Homeಫ್ಯಾಕ್ಟ್‌ಚೆಕ್FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ...

FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ ಸೇರುತ್ತಾರೆ ಎಂದು ಹೇಳಿದ್ರಾ ಅಸಾದುದ್ದೀನ್ ಓವೈಸಿ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಸುದ್ದಿಯ ಪೇಪರ್ ಕಟಿಂಗ್‌ವೊಂದು ವೈರಲ್ ಆಗಿದೆ. “ಭಾರತ ಪಾಕ್ ಮೇಲೆ ದಾಳಿ ಮಾಡಿದರೆ, ಭಾರತೀಯ ಮುಸ್ಲಿಮರು ಪಾಕ್ ಸೇನೆಗೆ ಸೇರುತ್ತಾರೆ: ಓವೈಸಿ” ಎಂಬ ಶೀರ್ಷಿಕೆಯಿರುವ ನ್ಯೂಸ್ ಪೇಪರ್ ಕಟಿಂಗ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಭಾರತವು ಪಾಕಿಸ್ತಾನದೊಂದಿಗೆ ಯುದ್ಧದಲ್ಲಿ ತೊಡಗಿದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನ ಸೇನೆಗೆ ಸೇರುತ್ತಾರೆ ಎಂದು ಅಸಾದುದ್ದೀನ್ ಓವೈಸಿ 10 ವರ್ಷದ ಹಿಂದೆ ಹೇಳಿದ್ದರು ಎಂಬ ಪೋಸ್ಟ್‌ಅನ್ನು ಮತ್ತೊಬ್ಬ ಬಳಕೆದಾರರು ಹಂಚಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಫೇಸ್‌ಬುಕ್ ಬಳಕೆದಾರರೊಬ್ಬರು ಇದೇ ಪ್ರತಿಪಾದನೆಯೊಂದಿಗೆ ಅಸಾದುದ್ದೀನ್ ಓವೈಸಿ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸುತ್ತಾರೆ. ಈತ ಭಾರತಕ್ಕೆ ನಿಷ್ಟನಾಗಿಲ್ಲ ಈತನನ್ನು ಸಂಸತ್ತಿಗೆ ಯಾಕೆ ಕಳಿಸಬೇಕು? ಈತನನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂದರೆ ಅರ್ಥ ಮಾಡಿಕೊಳ್ಳಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ನಿಜವಾಗಿಯೂ ಇಂತಹ ಹೇಳಿಕೆಯನ್ನು ಅಸಾದುದ್ದೀನ್ ಓವೈಸಿ ನೀಡಿದ್ದಾರೆಯೇ ಎಂದು  ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈಸಿ ಇಂತಹ ಹೇಳಿಕೆ ನೀಡಿದ್ದರು ಎಂಬುದನ್ನು ದಾಖಲಿಸಿ ಯಾವುದೇ ಪ್ರತಿಷ್ಠಿತ ಸುದ್ದಿ ನಿಯತಕಾಲಿಕೆ ಅಥವಾ ಮಾಧ್ಯಮಗಳು ವರದಿ ಮಾಡಿಲ್ಲ.

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೀವರ್ಡ್ ಸರ್ಚ್ ನಡೆಸಿದಾಗ, 2014 ರಲ್ಲಿ ಕಾಶ್ಮೀರ ಅಬ್ಸರ್ವರ್‌ನ ನಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. “ಭಾರತವು ಪಾಕಿಸ್ತಾನದೊಂದಿಗೆ ಯುದ್ಧಕ್ಕೆ ಹೋದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನದ ಸೈನ್ಯಕ್ಕೆ ಸೇರುತ್ತಾರೆ” ಎಂಬ ಹೇಳಿಕೆಯನ್ನು ಅಸಾದುದ್ದೀನ್‌ಗೆ ಆರೋಪಿಸುವ ಲೇಖನವೊಂದು ಲಭ್ಯವಾಗಿದೆ. ಅಸಾದುದ್ದೀನ್ ಇಂತಹ ಹೇಳಿಕೆಗಳನ್ನು ನೀಡಿದ್ದರೆ, ದೇಶಾದ್ಯಂತ ಪ್ರಮುಖ ಪತ್ರಿಕೆಗಳು ಮತ್ತು ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ.

