Homeಮುಖಪುಟಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

ಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

- Advertisement -
- Advertisement -

ಬಾಲ್ಯವಿವಾಹಕ್ಕೆ ಗುರಿಯಾಗುವ 11 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು 2023-24ರಲ್ಲಿ ಗುರುತಿಸಿರುವುದಾಗಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ(NCPCR) ಗುರುವಾರ ಹೇಳಿದೆ. ಕೌಟುಂಬಿಕ ಸಮಾಲೋಚನೆ, ಶಾಲೆಗೆ ಪುನಃ ಸೇರ್ಪಡೆಯ ಪ್ರಯತ್ನಗಳು ಮತ್ತು ಕಾನೂನು ಜಾರಿಯೊಂದಿಗೆ ಸಮನ್ವಯದ ಮೂಲಕ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ.ಬಾಲ್ಯವಿವಾಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಾಲ್ಯ ವಿವಾಹ ನಿಷೇಧ ಕಾಯಿದೆ (PCMA)-2006 ರ ಅಡಿಯಲ್ಲಿ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು (CMPOs), ಜಿಲ್ಲಾ ಅಧಿಕಾರಿಗಳು ಮತ್ತು ಇತರರ ಸಹಯೋಗದ ಮೂಲಕ ತೆಗೆದುಕೊಂಡ ಪ್ರಯತ್ನಗಳ ಬಗ್ಗೆ ಸಮಗ್ರ ವರದಿಯಲ್ಲಿ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ ಒತ್ತಿಹೇಳಿದೆ.

ಇದನ್ನೂಓದಿ: FACT CHECK : ಭಾರತದ್ದು ಎಂದು ಪೆರು ರೈಲಿನ ವಿಡಿಯೋ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್

ಜಾಗೃತಿ ಅಭಿಯಾನದ ಮೂಲಕ 1.2 ಕೋಟಿಗೂ ಹೆಚ್ಚು ಜನರನ್ನು ತಲುಪಲಾಗಿದ್ದು, ಉತ್ತರ ಪ್ರದೇಶ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳು ಬಾಲ್ಯ ವಿವಾಹದ ವಿರುದ್ಧದ ಹೋರಾಟದಲ್ಲಿ ನಾಯಕರಾಗಿ ಹೊರಹೊಮ್ಮಿವೆ ಎಂದು ಆಯೋಗ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಬಾಲ್ಯವಿವಾಹಕ್ಕೆ ಗುರಿಯಾಗುವಂತಹ 5 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದ್ದು, ಇದರ ವಿರುದ್ಧ ಹೋರಾಟದಲ್ಲಿ ರಾಜ್ಯವು ಭಾಗವಹಿಸಿದೆ ಎಂದು ಆಯೋಗ ಹೇಳಿದೆ. ಅಷ್ಟೆ ಅಲ್ಲದೆ, ಮಧ್ಯಪ್ರದೇಶ ಮತ್ತು ಒಡಿಶಾದಂತಹ ರಾಜ್ಯಗಳು ಕೂಡಾ ಬಾಲ್ಯ ವಿವಾಹದ ವಿರುದ್ಧ ತೀವ್ರವಾದ ಹೋರಾಟ ನಡೆಸಿದೆ ಎಂದು ವರದಿ ಹೇಳಿದೆ.

ಭಾರತದಾದ್ಯಂತ, 11.4 ಲಕ್ಷಕ್ಕೂ ಹೆಚ್ಚು ಮಕ್ಕಳು ಬಾಲ್ಯವಿವಾಹಕ್ಕೆ ಗುರಿಯಾಗುವ ಬಗ್ಗೆ ಗುರುತಿಸಲಾಗಿದೆ. ಯಾವುದೆ ಸೂಚನೆಯಿಲ್ಲದೆ ಸತತ 30 ದಿನಗಳವರೆಗೆ ಗೈರುಹಾಜರಾದ ಮಕ್ಕಳನ್ನು ಗುರುತಿಸಲು ಶಾಲೆಗಳನ್ನು ಮ್ಯಾಪಿಂಗ್ ಮಾಡುವುದು ಮತ್ತು ಶಾಲೆಯಿಂದ ಹೊರಗುಳಿಯುವವರನ್ನು ಮೇಲ್ವಿಚಾರಣೆ ಮಾಡಲು ಶಾಲಾ ಅಧಿಕಾರಿಗಳೊಂದಿಗೆ ಸಮನ್ವಯಗೊಳಿಸುವುದು ತಡೆಗಟ್ಟುವ ಕ್ರಮಗಳಲ್ಲಿ ಸೇರಿದೆ.

