Homeಮುಖಪುಟಕೇಂದ್ರದ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆ; ಸರ್ವಾನುಮತದಿಂದ ತಿರಸ್ಕರಿಸಿದ ಕೇರಳ ವಿಧಾನಸಭೆ

ಕೇಂದ್ರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆ; ಸರ್ವಾನುಮತದಿಂದ ತಿರಸ್ಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಂವಿಧಾನ ವಿರೋಧಿ ಎಂದು ಬಣ್ಣಿಸಿ, ಅದನ್ನು ಜಾರಿಗೊಳಿಸದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಕೇರಳ ವಿಧಾನಸಭೆಯು ಗುರುವಾರ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ.ರಾಜೇಶ್ ಮಂಡಿಸಿದ ನಿರ್ಣಯದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಸಲ್ಲಿಸಿದ ಪ್ರಸ್ತಾವನೆಯನ್ನು ಟೀಕಿಸಿದೆ. ಇದು “ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿ”ಯನ್ನು ಪ್ರತಿಬಿಂಬಿಸುತ್ತಿದ್ದು, ಸಾಂವಿಧಾನಿಕ ಮೌಲ್ಯಗಳಿಗೆ ವಿರೋಧವಾಗಿದೆ. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ” ಎಂದು ವಿವರಿಸಲಾಗಿದೆ.

“ಈ ಪ್ರಸ್ತಾಪವನ್ನು ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ರಾಜಕೀಯ ವೈವಿಧ್ಯತೆಯನ್ನು ನಾಶಮಾಡುವ ಕೆಟ್ಟ ತಂತ್ರವೆಂದು ಪರಿಗಣಿಸಲಾಗಿದೆ” ಎಂದು ನಿರ್ಣಯವು ಹೇಳಿದೆ.

ಸಮಿತಿಯು ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಪ್ರಸ್ತಾಪಿಸಿದೆ. ನಂತರ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸುವುದಾಗಿ ಯೋಜಿಸಿದೆ.

ಪ್ರಸ್ತಾವನೆಯನ್ನು ಜಾರಿಗೊಳಿಸಿದರೆ ಅಧಿಕಾರವನ್ನು ಕೇಂದ್ರೀಕರಿಸಿ ಆರೆಸ್ಸೆಸ್ ಮತ್ತು ಬಿಜೆಪಿಯ ಅಜೆಂಡಾದ ಪ್ರಕಾರ ಏಕೀಕೃತ ಆಡಳಿತಕ್ಕೆ ಕಾರಣವಾಗುತ್ತದೆ ಎಂದು ನಿರ್ಣಯವು ಎಚ್ಚರಿಸಿದೆ.

“ಪ್ರಸ್ತಾವನೆಯು ಅನುಷ್ಠಾನಗೊಂಡರೆ, ರಾಜ್ಯ ಶಾಸಕಾಂಗ ಸಭೆಗಳ ಅಧಿಕಾರವನ್ನು ದುರ್ಬಲಗೊಳಿಸುತ್ತದೆ. ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಸರ್ಕಾರಗಳಾಗಿ ಕಾರ್ಯನಿರ್ವಹಿಸುತ್ತವೆ, ಅವು ಅಪ್ರಸ್ತುತವಾಗುತ್ತದೆ. ಆ ಮೂಲಕ ಅಧಿಕಾರದ ವಿಕೇಂದ್ರೀಕರಣವನ್ನು ಅಡ್ಡಿಪಡಿಸುತ್ತದೆ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿರಾಕರಿಸುತ್ತದೆ” ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.

ಕೇವಲ ‘ವೆಚ್ಚದ ಮಸೂರ’ದ ಮೂಲಕ ಚುನಾವಣೆಗಳನ್ನು ನೋಡುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ವೆಚ್ಚವನ್ನು ಮೊಟಕುಗೊಳಿಸಲು ಮತ್ತು ಆಡಳಿತವನ್ನು ಸುಗಮಗೊಳಿಸಲು ಸರಳವಾದ ಕ್ರಮಗಳು ಲಭ್ಯವಿದೆ ಎಂದು ಅದು ಸೂಚಿಸಿದೆ.

“ಪ್ರಸ್ತಾವನೆಯು ಸಂವಿಧಾನದ ಮೂಲಭೂತ ಅಂಶವಾದ ಫೆಡರಲಿಸಂ ಅನ್ನು ಅಡ್ಡಿಪಡಿಸುತ್ತದೆ ಮತ್ತು ರಾಜ್ಯಗಳು ಅನುಭವಿಸುವ ಅಧಿಕಾರವನ್ನು ಉಲ್ಲಂಘಿಸುತ್ತದೆ. ಇದು ಸಾರ್ವಜನಿಕರ ಸಾರ್ವಭೌಮತ್ವಕ್ಕೂ ಸವಾಲೊಡ್ಡುತ್ತದೆ” ಎಂದು ನಿರ್ಣಯವನ್ನು ಮುಕ್ತಾಯಗೊಳಿಸಲಾಗಿದೆ.

ಇದನ್ನೂ ಓದಿ; ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...