Homeಮುಖಪುಟತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ...

ತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ ಬಂಧನ

- Advertisement -
- Advertisement -

ಡಿಜಿಟಲ್ ನ್ಯೂಸ್ ಪೋರ್ಟಲ್ ‘ತೆಲುಗು ಸ್ಕ್ರೈಬ್‌’ನ ಪತ್ರಕರ್ತ ಗೌತಮ್ ಪೋತಗೋನಿ ಅವರನ್ನು ಅಕ್ಟೋಬರ್ 7ರಂದು ಸೋಮವಾರ ತೆಲಂಗಾಣದಲ್ಲಿ ಬಂಧಿಸಲಾಗಿದೆ. ಅವರ ವಿರುದ್ದ ರಾಜಕೀಯ ಸಂಘರ್ಷ ಸೃಷ್ಟಿಗೆ ಪ್ರಯತ್ನ, ಸಾರ್ವಜನಿಕ ಸಾಮರಸ್ಯ ಕದಡುವುದು ಮತ್ತು ಸಿಎಂ ರೇವಂತ್ ರೆಡ್ಡಿಯನ್ನು ಅವಮಾನಿಸಿದ ಆರೋಪ ಹೊರಿಸಲಾಗಿದೆ.

ಗೌತಮ್ ಅವರು ತನ್ನ ಎಕ್ಸ್ ಖಾತೆಯಲ್ಲಿ ಏಳು ತಿಂಗಳ ಹಿಂದೆ, ಅಂದರೆ ಕಳೆದ ಮಾರ್ಚ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೈತರೊಬ್ಬರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಹೊಗಳಿ, ಕಾಂಗ್ರೆಸ್ ನೇತೃತ್ವದ ಪ್ರಸ್ತುತ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ ದೃಶ್ಯವಿತ್ತು ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

ಸೆಪ್ಟೆಂಬರ್‌ನಲ್ಲಿ ಪತ್ರಕರ್ತ ಗೌತಮ್ ಪೋತಗೋನಿ ವಿರುದ್ಧ ದಾಖಲಿಸಲಾದ ನಾಲ್ಕು ಎಫ್‌ಐಆರ್‌ಗಳನ್ನು ಆಧರಿಸಿ ಬಂಧನ ನಡೆದಿದೆ. ಅವುಗಳಲ್ಲಿ ಮೂರು ಈ ಅವರು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿವೆ. ಮಾರ್ಚ್‌ನಲ್ಲಿ ವೈರಲ್ ಆದ ವಿಡಿಯೋ ಸಂಬಂಧ ಸೆಪ್ಟೆಂಬರ್‌ನಲ್ಲಿ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ ಎಂದು ವರದಿ ತಿಳಿಸಿದೆ.

ಮಾರ್ಚ್ 12, 2024 ರಂದು, ಗೌತಮ್ ಅವರು ನಲ್ಗೊಂಡದ ರೈತರೊಬ್ಬರ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ “ನನ್ನ ಪ್ರವಾಸದ ಸಮಯದಲ್ಲಿ, ನಾನು ನಿನ್ನೆ ಹೃದಯವಿದ್ರಾವಕ ಘಟನೆಯೊಂದನ್ನು ಎದುರಿಸಿದೆ. ನಲ್ಗೊಂಡ ಜಿಲ್ಲೆಯ ಮುಶಂಪಲ್ಲಿ ಗ್ರಾಮದ ಮಲ್ಲಯ್ಯ ಎಂಬ ರೈತ ನನಗೆ ಖುದ್ದಾಗಿ ವಿಡಿಯೋ ರೆಕಾರ್ಡ್ ಮಾಡಿ ಕೆಸಿಆರ್ ಅವರಿಗೆ ಕಳುಹಿಸುವಂತೆ ಕೇಳಿಕೊಂಡರು” ಎಂದು ಬರೆದುಕೊಂಡಿದ್ದರು.

