Homeಮುಖಪುಟಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

ಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

- Advertisement -
- Advertisement -

ಬಾಲ್ಯವಿವಾಹಕ್ಕೆ ಗುರಿಯಾಗುವ 11 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು 2023-24ರಲ್ಲಿ ಗುರುತಿಸಿರುವುದಾಗಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ(NCPCR) ಗುರುವಾರ ಹೇಳಿದೆ. ಕೌಟುಂಬಿಕ ಸಮಾಲೋಚನೆ, ಶಾಲೆಗೆ ಪುನಃ ಸೇರ್ಪಡೆಯ ಪ್ರಯತ್ನಗಳು ಮತ್ತು ಕಾನೂನು ಜಾರಿಯೊಂದಿಗೆ ಸಮನ್ವಯದ ಮೂಲಕ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ.ಬಾಲ್ಯವಿವಾಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಾಲ್ಯ ವಿವಾಹ ನಿಷೇಧ ಕಾಯಿದೆ (PCMA)-2006 ರ ಅಡಿಯಲ್ಲಿ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು (CMPOs), ಜಿಲ್ಲಾ ಅಧಿಕಾರಿಗಳು ಮತ್ತು ಇತರರ ಸಹಯೋಗದ ಮೂಲಕ ತೆಗೆದುಕೊಂಡ ಪ್ರಯತ್ನಗಳ ಬಗ್ಗೆ ಸಮಗ್ರ ವರದಿಯಲ್ಲಿ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ ಒತ್ತಿಹೇಳಿದೆ.

ಇದನ್ನೂಓದಿ: FACT CHECK : ಭಾರತದ್ದು ಎಂದು ಪೆರು ರೈಲಿನ ವಿಡಿಯೋ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್

ಜಾಗೃತಿ ಅಭಿಯಾನದ ಮೂಲಕ 1.2 ಕೋಟಿಗೂ ಹೆಚ್ಚು ಜನರನ್ನು ತಲುಪಲಾಗಿದ್ದು, ಉತ್ತರ ಪ್ರದೇಶ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳು ಬಾಲ್ಯ ವಿವಾಹದ ವಿರುದ್ಧದ ಹೋರಾಟದಲ್ಲಿ ನಾಯಕರಾಗಿ ಹೊರಹೊಮ್ಮಿವೆ ಎಂದು ಆಯೋಗ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಬಾಲ್ಯವಿವಾಹಕ್ಕೆ ಗುರಿಯಾಗುವಂತಹ 5 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದ್ದು, ಇದರ ವಿರುದ್ಧ ಹೋರಾಟದಲ್ಲಿ ರಾಜ್ಯವು ಭಾಗವಹಿಸಿದೆ ಎಂದು ಆಯೋಗ ಹೇಳಿದೆ. ಅಷ್ಟೆ ಅಲ್ಲದೆ, ಮಧ್ಯಪ್ರದೇಶ ಮತ್ತು ಒಡಿಶಾದಂತಹ ರಾಜ್ಯಗಳು ಕೂಡಾ ಬಾಲ್ಯ ವಿವಾಹದ ವಿರುದ್ಧ ತೀವ್ರವಾದ ಹೋರಾಟ ನಡೆಸಿದೆ ಎಂದು ವರದಿ ಹೇಳಿದೆ.

ಭಾರತದಾದ್ಯಂತ, 11.4 ಲಕ್ಷಕ್ಕೂ ಹೆಚ್ಚು ಮಕ್ಕಳು ಬಾಲ್ಯವಿವಾಹಕ್ಕೆ ಗುರಿಯಾಗುವ ಬಗ್ಗೆ ಗುರುತಿಸಲಾಗಿದೆ. ಯಾವುದೆ ಸೂಚನೆಯಿಲ್ಲದೆ ಸತತ 30 ದಿನಗಳವರೆಗೆ ಗೈರುಹಾಜರಾದ ಮಕ್ಕಳನ್ನು ಗುರುತಿಸಲು ಶಾಲೆಗಳನ್ನು ಮ್ಯಾಪಿಂಗ್ ಮಾಡುವುದು ಮತ್ತು ಶಾಲೆಯಿಂದ ಹೊರಗುಳಿಯುವವರನ್ನು ಮೇಲ್ವಿಚಾರಣೆ ಮಾಡಲು ಶಾಲಾ ಅಧಿಕಾರಿಗಳೊಂದಿಗೆ ಸಮನ್ವಯಗೊಳಿಸುವುದು ತಡೆಗಟ್ಟುವ ಕ್ರಮಗಳಲ್ಲಿ ಸೇರಿದೆ.

