Homeಮುಖಪುಟಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

- Advertisement -
- Advertisement -

ರಾಜಸ್ಥಾನ ಸರ್ಕಾರದ ಕಾಳಿ ಬಾಯಿ ಭೀಲ್ ಸ್ಕೂಟಿ ಯೋಜನೆಯಡಿ ಖರೀದಿಸಲಾದ 1,500 ಕ್ಕೂ ಹೆಚ್ಚು ಹೊಚ್ಚ ಹೊಸ ಸ್ಕೂಟರ್‌ಗಳು ಬಳಕೆಯಾಗದೆ ಕ್ರಮೇಣ ಗುಜಿರಿ ವಸ್ತುಗಳಾಗಿ ಬದಲಾಗುತ್ತಿವೆ ಎಂದು ವರದಿಯಾಗದೆ. 2020 ರಲ್ಲಿ ಪ್ರಾರಂಭಿಸಲಾದ ಕಾಳಿ ಬಾಯಿ ಭೀಲ್ ಸ್ಕೂಟಿ ಯೋಜನೆಯಡಿಯಲ್ಲಿ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡಲು ಬನ್ಸ್ವಾರಾದ ಎರಡು ಕಾಲೇಜುಗಳಲ್ಲಿ ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ಹುಡುಗಿಯರಿಗೆ ಸ್ಕೂಟರ್‌ಗಳನ್ನು ನೀಡಲಾಗುತ್ತಿತ್ತು. ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಾರ್ಷಿಕವಾಗಿ ₹2.5 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಕುಟುಂಬಗಳ ಮತ್ತು ರಾಜ್ಯ ಬೋರ್ಡ್ ಪರೀಕ್ಷೆಗಳಲ್ಲಿ 65% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಾಗೂ 10 ನೇ ಅಥವಾ 12 ನೇ ತರಗತಿಯ CBSE ಪರೀಕ್ಷೆಗಳಲ್ಲಿ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹುಡುಗಿಯರು ಈ ಯೋಜನೆಯ ಸ್ಕೂಟರ್ ಪಡೆಯುವ ಅರ್ಹತೆ ಹೊಂದಿದವರಾಗಿದ್ದಾರೆ. ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ

ಇದನ್ನೂ ಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಅದಾಗ್ಯೂ, 2023ರಿಂದ ವಿದ್ಯಾಮಂದಿರ ಕಾಲೇಜು ಹಾಗೂ ಹರದೇವ್‌ ಜೋಶಿ ಸರಕಾರಿ ಬಾಲಕಿಯರ ಕಾಲೇಜು ಮೈದಾನದಲ್ಲಿ ₹80,000 ಬೆಲೆಬಾಳುವ ಒಟ್ಟು ₹12 ಕೋಟಿ ವೆಚ್ಚದ ಸ್ಕೂಟರ್‌ಗಳು ಬಳಕೆಯಾಗದೆ ಕೊಳೆಯುತ್ತಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ ಬಿಜೆಪಿ ಗೆದ್ದ ನಂತರ ಸರ್ಕಾರ ಬದಲಾದ ಕಾರಣ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು NDTV ಗೆ ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳಿಗೆ ಸ್ಕೂಟರ್‌ಗಳನ್ನು ನಿಯೋಜಿಸಿದ ನಂತರ, ಹಣಕಾಸು ಇಲಾಖೆಯಿಂದ ಅವರಿಗೆ QR ಕೋಡ್ ಅನ್ನು ರಚಿಸಲಾಗುತ್ತದೆ, ಆದಾಗ್ಯೂ, 1,500 ಸ್ಕೂಟರ್‌ಗಳಿಗೆ ಈ ಪ್ರಕ್ರಿಯೆಯನ್ನು ಇನ್ನೂ ಪ್ರಾರಂಭಿಸಲಾಗಿಲ್ಲ. 

