Homeಮುಖಪುಟಓಲಾ ವಿವಾದ | ಗ್ರಾಹಕ ಹಕ್ಕುಗಳ ಉಲ್ಲಂಘನೆಯ ಕುರಿತು ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಆದೇಶ

ಓಲಾ ವಿವಾದ | ಗ್ರಾಹಕ ಹಕ್ಕುಗಳ ಉಲ್ಲಂಘನೆಯ ಕುರಿತು ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಆದೇಶ

- Advertisement -
- Advertisement -

ಓಲಾ ಎಲೆಕ್ಟ್ರಿಕ್‌ನಿಂದ ಗ್ರಾಹಕರ ಹಕ್ಕುಗಳ ಉಲ್ಲಂಘನೆಯ ಆರೋಪಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರ ಬುಧವಾರ ಆದೇಶಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಕೇಂದ್ರ ಭಾರೀ ಕೈಗಾರಿಕೆಗಳ ಸಚಿವಾಲಯವು ತನ್ನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನ ಪರೀಕ್ಷಾ ಸಂಸ್ಥೆಯಾದ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ​​ಆಫ್ ಇಂಡಿಯಾಗೆ ಈ ಬಗ್ಗೆ ಕೇಳಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.ಓಲಾ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲೆಕ್ಟ್ರಿಕ್ ಸ್ಕೂಟರ್ ತಯಾರಕರಾಗಿರುವ ಓಲಾ ಎಲೆಕ್ಟ್ರಿಕ್ ಸಂಸ್ಥೆಯು ವಾಹನ ತಯಾರಿಕೆ ಮತ್ತು ಅಳವಡಿಕೆಗಾಗಿ ಕೇಂದ್ರ ಸರ್ಕಾರದ ಕನಿಷ್ಠ ಎರಡು ಪ್ರೋತ್ಸಾಹ ಯೋಜನೆಗಳ ಫಲಾನುಭವಿಯಾಗಿದೆ.ಓಲಾ ವಿವಾದ

ಇದನ್ನೂಓದಿ: ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

ದಾರಿತಪ್ಪಿಸುವ ಜಾಹೀರಾತುಗಳು ಮತ್ತು ಅನ್ಯಾಯದ ವ್ಯಾಪಾರ ಪ್ರಕ್ರಿಯೆಗಳಿಗಾಗಿ ಓಲಾ ಎಲೆಕ್ಟ್ರಿಕ್‌ಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಶೋಕಾಸ್ ನೋಟಿಸ್ ನೀಡಿದ್ದು, ಅದರ ನಂತರ ಕೇಂದ್ರ ಸರ್ಕಾರ ಈ ಆದೇಶ ನೀಡಿದೆ. 2023ರ ಸೆಪ್ಟೆಂಬರ್ 1ರಿಂದ 2024ರ ಆಗಸ್ಟ್ 30ರ ನಡುವೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ಸ್ವೀಕರಿಸಿದ ಗ್ರಾಹಕರ 9,948 ದೂರುಗಳನ್ನು ಆಧರಿಸಿ ಈ ಶೋಕಾಸ್ ನೋಟಿಸ್ ನೀಡಲಾಗಿತ್ತು.

ಕಂಪನಿಯ ಉಚಿತ ಸೇವಾ ಅವಧಿಯಲ್ಲಿ ಬಿಲ್ಲಿಂಗ್ ಮಾಡಿದ್ದು, ಗ್ರಾಹಕರಿಗೆ ವಾಹನ ವಿತರಣೆ ಮತ್ತು ರಿಪೇರಿಯಲ್ಲಿ ವಿಳಂಬ ಮಾಡಿರುವ ಬಗ್ಗೆ ಆರೋಪಿಸಲಾಗಿದೆ.

ಇದನ್ನೂಓದಿ: ‘ಜಾತಿಗಣತಿ ಮಾಡಬೇಕು, ಯಾಕೆಂದರೆ…’: ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

ಗ್ರಾಹಕರ ಸಮಸ್ಯೆಗಳನ್ನು ಸಮರ್ಪಕವಾಗಿ ಪರಿಹರಿಸಲು ಎರಡು ಪ್ರೋತ್ಸಾಹಕ ಯೋಜನೆಗಳ ಅಡಿಯಲ್ಲಿ ಪ್ರತಿ ವಾಹನ ತಯಾರಕರು ಸಾಕಷ್ಟು ಸೇವಾ ಕೇಂದ್ರಗಳನ್ನು ಹೊಂದಿರಬೇಕು ಎಂದು ಸಚಿವಾಲಯ ಹೇಳಿದೆ. ಓಲಾ ಎಲೆಕ್ಟ್ರಿಕ್ ಸಂಸ್ಥೆ ಸೇರಿದಂತೆ ಈ ಪ್ರೋತ್ಸಾಹಕ ಯೋಜನೆ ಪಡೆದ ಕಂಪನಿಗಳು ಗ್ರಾಹಕರಿಗೆ ವಾರಂಟಿಗಳನ್ನು ನೀಡಬೇಕಾಗುತ್ತದೆ.

ಒಂದು ವರ್ಷದ ಹಿಂದೆಯೇ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ದಾಖಲಾಗಿದ್ದ ದೂರುಗಳನ್ನು ಪರಿಹರಿಸುವಲ್ಲಿ ಓಲಾ ಎಲೆಕ್ಟ್ರಿಕ್ ವಿಫಲವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖರೆ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

ಓಲಾ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವಿಶ್ ಅಗರ್ವಾಲ್ ಅವರು ಹಾಸ್ಯನಟ ಕುನಾಲ್ ಕಮ್ರಾ ಅವರೊಂದಿಗೆ ಆನ್‌ಲೈನ್ ಜಗಳ ಮಾಡಿದ ನಂತರ ಸಂಸ್ಥೆಯ ಮೌಲ್ಯ 8% ಕ್ಕಿಂತ ಹೆಚ್ಚು ಕುಸಿದಿರುವ ಬಗ್ಗೆ ವರದಿಯಾಗಿತ್ತು.

ವಿಡಿಯೊ ನೋಡಿ: UCC ಎಂದರೇನು? ಅದರಲ್ಲಿ ಏನಿದೆಯೆಂದು ತಿಳಿಯದೇ ಅಭಿಪ್ರಾಯ ಹೇಳುವುದು ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...