 

ಮಾಧ್ಯಮವೊಂದರಲ್ಲಿ ಪ್ರಕಟವಾದ ಲೇಖನ ಆಧಾರರಹಿತವಾಗಿದ್ದು ಅದನ್ನು ಮಾಡಿದವರ ವಿರುದ್ದ ಕಾನೂನು ಕ್ರಮಕೈಗೊಳ್ಳುವುದಾಗಿ 2 ಸೆಪ್ಟೆಂಬರ್ 2014 ರಂದು ಅಸಾದುದ್ದೀನ್ ಓವೈಸಿ ಅವರ ಅಧಿಕೃತ X ಹ್ಯಾಂಡಲ್‌ನಿಂದ ಮಾಡಲಾದ ಟ್ವೀಟ್ ವೊಂದು ಲಭ್ಯವಾಗಿದ್ದು “ ಕಾಶ್ಮೀರ ಅಬ್ಸರ್ವರ್‌ನ ಸಂಸ್ಥೆ ಕ್ಷಮೆಯಾಚಿಸದಿದ್ದರೆ, ನನ್ನ ವಕೀಲರು ಅವರಿಗೆ ಕಾನೂನು ಪ್ರಕಾರ ನೋಟಿಸ್ ಕಳುಹಿಸುತ್ತಾರೆ, ಇಲ್ಲದಿದ್ದರೆ ದಂಡ ವಿಧಿಸುತ್ತಾರೆ ನಂತರ ಅವರ ವಿರುದ್ಧ ಅಪರಾಧ ಮಾನನಷ್ಟ ಮೊಕದ್ದಮೆ ಹೂಡುತ್ತಾರೆ” ಎಂದು ಹಂಚಿಕೊಂಡಿರುವ ಪೋಸ್ಟ್‌ ಲಭ್ಯವಾಗಿದೆ.

ಇದಲ್ಲದೆ, 10 ಜನವರಿ 2015 ರಂದು ಅಪ್‌ಲೋಡ್ ಮಾಡಲಾದ ಹೆಡ್‌ಲೈನ್ಸ್ ಟುಡೇ ಜೊತೆಗಿನ ಒವೈಸಿ ಸಂದರ್ಶನದ ವಿಡಿಯೋ ಲಭ್ಯವಾಗಿದೆ. “ಭಾರತವು ಪಾಕಿಸ್ತಾನದ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದರೆ ?? ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರಾ ? ಎಂದು ಕರಣ್ ತಾಫರ್ ಕೇಳಿದ ಪ್ರಶ್ನೆಗೆ ಉತ್ತರಿಸುವ ಅಸಾದುದ್ದೀನ್ ಓವೈಸಿ ”ತಮ್ಮ ಮೇಲೆ ಆರೋಪಿಸಿದ ಹೇಳಿಕೆಗಳನ್ನು ನಿರಾಕರಿಸಿದರು. ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ ಅವರು, ಇಂತಹ ಆಧಾರ ರಹಿತ ಹೇಳಿಕೆಗಳಿಗಾಗಿ ಕೆಲವು ಸಂಘಟನೆಗಳು ಕ್ಷಮೆಯಾಚಿಸಿವೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ‘ಭಾರತ ಪಾಕ್ ಮೇಲೆ ದಾಳಿ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರೆ’ ಎಂದು ಹೇಳಿಲ್ಲ ಎಂಬುದು ಸ್ಪಷ್ಟವಾಗಿದೆ. ಇಂತಹ ಸುದ್ದಿ ಪ್ರಕಟಿಸಿದ ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...