಕ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ. ಅವರು ಬಂಧಿಸಲ್ಪಟ್ಟ ನಂತರ, ನಾವು ಮೂರನೇ ಆರೋಪಿಯನ್ನೂ ಪತ್ತೆಹಚ್ಚುತ್ತೇವೆ” ಎಂದು ಅವರು ಹೇಳಿದ್ದಾರೆ.ಗುಜರಾತ್‌

ಹುಡುಗಿಯ ಸ್ನೇಹಿತ ಸ್ಥಳೀಯರನ್ನು ಎಚ್ಚರಿಸಿದ್ದು, ಅವರು ಅರ್ಧ ಗಂಟೆಯೊಳಗೆ ಘಟನಾ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. “ಅದರ ನಂತರ ಪೊಲೀಸರಿಗೂ ಸೂಚನೆ ನೀಡಲಾಗಿದ್ದು, ಅವರು ಕೂಡಾ ಸ್ವಲ್ಪ ಸಮಯದಲ್ಲೆ ಗ್ರಾಮಸ್ಥರ ಪ್ರಯತ್ನಗಳೊಂದಿಗೆ ಸೇರಿಕೊಂಡರು” ಎಂದು ಅವರು ಹೇಳಿದ್ದಾರೆ.

ಕೊಸಾಂಬ ಪೊಲೀಸರು BNS ಕಾಯಿದೆಯ ಸೆಕ್ಷನ್ 70(2), 115(2), 54, ಮತ್ತು 309(4) ಸೇರಿದಂತೆ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ. ಪ್ರಕರಣವು ದರೋಡೆಯನ್ನು ಸಹ ಒಳಗೊಂಡಿದ್ದು ಸೆಕ್ಷನ್ 352 ಮತ್ತು 351(3) ಸೆಕ್ಷನ್ ಕೂಡಾ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಕ್ಟೋಬರ್ 4 ರಂದು ವಡೋದರದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ ಮೂವರು ದುಷ್ಕರ್ಮಿಗಳು ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...