Homeಮುಖಪುಟಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ : 19 ಮಂದಿಗೆ ಗಾಯ

ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ : 19 ಮಂದಿಗೆ ಗಾಯ

- Advertisement -
- Advertisement -

ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ.

ನಿನ್ನೆ(ಅ.11) ರಾತ್ರಿ 8:30ರ ಸುಮಾರಿಗೆ ಚೆನ್ನೈ-ಗುಡೂರು ವಿಭಾಗದ ಪೊನ್ನೇರಿ ಮತ್ತು ಕವರೈಪ್ಪೆಟ್ಟೈ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಪ್ಯಾಸೆಂಜರ್ ರೈಲಿನ 12 ರಿಂದ 13 ಬೋಗಿಗಳು ಹಳಿ ತಪ್ಪಿವೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು, ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ತಪ್ಪಾಗಿ ಪ್ರವೇಶಿಸಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್‌ ರೈಲಿನಲ್ಲಿದ್ದ ಪಾರ್ಸೆಲ್ ವ್ಯಾನ್‌ಗೆ ಬೆಂಕಿ ಹೊತ್ತಿಕೊಂಡಿದೆ.

ವಿಷಯ ತಿಳಿದು ದಕ್ಷಿಣ ರೈಲ್ವೆ ಮತ್ತು ಸ್ಥಳೀಯ ಅಧಿಕಾರಿಗಳ ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಿದ್ದಾರೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಘಟನೆಯಲ್ಲಿ 14 ಮಂದಿಗೆ ಹೆಚ್ಚಿನ ಗಾಯಗಳಾಗಿವೆ. ಅವರನ್ನು ಸ್ಥಳೀಯ ಸ್ಟಾನ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸರ್ಕಾರವು ತ್ವರಿತ ಪರಿಹಾರ ಮತ್ತು ರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿದೆ. ಗಾಯಗೊಂಡ ವ್ಯಕ್ತಿಗಳನ್ನು ತಕ್ಷಣವೇ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದೆ. ಸಂಕಷ್ಟಕ್ಕೆ ಸಿಲುಕಿರುವ ಪ್ರಯಾಣಿಕರಿಗೆ ಆಹಾರ ಮತ್ತು ಪರ್ಯಾಯ ಪ್ರಯಾಣ ಸೌಲಭ್ಯಗಳನ್ನು ವ್ಯವಸ್ಥೆಗೊಳಿಸಲು ತಂಡವನ್ನು ರಚಿಸಲಾಗಿದೆ” ಎಂದು ನಿನ್ನೆ ರಾತ್ರಿಯೇ ಸಿಎಂ ತಿಳಿಸಿದ್ದರು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು , “ರೈಲು ಅಪಘಾತದ ಕುರಿತು ಮಾಹಿತಿ ದೊರೆತ ಕೂಡಲೇ ಸಚಿವ ಎಸ್‌.ಎಂ ನಾಸರ್ ಜೊತೆ ಜಿಲ್ಲಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದೇನೆ. ಅಪಘಾತಗೊಂಡ ರೈಲು ಬೋಗಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳ ನಿರತವಾಗಿದೆ. ನಾನು ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದೇನೆ” ಎಂದು ಮಾಹಿತಿ ನೀಡಿದ್ದರು.

ಘಟನೆಯ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ರೈಲ್ವೆ ಮಂಡಳಿ, “ರೈಲಿನ ಲೋಕೋ ಪೈಲಟ್ ಸಿಬ್ಬಂದಿ ಮತ್ತು ಗಾರ್ಡ್ ಸುರಕ್ಷಿತವಾಗಿದ್ದಾರೆ. ಸುಮಾರು 12-13 ಬೋಗಿಗಳು ಹಳಿ ತಪ್ಪಿವೆ. ಇಲ್ಲಿಯವರೆಗೆ, ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಆದರೆ, ಕೆಲವರಿಗೆ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ” ಎಂದು ತಿಳಿಸಿದೆ.

ರೈಲು ಅಪಘಾತದ ಹಿನ್ನೆಲೆ, ಆ ಮಾರ್ಗಗವಾಗಿ ಸಾಗುವ ಎಂಟು ರೈಲುಗಳನ್ನು ಪರ್ಯಾಯ ಮಾರ್ಗಗಳಿಗೆ ತಿರುಗಿಸಲಾಗಿದೆ ಮತ್ತು ಎರಡನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ : ವಿದ್ಯಾರ್ಥಿಯ ಅನಿರ್ದಿಷ್ಟಾವಧಿ ಉಚ್ಚಾಟನೆ ಶೈಕ್ಷಣಿಕ ಸಾವಿಗೆ ಕಾರಣ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...