ಇದನ್ನೂಓದಿ: ಬೆದರಿಕೆ ಆರೋಪ : ಹೆಚ್‌ಡಿಕೆ ವಿರುದ್ದ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್

ಹರದೇವ್ ಜೋಶಿ ಸರ್ಕಾರಿ ಬಾಲಕಿಯರ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರಳಾ ಪಾಂಡ್ಯ ಎನ್‌ಡಿಟಿವಿಗೆ ಮಾತನಾಡಿ, “ಕಲ್ಯಾಣ ಯೋಜನೆಯಡಿ ಸ್ಕೂಟಿಗಳನ್ನು ವಿತರಿಸುವ ನೋಡಲ್ ಕಾಲೇಜು ನಮ್ಮದಾಗಿದೆ. ಮಾದರಿ ನೀತಿ ಸಂಹಿತೆಯಿಂದಾಗಿ ಅವುಗಳನ್ನು ವಿತರಿಸಲಾಗಿಲ್ಲ ಮತ್ತು ಈಗ ಹಣಕಾಸು ಇಲಾಖೆಯಿಂದ ಅನುಮತಿಗಾಗಿ ನಾವು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿನ ಈ ವಿಳಂಬಕ್ಕೆ ಪ್ರತಿಪಕ್ಷಗಳು ರಾಜಸ್ಥಾನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಭಾರತ್ ಆದಿವಾಸಿ ಪಕ್ಷದ ಬನ್ಸ್ವಾರಾ ಸಂಸದ ರಾಜ್ ಕುಮಾರ್ ರೋಟ್, “ಇದು ಈ ಸರ್ಕಾರದ ಕ್ರಿಮಿನಲ್ ನಿರ್ಲಕ್ಷ್ಯವಾಗಿದೆ. ಸ್ಕೂಟರ್‌ಗಳು ತುಕ್ಕು ಹಿಡಿಯುತ್ತಿದ್ದು, ಫಲಾನುಭವಿಗಳಿಗೆ ತಲುಪುವ ಬದಲು ಗುಜಿರಿಯಾಗುತ್ತಿವೆ. ಈ ಪರಿಸ್ಥಿತಿಯ ಬಗ್ಗೆ ಸರ್ಕಾರ ನಿಗಾ ವಹಿಸದಿರುವುದು ತುಂಬಾ ದುಃಖಕರವಾಗಿದೆ” ಎಂದು ಹೇಳಿದ್ದಾರೆ.

ರಾಜಸ್ಥಾನದ ಬುಡಕಟ್ಟು ಕಲ್ಯಾಣ ಸಚಿವ ಬಾಬು ಲಾಲ್ ಖರಾಡಿ ಅವರು ಸ್ಕೂಟರ್‌ಗಳನ್ನು ಒಂದು ವಾರದೊಳಗೆ ವಿತರಿಸಲಾಗುವುದು ಎಂದು ಭರವಸೆ ನೀಡಿದ್ದಾರೆಯಾದರೂ, ಅತಿಯಾದ ವಿಳಂಬಕ್ಕೆ ಯಾವುದೇ ಕಾರಣಗಳನ್ನು ನೀಡಿಲ್ಲ. ಕರ್ತವ್ಯಲೋಪ ಮತ್ತು ಸರ್ಕಾರಿ ಆಸ್ತಿಗಳ ಬಗ್ಗೆ ನಿರ್ಲಕ್ಷ್ಯವಹಿಸಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಖಾರಾಡಿ ಭರವಸೆ ನೀಡಿದ್ದಾರೆ.

ವಿಡಿಯೊ ನೋಡಿ: ಹಾಸನ: ದಲಿತ ಕಾರ್ಮಿಕನ ಮೇಲೆ ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸರು- ಆರೋಪ

ವಿಡಿಯೊ ನೋಡಿ: ಹಾಸನ: ದಲಿತ ಕಾರ್ಮಿಕನ ಮೇಲೆ ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸರು- ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...