Homeಫ್ಯಾಕ್ಟ್‌ಚೆಕ್FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ...

FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ ಸೇರುತ್ತಾರೆ ಎಂದು ಹೇಳಿದ್ರಾ ಅಸಾದುದ್ದೀನ್ ಓವೈಸಿ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಸುದ್ದಿಯ ಪೇಪರ್ ಕಟಿಂಗ್‌ವೊಂದು ವೈರಲ್ ಆಗಿದೆ. “ಭಾರತ ಪಾಕ್ ಮೇಲೆ ದಾಳಿ ಮಾಡಿದರೆ, ಭಾರತೀಯ ಮುಸ್ಲಿಮರು ಪಾಕ್ ಸೇನೆಗೆ ಸೇರುತ್ತಾರೆ: ಓವೈಸಿ” ಎಂಬ ಶೀರ್ಷಿಕೆಯಿರುವ ನ್ಯೂಸ್ ಪೇಪರ್ ಕಟಿಂಗ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಭಾರತವು ಪಾಕಿಸ್ತಾನದೊಂದಿಗೆ ಯುದ್ಧದಲ್ಲಿ ತೊಡಗಿದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನ ಸೇನೆಗೆ ಸೇರುತ್ತಾರೆ ಎಂದು ಅಸಾದುದ್ದೀನ್ ಓವೈಸಿ 10 ವರ್ಷದ ಹಿಂದೆ ಹೇಳಿದ್ದರು ಎಂಬ ಪೋಸ್ಟ್‌ಅನ್ನು ಮತ್ತೊಬ್ಬ ಬಳಕೆದಾರರು ಹಂಚಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಫೇಸ್‌ಬುಕ್ ಬಳಕೆದಾರರೊಬ್ಬರು ಇದೇ ಪ್ರತಿಪಾದನೆಯೊಂದಿಗೆ ಅಸಾದುದ್ದೀನ್ ಓವೈಸಿ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸುತ್ತಾರೆ. ಈತ ಭಾರತಕ್ಕೆ ನಿಷ್ಟನಾಗಿಲ್ಲ ಈತನನ್ನು ಸಂಸತ್ತಿಗೆ ಯಾಕೆ ಕಳಿಸಬೇಕು? ಈತನನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂದರೆ ಅರ್ಥ ಮಾಡಿಕೊಳ್ಳಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ನಿಜವಾಗಿಯೂ ಇಂತಹ ಹೇಳಿಕೆಯನ್ನು ಅಸಾದುದ್ದೀನ್ ಓವೈಸಿ ನೀಡಿದ್ದಾರೆಯೇ ಎಂದು  ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈಸಿ ಇಂತಹ ಹೇಳಿಕೆ ನೀಡಿದ್ದರು ಎಂಬುದನ್ನು ದಾಖಲಿಸಿ ಯಾವುದೇ ಪ್ರತಿಷ್ಠಿತ ಸುದ್ದಿ ನಿಯತಕಾಲಿಕೆ ಅಥವಾ ಮಾಧ್ಯಮಗಳು ವರದಿ ಮಾಡಿಲ್ಲ.

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೀವರ್ಡ್ ಸರ್ಚ್ ನಡೆಸಿದಾಗ, 2014 ರಲ್ಲಿ ಕಾಶ್ಮೀರ ಅಬ್ಸರ್ವರ್‌ನ ನಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. “ಭಾರತವು ಪಾಕಿಸ್ತಾನದೊಂದಿಗೆ ಯುದ್ಧಕ್ಕೆ ಹೋದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನದ ಸೈನ್ಯಕ್ಕೆ ಸೇರುತ್ತಾರೆ” ಎಂಬ ಹೇಳಿಕೆಯನ್ನು ಅಸಾದುದ್ದೀನ್‌ಗೆ ಆರೋಪಿಸುವ ಲೇಖನವೊಂದು ಲಭ್ಯವಾಗಿದೆ. ಅಸಾದುದ್ದೀನ್ ಇಂತಹ ಹೇಳಿಕೆಗಳನ್ನು ನೀಡಿದ್ದರೆ, ದೇಶಾದ್ಯಂತ ಪ್ರಮುಖ ಪತ್ರಿಕೆಗಳು ಮತ್ತು ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ.