ಇದನ್ನೂಓದಿ: ಗ್ರೇಟ್ ನಿಕೋಬಾರ್ ಯೋಜನೆ ನಿಲ್ಲಿಸಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹ

ಕರ್ನಾಟಕ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಅಧಿಕಾರಿಗಳು ಧಾರ್ಮಿಕ ಮುಖಂಡರು, ವಿವಾಹ ಸಮಾರಂಭಗಳಲ್ಲಿ ತೊಡಗಿರುವ ಸೇವಾ ಪೂರೈಕೆದಾರರು ಮತ್ತು ಅಂಗನವಾಡಿ ಕಾರ್ಯಕರ್ತೆಯರಂತಹ ಪ್ರಮುಖ ಸ್ಥಳೀಯ ವ್ಯಕ್ತಿಗಳೊಂದಿಗೆ ಜಾಗೃತಿ ಮೂಡಿಸಲು ಮತ್ತು ಅಪ್ರಾಪ್ತ ವಯಸ್ಕರನ್ನು ಒಳಗೊಂಡ ವಿವಾಹಗಳನ್ನು ತಡೆಗಟ್ಟಲು 40,000 ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದ್ದಾರೆ ಎಂದು ಗುರುವಾರ ಬಿಡುಗಡೆಯಾದ ವರದಿ ತಿಳಿಸಿದೆ.ಬಾಲ್ಯವಿವಾಹ

ಈ ಪ್ರಯತ್ನಗಳ ಹೊರತಾಗಿಯೂ, ಗೋವಾ ಮತ್ತು ಲಡಾಖ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಡೇಟಾ ಸಂಗ್ರಹಣೆ ಮತ್ತು ಜಾರಿಯಲ್ಲಿನ ಅಂತರವನ್ನು ಎನ್‌ಸಿಪಿಸಿಆರ್ ವರದಿಯು ಎತ್ತಿ ತೋರಿಸಿದೆ. ದೇಶದ ಕೆಲವು ಜಿಲ್ಲೆಗಳಲ್ಲಿ ಇರುವ ಸಾಂಸ್ಕೃತಿಕ ಆಚರಣೆಗಳ ಕಾರಣಕ್ಕೆ ಇದು ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತೊಡೆದುಹಾಕಲು ಕಷ್ಟಕರವಾಗಿದೆ ಎಂದು ವರದಿ ಹೇಳಿದೆ.

NCPCR ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಬಾಲ್ಯ ವಿವಾಹದ ವಿರುದ್ಧದ ಹೋರಾಟದಲ್ಲಿ ತೀವ್ರವಾಗಿ ತೊಡಗಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಈ ಸಮಸ್ಯೆಗೆ ಆದ್ಯತೆ ನೀಡಬೇಕು ಮತ್ತು ಬಾಲ್ಯ ವಿವಾಹಗಳ ನಿರ್ಮೂಲನೆಗೆ ಜಿಲ್ಲಾ ಮಟ್ಟದ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸುವುದನ್ನು ಮುಂದುವರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ವಿಡಿಯೊ ನೋಡಿ: ಎಲ್ಲರಿಗಾಗಿ ಸ್ತ್ರೀವಾದ: ಒಗ್ಗೂಡಿದ ಚಳವಳಿಯನ್ನು ಮಾಡಲು ಸಾಧ್ಯವೇ?

ವಿಡಿಯೊ ನೋಡಿ:  ಎಲ್ಲರಿಗಾಗಿ ಸ್ತ್ರೀವಾದ: ಮಹಿಳಾ ದೃಷ್ಟಿಕೋನದಲ್ಲಿ ಸ್ವತಂತ್ರವಾಗಿರೋದು ಅಂದರೆ ಏನು?

ವಿಡಿಯೊ ನೋಡಿ:  ಅವ್ವ, ನನ್ನವ್ವ ಫಲವತ್ತಾದ ಕಪ್ಪು ನೆಲ: ಪಿ.ಲಂಕೇಶರ ಪದ್ಯವನ್ನು ಹಾಡಿನ ರೂಪಕ್ಕೆ ತಂದ ಜನಾರ್ದನ್ ಜನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...