ಗೌತಮ್ ಹಂಚಿಕೊಂಡಿದ್ದ ವಿಡಿಯೋದಲ್ಲಿ ರೈತ ಮಲ್ಲಯ್ಯ ಅವರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಬಿಆರ್‌ಎಸ್ ಸರ್ಕಾರದ ಕಾರ್ಯಕ್ರಮವಾದ ರೈತ ಬಂಧು ಅನ್ನು ಹೊಗಳಿದ್ದರು. ಬಿಆರ್‌ಎಸ್ ಸರ್ಕಾರ ಪರಿಚಯಿಸಿದ ರೈತರ ಹೂಡಿಕೆ ಬೆಂಬಲ ಯೋಜನೆ ಬಗ್ಗೆ ಹೆಚ್ಚು ಮಾತನಾಡಿದ್ದರು. ಪ್ರಸ್ತುತ ಆಡಳಿತದಲ್ಲಿ ತಾನು ಸಾಲದ ಸುಳಿಯಲ್ಲಿ ಸಿಲುಕಿದ್ದೇನೆ ಎಂದಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ತೆಲುಗು ಸ್ಕ್ರೈಬ್ ತೆಲಂಗಾಣದಲ್ಲಿ ಕಾಂಗ್ರೆಸ್ ಅನ್ನು ಟೀಕಿಸುವ ಮತ್ತು ಪ್ರತಿಪಕ್ಷ ಬಿಆರ್‌ಎಸ್‌ ಅನ್ನು ಬೆಂಬಲಿಸುವ ಸುದ್ದಿ ಸಂಸ್ಥೆಯಾಗಿದೆ.

ಶೇಕ್ ಅಶ್ರಫ್ ಎಂಬ ಉದ್ಯಮಿ ಮತ್ತು ಅನುಮಕೊಂಡ ಭಾರ್ಗವ್ ಎಂಬ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 28 ರಂದು ಖಾರ್ಕಾನಾ ಮತ್ತು ವನಸ್ಥಲಿಪುರಂ ಪೊಲೀಸ್ ಠಾಣೆಗಳಲ್ಲಿ ಗೌತಮ್ ವಿರುದ್ದ ಮೊದಲ ಮತ್ತು ಎರಡನೇ ಎಫ್‌ಐಆರ್ ದಾಖಲಾಗಿದೆ. ಮಂಚಾಲ್ ಪೊಲೀಸ್ ಠಾಣೆಯಲ್ಲಿ ಐ ರಾಮಚಂದ್ರ ರೆಡ್ಡಿ ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 29 ರಂದು ಗೌತಮ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ಮೂವರ ದೂರುಗಳಲ್ಲೂ “ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಪೋಸ್ಟ್‌ಗಳನ್ನು ಹಾಕಿದ್ದು. ಅದು ನಮ್ಮ ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರವನ್ನು ಅವಹೇಳನ ಮಾಡಿದೆ” ಎಂದು ಆರೋಪಿಸಲಾಗಿದೆ.

“ಅಂತಹ ಪೋಸ್ಟ್‌ಗಳು ರಾಜಕೀಯ ಉದ್ವಿಗ್ನತೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉಂಟು ಮಾಡುತ್ತವೆ. ಸಾರ್ವಜನಿಕರ ನಡುವಿನ ಸಾಮಾರಸ್ಯ ಕೆಡಸುತ್ತವೆ. ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಬಹುದು. ವಿಡಿಯೋ ಪೋಸ್ಟ್ ಮಾಡಿದವರು ಅನಗತ್ಯ ವದಂತಿಗಳನ್ನು ಹರಡುತ್ತಿದ್ದಾರೆ. ಅದು ಸಾರ್ವಜನಿಕರನ್ನು ದಾರಿ ತಪ್ಪಿಸುವಂತಿದೆ. ಅದರಿಂದಾಗಿ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗುತ್ತದೆ” ಎಂದು ಮೂವರ ದೂರುಗಳಲ್ಲಿ ಹೇಳಲಾಗಿದೆ.

ಜೆ ಸಂಜೀವ್ ರೆಡ್ಡಿ ಎಂಬ ವ್ಯಕ್ತಿಯ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಗೌತಮ್ ಮತ್ತು ತೆಲುಗು ಸ್ಕ್ರೈಬ್ ಸಂಸ್ಥೆಯ ವಿರುದ್ದ ನಾಲ್ಕನೇ ಎಫ್‌ಐಆರ್ ದಾಖಲಿಸಿದ್ದಾರೆ. ಈ ದೂರಿನಲ್ಲಿ ಸುದ್ದಿ ಸಂಸ್ಥೆ ಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಮೂರು ಯುಆರ್‌ಎಲ್‌ಗಳನ್ನು ಅಳಿಸಬೇಕು ಎಂದು ಒತ್ತಾಯಿಸಲಾಗಿದೆ. ಅವುಗಳಲ್ಲಿ ಒಂದು ಅದಿಲಾಬಾದ್‌ನಲ್ಲಿ ಹಿರಿಯ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸರ್ಕಾರ ಕೆಡವಬೇಕು ಎಂದು ಅವಾಚ್ಯವಾಗಿ ನಿಂದಿಸಿರುವುದು ಎಂದು ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಇದನ್ನೂ ಓದಿ : ಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ – ಎಡಿಆರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...