 

ಮಾಧ್ಯಮವೊಂದರಲ್ಲಿ ಪ್ರಕಟವಾದ ಲೇಖನ ಆಧಾರರಹಿತವಾಗಿದ್ದು ಅದನ್ನು ಮಾಡಿದವರ ವಿರುದ್ದ ಕಾನೂನು ಕ್ರಮಕೈಗೊಳ್ಳುವುದಾಗಿ 2 ಸೆಪ್ಟೆಂಬರ್ 2014 ರಂದು ಅಸಾದುದ್ದೀನ್ ಓವೈಸಿ ಅವರ ಅಧಿಕೃತ X ಹ್ಯಾಂಡಲ್‌ನಿಂದ ಮಾಡಲಾದ ಟ್ವೀಟ್ ವೊಂದು ಲಭ್ಯವಾಗಿದ್ದು “ ಕಾಶ್ಮೀರ ಅಬ್ಸರ್ವರ್‌ನ ಸಂಸ್ಥೆ ಕ್ಷಮೆಯಾಚಿಸದಿದ್ದರೆ, ನನ್ನ ವಕೀಲರು ಅವರಿಗೆ ಕಾನೂನು ಪ್ರಕಾರ ನೋಟಿಸ್ ಕಳುಹಿಸುತ್ತಾರೆ, ಇಲ್ಲದಿದ್ದರೆ ದಂಡ ವಿಧಿಸುತ್ತಾರೆ ನಂತರ ಅವರ ವಿರುದ್ಧ ಅಪರಾಧ ಮಾನನಷ್ಟ ಮೊಕದ್ದಮೆ ಹೂಡುತ್ತಾರೆ” ಎಂದು ಹಂಚಿಕೊಂಡಿರುವ ಪೋಸ್ಟ್‌ ಲಭ್ಯವಾಗಿದೆ.

ಇದಲ್ಲದೆ, 10 ಜನವರಿ 2015 ರಂದು ಅಪ್‌ಲೋಡ್ ಮಾಡಲಾದ ಹೆಡ್‌ಲೈನ್ಸ್ ಟುಡೇ ಜೊತೆಗಿನ ಒವೈಸಿ ಸಂದರ್ಶನದ ವಿಡಿಯೋ ಲಭ್ಯವಾಗಿದೆ. “ಭಾರತವು ಪಾಕಿಸ್ತಾನದ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದರೆ ?? ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರಾ ? ಎಂದು ಕರಣ್ ತಾಫರ್ ಕೇಳಿದ ಪ್ರಶ್ನೆಗೆ ಉತ್ತರಿಸುವ ಅಸಾದುದ್ದೀನ್ ಓವೈಸಿ ”ತಮ್ಮ ಮೇಲೆ ಆರೋಪಿಸಿದ ಹೇಳಿಕೆಗಳನ್ನು ನಿರಾಕರಿಸಿದರು. ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ ಅವರು, ಇಂತಹ ಆಧಾರ ರಹಿತ ಹೇಳಿಕೆಗಳಿಗಾಗಿ ಕೆಲವು ಸಂಘಟನೆಗಳು ಕ್ಷಮೆಯಾಚಿಸಿವೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ‘ಭಾರತ ಪಾಕ್ ಮೇಲೆ ದಾಳಿ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರೆ’ ಎಂದು ಹೇಳಿಲ್ಲ ಎಂಬುದು ಸ್ಪಷ್ಟವಾಗಿದೆ. ಇಂತಹ ಸುದ್ದಿ ಪ್ರಕಟಿಸಿದ ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...