Homeಮುಖಪುಟಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

- Advertisement -
- Advertisement -

ಜಾಗತಿಕ ಹಸಿವು ಸೂಚ್ಯಂಕ (GHI)ದಲ್ಲಿ ಭಾರತವು ವಿಶ್ವದ 127 ದೇಶಗಳಲ್ಲಿ 105 ನೇ ಸ್ಥಾನದಲ್ಲಿದೆ ಎಂದು 2024ರ 19ನೇ ಹಸಿವು ಸೂಚ್ಯಂತ ವರದಿ ಹೇಳಿದೆ. ಭಾರತವು ‘ಗಂಭೀರ’ ಹಸಿವಿನ ಸಮಸ್ಯೆಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿದ್ದು, ತನ್ನ ನೆರೆಯ ರಾಷ್ಟ್ರಗಳಾದ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದುಳಿದಿದೆ ಎಂದು ವರದಿ ಹೇಳಿದೆ. ಭಾರತದಲ್ಲಿ ಗಂಭೀರ ಹಸಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಕನ್ಸರ್ನ್ ವರ್ಲ್ಡ್‌ವೈಡ್’ ಮತ್ತು ‘ವೆಲ್ತ್‌ಹಂಗರ್‌ಹಿಲ್ಫ್’ ಜಂಟಿಯಾಗಿ ಪ್ರಕಟಿಸುತ್ತಿರುವ GHI ವರದಿಯ ಸರಣಿಯು ವಿಶ್ವಾದ್ಯಂತ ಹಸಿವನ್ನು ಟ್ರ್ಯಾಕ್ ಮಾಡುತ್ತದೆ ಮತ್ತು ತುರ್ತು ಕ್ರಮ ಅಗತ್ಯವಿರುವ ಪ್ರದೇಶಗಳ ಮೇಲೆ ಕೇಂದ್ರೀಕರಿಸುತ್ತದೆ.ಅದಾಗ್ಯೂ, ಭಾರತವು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕಿಂತ ಸ್ವಲ್ಪ ಮೇಲಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನವೆಂಬರ್ 1 ರಂದು ಎಲ್ಲಾ ಕಂಪನಿ, ಶಿಕ್ಷಣ ಕೇಂದ್ರಗಳಲ್ಲಿ ಕರ್ನಾಟಕ ಧ್ವಜಾರೋಹಣ ಕಡ್ಡಾಯ: ಡಿಕೆ ಶಿವಕುಮಾರ್

2024 ರ ವರದಿಯಲ್ಲಿ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಕೋರ್ 27.3 ಇದ್ದು, ಇದು ಹಸಿವಿನ ಗಂಭೀರ ಮಟ್ಟವನ್ನು ಪ್ರತಿಬಿಂಬಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅಪೌಷ್ಟಿಕತೆಯ ಹರಡುವಿಕೆ ಸ್ವಲ್ಪ ಹೆಚ್ಚಳವಾಗಿದೆ ಎಂದು ವರದಿಯು ಹೇಳಿದೆ.

ಭಾರತದ 2016ರ GHI ಸ್ಕೋರ್‌ 29.3ಕ್ಕೆ ಹೋಲಿಸಿದರೆ 2024 ಸ್ಕೋರ್‌ ಸ್ವಲ್ಪ ಸುಧಾರಣೆಯಾಗಿದೆ. ಅದಾಗ್ಯೂ, ಈ ಸ್ಕೋರ್‌ ‘ಗಂಭೀರ ಹಸಿವು’ ವರ್ಗದ ಅಡಿಯಲ್ಲಿ ಬರುತ್ತದೆ. 2000 ಮತ್ತು 2008 ರಲ್ಲಿ ಕ್ರಮವಾಗಿ 38.4 ಮತ್ತು 35.2 ಅಂಕಗಳಿಗೆ ಹೋಲಿಸಿದರೆ ಗಣನೀಯ ಪ್ರಗತಿಯಾಗಿದೆ. ಈ ಎರಡೂ ಸ್ಕೋರ್‌ ಅನ್ನು ‘ಆತಂಕಕಾರಿ’ ಎಂದು ವರ್ಗೀಕರಿಸಲಾಗಿದೆ.

ಇದನ್ನೂಓದಿ: FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ಭಾರತವು ಮಕ್ಕಳ ಅಪೌಷ್ಟಿಕತೆಯಲ್ಲಿ ತೀವ್ರ ಸವಾಲುಗಳನ್ನು ಎದುರಿಸುತ್ತಲೇ ಇದೆ. ಜಾಗತಿಕವಾಗಿ ಅತಿ ಹೆಚ್ಚು ಮಕ್ಕಳ ಅಪೌಷ್ಠಿಕತೆ ಪ್ರಮಾಣ 18.7% ಇದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 35.5%ರಷ್ಟಿದ್ದು, ಐದು ವರ್ಷದೊಳಗಿನ ಮರಣ ಪ್ರಮಾಣವು 2.9% ಮತ್ತು ಅಪೌಷ್ಟಿಕತೆಯ ಪ್ರಮಾಣವು 13.7% ಇದೆ.

2000 ರಿಂದ ಭಾರತವು ತನ್ನ ಮಕ್ಕಳ ಮರಣ ಪ್ರಮಾಣವನ್ನು ಗಣನೀಯವಾಗಿ ಸುಧಾರಿಸಿದೆಯಾದರೂ, ಮಕ್ಕಳ ಅಪೌಷ್ಟಿಕತೆಯು ದೊಡ್ಡ ಸಮಸ್ಯೆಯಾಗಿ ಉಳಿದಿದೆ. ಬೆಳವಣಿಗೆ ಕುಂಠಿತ ದರಗಳು ಇನ್ನೂ ಆತಂಕಕಾರಿಯಾಗಿ ಹೆಚ್ಚಿವೆ. ಭಾರತದಲ್ಲಿ ಗಂಭೀರ ಹಸಿವು

2016 ರಿಂದ ಹಸಿವನ್ನು ಕಡಿಮೆ ಮಾಡುವಲ್ಲಿ ಜಾಗತಿಕ ಪ್ರಗತಿಯು ಕುಂಠಿತವಾಗಿದೆ ಎಂದು 2024ರ GHI ವರದಿ ಎತ್ತಿ ತೋರಿಸುತ್ತದೆ. 2030 ರ ವೇಳೆಗೆ ಶೂನ್ಯ ಹಸಿವನ್ನು ಸಾಧಿಸುವ ಗುರಿಯು ಅಸಂಭವವಾಗಿದೆ ಎಂದು ವರದಿ ಹೇಳಿದೆ. ಮೌಲ್ಯಮಾಪನ ಮಾಡಿದ 127 ದೇಶಗಳಲ್ಲಿ, 42 ದೇಶಗಳು ಇನ್ನೂ ‘ಆತಂಕಕಾರಿ’ ಅಥವಾ ‘ಗಂಭೀರ’ ಹಸಿವಿನ ಮಟ್ಟವನ್ನು ಅನುಭವಿಸುತ್ತಿವೆ.

ವಿಡಿಯೊನೋಡಿ: DCM ಆಗಿದ್ದವರು, ಸಚಿವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ – ಅಶ್ವಥ್ ನಾರಾಯಣ್ ವಿರುದ್ಧ ಡಿ.ಕೆ ಸುರೇಶ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...