Homeಫ್ಯಾಕ್ಟ್‌ಚೆಕ್FACT CHECK : ಮೊಬೈಲ್ ಕಿತ್ತುಕೊಂಡ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದ ಮಗ..ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK : ಮೊಬೈಲ್ ಕಿತ್ತುಕೊಂಡ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದ ಮಗ..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಮೊಬೈಲ್‌ ಕಿತ್ತುಕೊಂಡಿದ್ದಕ್ಕೆ ಮಗುವೊಂದು ಬ್ಯಾಟ್‌ನಿಂದ ತನ್ನ ತಾಯಿಯ ತಲೆಗೆ ಹೊಡೆದ ವಿಡಿಯೋವೊಂದು ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ವಿಡಿಯೋ ಹಂಚಿಕೊಂಡ ಅನೇಕರು “ಇದು ನಿಮ್ಮ ಮನೆಯಲ್ಲೂ ಸಂಭವಿಸಬಹುದು” ಎಂದು ಬರೆದುಕೊಂಡಿದ್ದರು. ಕೆಲ ಮಾಧ್ಯಮಗಳು ಕೂಡ ವಿಡಿಯೋ ಹಂಚಿಕೊಂಡಿತ್ತು.

ವಿಡಿಯೋದಲ್ಲಿ ಬೆಡ್ ಮೇಲೆ ಕುಳಿತು ಮೊಬೈಲ್ ಒತ್ತುತ್ತಿದ್ದ ಮಗುವಿನ ಕೈಯಿಂದ ಮೊಬೈಲ್ ಕಿತ್ತುಕೊಳ್ಳುವ ತಾಯಿ ಗದರಿಸುತ್ತಾರೆ, ಓದುವಂತೆ ಸೂಚಿಸುತ್ತಾರೆ. ತಾಯಿಯ ಬೈಗುಳಕ್ಕೆ ಮಗು ಪಕ್ಕದಲ್ಲಿರುವ ಪುಸ್ತಕ ಎತ್ತಿಕೊಂಡು ಓದಲು ಶುರು ಮಾಡುತ್ತದೆ. ತಾಯಿ ನೆಲದಲ್ಲಿ ಕುಳಿತು ಊಟ ಮಾಡುತ್ತಿರುತ್ತಾರೆ. ಸ್ವಲ್ಪ ಹೊತ್ತಿನ ಬಳಿಕ ಮಗು ಪಕ್ಕದಲೇ ಇದ್ದ ಕ್ರಿಕೆಟ್ ಬ್ಯಾಟ್‌ ತೆಗೆದುಕೊಂಡು ತಾಯಿಯ ತಲೆಗೆ ಹೊಡೆಯುವ ದೃಶ್ಯವಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನಿಜವಾದುದ್ದು ಅಲ್ಲ, ಅದೊಂದು ಸ್ಕ್ರಿಪ್ಟೆಡ್ ವಿಡಿಯೋ ಆಗಿದೆ. ಮೊಬೈಲ್ ದುಷ್ಪರಿಣಾಮಗಳ ಕುರಿತು ಮಾಡಿದ ಜಾಗೃತಿ ವಿಡಿಯೋ.

‘ಐಡಿಯಾಸ್ ಫ್ಯಾಕ್ಟರಿ’ ಎಂಬ ಫೇಸ್‌ಬುಕ್ ಪೇಜ್ ನಿಯಮಿತವಾಗಿ ಇಂತಹ ವಿಡಿಯೋಗಳನ್ನು ಮಾಡುತ್ತಿರುತ್ತದೆ. ವಿಡಿಯೋ ಪೋಸ್ಟ್ ಮಾಡುವಾಗ “ಇದು ಸ್ಕ್ರಿಪ್ಟೆಡ್ ವಿಡಿಯೋ, ಮನೋರಂಜನೆ ಮತ್ತು ಶೈಕ್ಷಣಿಕ” ಉದ್ದೇಶಕ್ಕೆ ಮಾಡಲಾಗಿದೆ ಎಂದು ಸೂಚನೆಯನ್ನೂ ಪೇಜ್‌ನಲ್ಲಿ ನೀಡುತ್ತದೆ.

ತಾಯಿಯ ತಲೆಗೆ ಮಗು ಬ್ಯಾಟ್‌ನಿಂಡ ಹೊಡೆದ ವಿಡಿಯೋಗು “ಇದು ಸ್ಕ್ರಿಪ್ಟೆಡ್ ವಿಡಿಯೋ” ಎಂದು ಫೇಸ್‌ಬುಕ್ ಪೇಜ್ ಸೂಚನೆ ಹಾಕಿತ್ತು.

ಅಕ್ಟೋಬರ್ 1ರಂದು ಕೂಡ ವೈರಲ್ ವಿಡಿಯೋ ರೀತಿಯದ್ದೇ ಮತ್ತೊಂದು ವಿಡಿಯೋವನ್ನ ಐಡಿಯಾಸ್ ಫ್ಯಾಕ್ಟರಿ ಹಂಚಿಕೊಂಡಿತ್ತು. ಅದರಲ್ಲೂ ಮೊಬೈಲ್ ದುಷ್ಪರಿಣಾಮಗಳ ಕುರಿತ ದೃಶ್ಯವೊಂದನ್ನು ತೋರಿಸಿತ್ತು. ಆ ವಿಡಿಯೋ ಮತ್ತು ವೈರಲ್ ಆಗುತ್ತಿರುವ ವಿಡಿಯೋ ಒಂದೇ ಜಾಗದಲ್ಲಿ ಶೂಟ್ ಮಾಡಲಾಗಿತ್ತು. ಎರಡೂ ವಿಡಿಯೋಗಳಲ್ಲೂ ಟಿವಿ, ಫೋಟೋ ಒಂದೇ ರೀತಿ ಇರುವುದನ್ನು ನೋಡಬಹುದು.

ಒಟ್ಟಿನಲ್ಲಿ ಐಡಿಯಾಸ್ ಫ್ಯಾಕ್ಟರಿ ಎಂಬ ಫೇಸ್‌ಬುಕ್ ಪೇಜ್ ಜಾಗೃತಿ, ಮನೋರಂಜನೆ ಮತ್ತು ಶೈಕ್ಷಣಿಕ ಉದ್ದೇಶಕ್ಕೆ ಮಾಡಿದ ಸ್ಕ್ರಿಪ್ಟೆಡ್ ವಿಡಿಯೋ ನಿಜ ಎಂಬಂತೆ ವೈರಲ್ ಆಗಿದೆ.

ಇದನ್ನೂ ಓದಿ : FACT CHECK : ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...