Homeಮುಖಪುಟಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

ಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

- Advertisement -
- Advertisement -

ಬಾಲ್ಯವಿವಾಹಕ್ಕೆ ಗುರಿಯಾಗುವ 11 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು 2023-24ರಲ್ಲಿ ಗುರುತಿಸಿರುವುದಾಗಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ(NCPCR) ಗುರುವಾರ ಹೇಳಿದೆ. ಕೌಟುಂಬಿಕ ಸಮಾಲೋಚನೆ, ಶಾಲೆಗೆ ಪುನಃ ಸೇರ್ಪಡೆಯ ಪ್ರಯತ್ನಗಳು ಮತ್ತು ಕಾನೂನು ಜಾರಿಯೊಂದಿಗೆ ಸಮನ್ವಯದ ಮೂಲಕ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ.ಬಾಲ್ಯವಿವಾಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಾಲ್ಯ ವಿವಾಹ ನಿಷೇಧ ಕಾಯಿದೆ (PCMA)-2006 ರ ಅಡಿಯಲ್ಲಿ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು (CMPOs), ಜಿಲ್ಲಾ ಅಧಿಕಾರಿಗಳು ಮತ್ತು ಇತರರ ಸಹಯೋಗದ ಮೂಲಕ ತೆಗೆದುಕೊಂಡ ಪ್ರಯತ್ನಗಳ ಬಗ್ಗೆ ಸಮಗ್ರ ವರದಿಯಲ್ಲಿ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ ಒತ್ತಿಹೇಳಿದೆ.

ಇದನ್ನೂಓದಿ: FACT CHECK : ಭಾರತದ್ದು ಎಂದು ಪೆರು ರೈಲಿನ ವಿಡಿಯೋ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್

ಜಾಗೃತಿ ಅಭಿಯಾನದ ಮೂಲಕ 1.2 ಕೋಟಿಗೂ ಹೆಚ್ಚು ಜನರನ್ನು ತಲುಪಲಾಗಿದ್ದು, ಉತ್ತರ ಪ್ರದೇಶ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳು ಬಾಲ್ಯ ವಿವಾಹದ ವಿರುದ್ಧದ ಹೋರಾಟದಲ್ಲಿ ನಾಯಕರಾಗಿ ಹೊರಹೊಮ್ಮಿವೆ ಎಂದು ಆಯೋಗ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಬಾಲ್ಯವಿವಾಹಕ್ಕೆ ಗುರಿಯಾಗುವಂತಹ 5 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದ್ದು, ಇದರ ವಿರುದ್ಧ ಹೋರಾಟದಲ್ಲಿ ರಾಜ್ಯವು ಭಾಗವಹಿಸಿದೆ ಎಂದು ಆಯೋಗ ಹೇಳಿದೆ. ಅಷ್ಟೆ ಅಲ್ಲದೆ, ಮಧ್ಯಪ್ರದೇಶ ಮತ್ತು ಒಡಿಶಾದಂತಹ ರಾಜ್ಯಗಳು ಕೂಡಾ ಬಾಲ್ಯ ವಿವಾಹದ ವಿರುದ್ಧ ತೀವ್ರವಾದ ಹೋರಾಟ ನಡೆಸಿದೆ ಎಂದು ವರದಿ ಹೇಳಿದೆ.

ಭಾರತದಾದ್ಯಂತ, 11.4 ಲಕ್ಷಕ್ಕೂ ಹೆಚ್ಚು ಮಕ್ಕಳು ಬಾಲ್ಯವಿವಾಹಕ್ಕೆ ಗುರಿಯಾಗುವ ಬಗ್ಗೆ ಗುರುತಿಸಲಾಗಿದೆ. ಯಾವುದೆ ಸೂಚನೆಯಿಲ್ಲದೆ ಸತತ 30 ದಿನಗಳವರೆಗೆ ಗೈರುಹಾಜರಾದ ಮಕ್ಕಳನ್ನು ಗುರುತಿಸಲು ಶಾಲೆಗಳನ್ನು ಮ್ಯಾಪಿಂಗ್ ಮಾಡುವುದು ಮತ್ತು ಶಾಲೆಯಿಂದ ಹೊರಗುಳಿಯುವವರನ್ನು ಮೇಲ್ವಿಚಾರಣೆ ಮಾಡಲು ಶಾಲಾ ಅಧಿಕಾರಿಗಳೊಂದಿಗೆ ಸಮನ್ವಯಗೊಳಿಸುವುದು ತಡೆಗಟ್ಟುವ ಕ್ರಮಗಳಲ್ಲಿ ಸೇರಿದೆ.

