Homeಮುಖಪುಟಡಾಲರ್ ಎದುರು ಸಾರ್ವಕಾಲಿಕ ಪತನ ಕಂಡ ರೂಪಾಯಿ

ಡಾಲರ್ ಎದುರು ಸಾರ್ವಕಾಲಿಕ ಪತನ ಕಂಡ ರೂಪಾಯಿ

- Advertisement -
- Advertisement -

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಭಾರತದ ರೂಪಾಯಿ ಸಾರ್ವಕಾಲಿಕ ಪತನ ಕಂಡಿದ್ದು, ಇದೇ ಮೊದಲ ಬಾರಿಗೆ ಪ್ರತಿ ಡಾಲರ್‌ಗೆ 84 ರೂಪಾಯಿಗೆ ಕುಸಿದಿದೆ.

ಇದು, ಗುರುವಾರ ಮುಕ್ತಾಯಕ್ಕೆ ಇದ್ದ ಬೆಲೆಯಾದ 83.94 ರೂಪಾಯಿಗಳಿಗೆ ಹೋಲಿಸಿದರೆ 12 ಪೈಸೆಯಷ್ಟು ಕಡಿಮೆ. ಶುಕ್ರವಾರ 83.98 ರೂಪಾಯಿಯೊಂದಿಗೆ ದಿನದ ವಹಿವಾಟು ಅರಂಭವಾದರೆ, ಮಧ್ಯಂತರ ಅವಧಿಯಲ್ಲಿ ದಾಖಲೆ ಕನಿಷ್ಠ ಮಟ್ಟವನ್ನು ತಲುಪಿ 84.07 ರೂಪಾಯಿ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಈ ಮಿತಿಯನ್ನು ಎರಡು ತಿಂಗಳಿನಿಂದ ಸಮರ್ಥಿಸಿಕೊಳ್ಳುತ್ತಾ ಬಂದಿದೆ. ಕರೆನ್ಸಿ ಮಾರುಕಟ್ಟೆಯಲ್ಲಿ ತೀಕ್ಷ್ಣ ಪ್ರಮಾಣದ ಚಂಚಲತೆಯನ್ನು ತಡೆಯುವ ಉದ್ದೇಶದಿಂದ ಶುಕ್ರವಾರ ಆರ್‌ಬಿಐ ಮಧ್ಯಪ್ರವೇಶ ಮಾಡಿದೆ.

ಕಾರ್ಯತಂತ್ರದ ಭಾಗವಾಗಿ 84 ರೂಪಾಯಿ ಮಿತಿಯನ್ನು ದಾಟಲು ಆರ್‌ಬಿಐ ಅವಕಾಶ ನೀಡಿದೆ ಎನ್ನುವುದು ಕೆಲ ಡೀಲರ್‌ಗಳ ಭಾವನೆ. ಇರಾನ್-ಇಸ್ರೇಲ್ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಲ್ಲಿ ಹೆಚ್ಚಿನ ಚಂಚಲತೆ ಸೃಷ್ಟಿಯಾಗುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಈ ಅವಕಾಶ ಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಮೆರಿಕದ ಫೆಡರಲ್ ರಿಸರ್ವ್, ನವೆಂಬರ್‌ನಲ್ಲಿ 50 ಮೂಲ ಅಂಶಗಳಷ್ಟು ದರವನ್ನು ಕಡಿತಗೊಳಿಸುವ ಮಬ್ಬು ನಿರೀಕ್ಷೆಯ ಹಿನ್ನೆಲೆಯಲ್ಲಿ ಡಾಲರ್‌ಗಳ ಬಲವರ್ಧನೆಯು, ರೂಪಾಯಿ ದುರ್ಬಲತೆಗೆ ಮತ್ತಷ್ಟು ಕೊಡುಗೆ ನೀಡಿದೆ.

ರೂಪಾಯಿಯ ಮೌಲ್ಯವನ್ನು 84ರ ಮಟ್ಟ ಮೀರಲು ಅವಕಾಶ ನೀಡುವ ಮೂಲಕ ಮುಂದಿನ ವಾರದ ಸಂಭಾವ್ಯ ಚಂಚಲತೆ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಲು ಇದು ಅರ್‌ಬಿಐಗೆ ಅವಕಾಶ ಕಲ್ಪಿಸಲಿದೆ.

ಕಳೆದ ಎರಡು ತಿಂಗಳುಗಳಲ್ಲಿ ಇತರ ಏಷ್ಯನ್ ಕರೆನ್ಸಿಗಳು ಶೇಕಡ 5ರಷ್ಟು ಬಲವರ್ಧನೆ ಪಡೆದಿದ್ದರೆ, ಭಾರತದ ರೂಪಾಯಿ ಸ್ಥಿರತೆ ಕಾಪಾಡಿಕೊಂಡಿತ್ತು. ಇದು ಕರೆನ್ಸಿ ವ್ಯತ್ಯಯವನ್ನು ನಿರ್ವಹಿಸುವಲ್ಲಿ ಆರ್‌ಬಿಐ ಸಕ್ರಿಯ ಪಾತ್ರವನ್ನು ಬಿಂಬಿಸುತ್ತದೆ.

ಈಕ್ವಿಟಿ ಮಾರುಕಟ್ಟೆಗಳಲ್ಲಿನ ಏರಿಕೆಯಿಂದ ಉತ್ತೇಜಿತಗೊಂಡ ರೂಪಾಯಿ ಕೇವಲ ಎರಡು ವಾರಗಳ ಹಿಂದೆ 83.5 ಕ್ಕೆ ಬಲಗೊಂಡಿತ್ತು. ಏರುತ್ತಿರುವ ಕಚ್ಚಾ ಬೆಲೆಗಳು ಮತ್ತು ಭಾರತೀಯ ಷೇರುಗಳಿಂದ ವಿದೇಶಿ ಹೊರಹರಿವು ಕೆಳಮುಖ ಒತ್ತಡವನ್ನು ಉಂಟುಮಾಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...