Homeಮುಖಪುಟಡಾಲರ್ ಎದುರು ಸಾರ್ವಕಾಲಿಕ ಪತನ ಕಂಡ ರೂಪಾಯಿ

ಡಾಲರ್ ಎದುರು ಸಾರ್ವಕಾಲಿಕ ಪತನ ಕಂಡ ರೂಪಾಯಿ

- Advertisement -
- Advertisement -

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಭಾರತದ ರೂಪಾಯಿ ಸಾರ್ವಕಾಲಿಕ ಪತನ ಕಂಡಿದ್ದು, ಇದೇ ಮೊದಲ ಬಾರಿಗೆ ಪ್ರತಿ ಡಾಲರ್‌ಗೆ 84 ರೂಪಾಯಿಗೆ ಕುಸಿದಿದೆ.

ಇದು, ಗುರುವಾರ ಮುಕ್ತಾಯಕ್ಕೆ ಇದ್ದ ಬೆಲೆಯಾದ 83.94 ರೂಪಾಯಿಗಳಿಗೆ ಹೋಲಿಸಿದರೆ 12 ಪೈಸೆಯಷ್ಟು ಕಡಿಮೆ. ಶುಕ್ರವಾರ 83.98 ರೂಪಾಯಿಯೊಂದಿಗೆ ದಿನದ ವಹಿವಾಟು ಅರಂಭವಾದರೆ, ಮಧ್ಯಂತರ ಅವಧಿಯಲ್ಲಿ ದಾಖಲೆ ಕನಿಷ್ಠ ಮಟ್ಟವನ್ನು ತಲುಪಿ 84.07 ರೂಪಾಯಿ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಈ ಮಿತಿಯನ್ನು ಎರಡು ತಿಂಗಳಿನಿಂದ ಸಮರ್ಥಿಸಿಕೊಳ್ಳುತ್ತಾ ಬಂದಿದೆ. ಕರೆನ್ಸಿ ಮಾರುಕಟ್ಟೆಯಲ್ಲಿ ತೀಕ್ಷ್ಣ ಪ್ರಮಾಣದ ಚಂಚಲತೆಯನ್ನು ತಡೆಯುವ ಉದ್ದೇಶದಿಂದ ಶುಕ್ರವಾರ ಆರ್‌ಬಿಐ ಮಧ್ಯಪ್ರವೇಶ ಮಾಡಿದೆ.

ಕಾರ್ಯತಂತ್ರದ ಭಾಗವಾಗಿ 84 ರೂಪಾಯಿ ಮಿತಿಯನ್ನು ದಾಟಲು ಆರ್‌ಬಿಐ ಅವಕಾಶ ನೀಡಿದೆ ಎನ್ನುವುದು ಕೆಲ ಡೀಲರ್‌ಗಳ ಭಾವನೆ. ಇರಾನ್-ಇಸ್ರೇಲ್ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಲ್ಲಿ ಹೆಚ್ಚಿನ ಚಂಚಲತೆ ಸೃಷ್ಟಿಯಾಗುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಈ ಅವಕಾಶ ಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಮೆರಿಕದ ಫೆಡರಲ್ ರಿಸರ್ವ್, ನವೆಂಬರ್‌ನಲ್ಲಿ 50 ಮೂಲ ಅಂಶಗಳಷ್ಟು ದರವನ್ನು ಕಡಿತಗೊಳಿಸುವ ಮಬ್ಬು ನಿರೀಕ್ಷೆಯ ಹಿನ್ನೆಲೆಯಲ್ಲಿ ಡಾಲರ್‌ಗಳ ಬಲವರ್ಧನೆಯು, ರೂಪಾಯಿ ದುರ್ಬಲತೆಗೆ ಮತ್ತಷ್ಟು ಕೊಡುಗೆ ನೀಡಿದೆ.

ರೂಪಾಯಿಯ ಮೌಲ್ಯವನ್ನು 84ರ ಮಟ್ಟ ಮೀರಲು ಅವಕಾಶ ನೀಡುವ ಮೂಲಕ ಮುಂದಿನ ವಾರದ ಸಂಭಾವ್ಯ ಚಂಚಲತೆ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಲು ಇದು ಅರ್‌ಬಿಐಗೆ ಅವಕಾಶ ಕಲ್ಪಿಸಲಿದೆ.

ಕಳೆದ ಎರಡು ತಿಂಗಳುಗಳಲ್ಲಿ ಇತರ ಏಷ್ಯನ್ ಕರೆನ್ಸಿಗಳು ಶೇಕಡ 5ರಷ್ಟು ಬಲವರ್ಧನೆ ಪಡೆದಿದ್ದರೆ, ಭಾರತದ ರೂಪಾಯಿ ಸ್ಥಿರತೆ ಕಾಪಾಡಿಕೊಂಡಿತ್ತು. ಇದು ಕರೆನ್ಸಿ ವ್ಯತ್ಯಯವನ್ನು ನಿರ್ವಹಿಸುವಲ್ಲಿ ಆರ್‌ಬಿಐ ಸಕ್ರಿಯ ಪಾತ್ರವನ್ನು ಬಿಂಬಿಸುತ್ತದೆ.

ಈಕ್ವಿಟಿ ಮಾರುಕಟ್ಟೆಗಳಲ್ಲಿನ ಏರಿಕೆಯಿಂದ ಉತ್ತೇಜಿತಗೊಂಡ ರೂಪಾಯಿ ಕೇವಲ ಎರಡು ವಾರಗಳ ಹಿಂದೆ 83.5 ಕ್ಕೆ ಬಲಗೊಂಡಿತ್ತು. ಏರುತ್ತಿರುವ ಕಚ್ಚಾ ಬೆಲೆಗಳು ಮತ್ತು ಭಾರತೀಯ ಷೇರುಗಳಿಂದ ವಿದೇಶಿ ಹೊರಹರಿವು ಕೆಳಮುಖ ಒತ್ತಡವನ್ನು ಉಂಟುಮಾಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...