ಇದನ್ನೂಓದಿ: ಗ್ರೇಟ್ ನಿಕೋಬಾರ್ ಯೋಜನೆ ನಿಲ್ಲಿಸಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹ

ಕರ್ನಾಟಕ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಅಧಿಕಾರಿಗಳು ಧಾರ್ಮಿಕ ಮುಖಂಡರು, ವಿವಾಹ ಸಮಾರಂಭಗಳಲ್ಲಿ ತೊಡಗಿರುವ ಸೇವಾ ಪೂರೈಕೆದಾರರು ಮತ್ತು ಅಂಗನವಾಡಿ ಕಾರ್ಯಕರ್ತೆಯರಂತಹ ಪ್ರಮುಖ ಸ್ಥಳೀಯ ವ್ಯಕ್ತಿಗಳೊಂದಿಗೆ ಜಾಗೃತಿ ಮೂಡಿಸಲು ಮತ್ತು ಅಪ್ರಾಪ್ತ ವಯಸ್ಕರನ್ನು ಒಳಗೊಂಡ ವಿವಾಹಗಳನ್ನು ತಡೆಗಟ್ಟಲು 40,000 ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದ್ದಾರೆ ಎಂದು ಗುರುವಾರ ಬಿಡುಗಡೆಯಾದ ವರದಿ ತಿಳಿಸಿದೆ.ಬಾಲ್ಯವಿವಾಹ

ಈ ಪ್ರಯತ್ನಗಳ ಹೊರತಾಗಿಯೂ, ಗೋವಾ ಮತ್ತು ಲಡಾಖ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಡೇಟಾ ಸಂಗ್ರಹಣೆ ಮತ್ತು ಜಾರಿಯಲ್ಲಿನ ಅಂತರವನ್ನು ಎನ್‌ಸಿಪಿಸಿಆರ್ ವರದಿಯು ಎತ್ತಿ ತೋರಿಸಿದೆ. ದೇಶದ ಕೆಲವು ಜಿಲ್ಲೆಗಳಲ್ಲಿ ಇರುವ ಸಾಂಸ್ಕೃತಿಕ ಆಚರಣೆಗಳ ಕಾರಣಕ್ಕೆ ಇದು ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತೊಡೆದುಹಾಕಲು ಕಷ್ಟಕರವಾಗಿದೆ ಎಂದು ವರದಿ ಹೇಳಿದೆ.

NCPCR ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಬಾಲ್ಯ ವಿವಾಹದ ವಿರುದ್ಧದ ಹೋರಾಟದಲ್ಲಿ ತೀವ್ರವಾಗಿ ತೊಡಗಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಈ ಸಮಸ್ಯೆಗೆ ಆದ್ಯತೆ ನೀಡಬೇಕು ಮತ್ತು ಬಾಲ್ಯ ವಿವಾಹಗಳ ನಿರ್ಮೂಲನೆಗೆ ಜಿಲ್ಲಾ ಮಟ್ಟದ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸುವುದನ್ನು ಮುಂದುವರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ವಿಡಿಯೊ ನೋಡಿ: ಎಲ್ಲರಿಗಾಗಿ ಸ್ತ್ರೀವಾದ: ಒಗ್ಗೂಡಿದ ಚಳವಳಿಯನ್ನು ಮಾಡಲು ಸಾಧ್ಯವೇ?

ವಿಡಿಯೊ ನೋಡಿ:  ಎಲ್ಲರಿಗಾಗಿ ಸ್ತ್ರೀವಾದ: ಮಹಿಳಾ ದೃಷ್ಟಿಕೋನದಲ್ಲಿ ಸ್ವತಂತ್ರವಾಗಿರೋದು ಅಂದರೆ ಏನು?

ವಿಡಿಯೊ ನೋಡಿ:  ಅವ್ವ, ನನ್ನವ್ವ ಫಲವತ್ತಾದ ಕಪ್ಪು ನೆಲ: ಪಿ.ಲಂಕೇಶರ ಪದ್ಯವನ್ನು ಹಾಡಿನ ರೂಪಕ್ಕೆ ತಂದ ಜನಾರ್ದನ್ ಜನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...