ಇದನ್ನೂಓದಿ: ಗ್ರೇಟ್ ನಿಕೋಬಾರ್ ಯೋಜನೆ ನಿಲ್ಲಿಸಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹ

ಕರ್ನಾಟಕ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಅಧಿಕಾರಿಗಳು ಧಾರ್ಮಿಕ ಮುಖಂಡರು, ವಿವಾಹ ಸಮಾರಂಭಗಳಲ್ಲಿ ತೊಡಗಿರುವ ಸೇವಾ ಪೂರೈಕೆದಾರರು ಮತ್ತು ಅಂಗನವಾಡಿ ಕಾರ್ಯಕರ್ತೆಯರಂತಹ ಪ್ರಮುಖ ಸ್ಥಳೀಯ ವ್ಯಕ್ತಿಗಳೊಂದಿಗೆ ಜಾಗೃತಿ ಮೂಡಿಸಲು ಮತ್ತು ಅಪ್ರಾಪ್ತ ವಯಸ್ಕರನ್ನು ಒಳಗೊಂಡ ವಿವಾಹಗಳನ್ನು ತಡೆಗಟ್ಟಲು 40,000 ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದ್ದಾರೆ ಎಂದು ಗುರುವಾರ ಬಿಡುಗಡೆಯಾದ ವರದಿ ತಿಳಿಸಿದೆ.ಬಾಲ್ಯವಿವಾಹ

ಈ ಪ್ರಯತ್ನಗಳ ಹೊರತಾಗಿಯೂ, ಗೋವಾ ಮತ್ತು ಲಡಾಖ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಡೇಟಾ ಸಂಗ್ರಹಣೆ ಮತ್ತು ಜಾರಿಯಲ್ಲಿನ ಅಂತರವನ್ನು ಎನ್‌ಸಿಪಿಸಿಆರ್ ವರದಿಯು ಎತ್ತಿ ತೋರಿಸಿದೆ. ದೇಶದ ಕೆಲವು ಜಿಲ್ಲೆಗಳಲ್ಲಿ ಇರುವ ಸಾಂಸ್ಕೃತಿಕ ಆಚರಣೆಗಳ ಕಾರಣಕ್ಕೆ ಇದು ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತೊಡೆದುಹಾಕಲು ಕಷ್ಟಕರವಾಗಿದೆ ಎಂದು ವರದಿ ಹೇಳಿದೆ.

NCPCR ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಬಾಲ್ಯ ವಿವಾಹದ ವಿರುದ್ಧದ ಹೋರಾಟದಲ್ಲಿ ತೀವ್ರವಾಗಿ ತೊಡಗಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಈ ಸಮಸ್ಯೆಗೆ ಆದ್ಯತೆ ನೀಡಬೇಕು ಮತ್ತು ಬಾಲ್ಯ ವಿವಾಹಗಳ ನಿರ್ಮೂಲನೆಗೆ ಜಿಲ್ಲಾ ಮಟ್ಟದ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸುವುದನ್ನು ಮುಂದುವರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ವಿಡಿಯೊ ನೋಡಿ: ಎಲ್ಲರಿಗಾಗಿ ಸ್ತ್ರೀವಾದ: ಒಗ್ಗೂಡಿದ ಚಳವಳಿಯನ್ನು ಮಾಡಲು ಸಾಧ್ಯವೇ?

ವಿಡಿಯೊ ನೋಡಿ:  ಎಲ್ಲರಿಗಾಗಿ ಸ್ತ್ರೀವಾದ: ಮಹಿಳಾ ದೃಷ್ಟಿಕೋನದಲ್ಲಿ ಸ್ವತಂತ್ರವಾಗಿರೋದು ಅಂದರೆ ಏನು?

ವಿಡಿಯೊ ನೋಡಿ:  ಅವ್ವ, ನನ್ನವ್ವ ಫಲವತ್ತಾದ ಕಪ್ಪು ನೆಲ: ಪಿ.ಲಂಕೇಶರ ಪದ್ಯವನ್ನು ಹಾಡಿನ ರೂಪಕ್ಕೆ ತಂದ ಜನಾರ್ದನ್ ಜನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...