Homeಮುಖಪುಟ'ಪೆನ್ ಪಿಂಟರ್' ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡಿದ ಲೇಖಕಿ

- Advertisement -
- Advertisement -

ಖ್ಯಾತ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರು ತಮ್ಮ ‘ಪೆನ್ ಪಿಂಟರ್’ (PEN Pinter) ಪ್ರಶಸ್ತಿಯ ಹಣವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿಗೆ ತನ್ನ ಹೆಸರು ಘೋಷಣೆಯಾಗುತ್ತಿದ್ದಂತೆ ಅರುಂಧತಿ ರಾಯ್ ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳಿಗಾಗಿ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಬ್ರಿಟಿಷ್-ಈಜಿಪ್ಟ್‌ ಬರಹಗಾರ ಮತ್ತು ಹೋರಾಟಗಾರ ಅಲಾ ಅಬ್ದುಲ್ ಫತ್ತಾಹ್ ಅವರನ್ನು ‘ರೈಟರ್ ಆಫ್ ಕರೇಜ್’ (ಧೈರ್ಯದ ಬರಹಗಾರ) ಎಂದು ಹೆಸರಿಸಿದ್ದಾರೆ. ಈಜಿಪ್ಟ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಬ್ದುಲ್ ಫತ್ತಾಹ್ ಅವರ ಧೈರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್ 10ರಂದು ಲಂಡನ್‌ನ ಬ್ರಿಟಿಷ್ ಲೈಬ್ರರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಪ್ರಶಸ್ತಿಯ ಮಹತ್ವ ಮತ್ತು ಬರಹಗಾರರ ಪಾತ್ರದ ಬಗ್ಗೆ ಅರುಂಧತಿ ರಾಯ್ ಮಾತನಾಡಿದರು. ಅಲಾ ಅಬ್ದುಲ್ ಫತ್ತಾಹ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಾಯ್, “ನೀವು ಈ ಕೋಣೆಯಲ್ಲಿ ನಮ್ಮೊಂದಿಗೆ ಇದ್ದೀರಿ. ನೀವು ಇಲ್ಲಿಯ ಅತ್ಯಂತ ಪ್ರಮುಖ ವ್ಯಕ್ತಿ” ಎಂದರು. ಅಬ್ದುಲ್ ಫತ್ತಾಹ್ ಅವರ ವಾಕ್ಯಗಳನ್ನು ಉಲ್ಲೇಖಿಸಿದ ರಾಯ್ ಜಗತ್ತಿನ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅಬ್ದುಲ್ ಫತ್ತಾಹ್ ಅವರ ಉತ್ಸಾಹ ಮತ್ತು ಬರಹಗಳಿಗೆ ಗೌರವ ಸಲ್ಲಿಸಿದ ರಾಯ್, ಇದು ಫತ್ತಾಹ್ ಅವರ ‘ಅನ್ಯಾಯದ ಸೆರೆವಾಸದ ಬಗೆಗಿನ ಅತಿ ಮಹತ್ವದ ಜಾಗೃತಿ” ಎಂದರು.

ಬ್ರಿಟಿಷ್-ಈಜಿಪ್ಟಿನ ಬರಹಗಾರ, ಸಾಫ್ಟ್‌ವೇರ್ ಡೆವಲಪರ್ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಅಲಾ ಅಬ್ದುಲ್ ಫತ್ತಾಹ್ ಅವರು ಈಜಿಪ್ಟ್ ಜೈಲಿನಲ್ಲಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಜೈಲು ಶಿಕ್ಷೆ ಪೂರ್ಣವಾದರೂ ಇನ್ನು ಈಜಿಪ್ಟ್ ಜೈಲಿನಲ್ಲಿದ್ದಾರೆ.

ರಾಯ್ ತನ್ನ ಭಾಷಣದಲ್ಲಿ ಜಾಗತಿಕವಾಗಿ ನಡೆಯುತ್ತಿರುವ ಅನ್ಯಾಯದ ಗಡಿ ವಿವಾದಗಳು, ಜಾಗತಿಕ, ವಿಶೇಷವಾಗಿ ಭಾರತದ ರಾಜಕೀಯ ಕೈದಿಗಳ ಪರಿಸ್ಥಿತಿಯ ಬಗ್ಗೆ ಒತ್ತಿ ಹೇಳಿದರು. ತನ್ನ ಭಾಷಣದಲ್ಲಿ ಭಾರತ ಜೈಲುಗಳಲ್ಲಿ ಬಂಧಿಯಾಗಿರುವ ತನ್ನ ಸ್ನೇಹಿತರು ಹಾಗೂ ಹೋರಾಟಗಾರರಾದ ಉಮರ್ ಖಾಲಿದ್, ಗುಲ್ಫಿಶಾ ಫಾತಿಮಾ, ಖುರ್ರಮ್ ಫರ್ವೇಝ್ ಸೇರಿದಂತೆ ಹಲವರನ್ನು ನೆನಪಿಸಿದರು. ಅನ್ಯಾಯದ ಬಂಧನಗಳ ಕುರಿತು ಅವರು ಅತಂಕ ವ್ಯಕ್ತಪಡಿಸಿದರು.

ಪೆನ್ ಪಿಂಟರ್ ಪ್ರಶಸ್ತಿಯ ಕುರಿತು ಮಾತನಾಡಿದ ರಾಯ್ ಅವರು, ಹೆರಾಲ್ಡ್ ಪಿಂಟರ್ ಅವರು ‘ಅಚಲವಾದ ಧೈರ್ಯ’ದ ಕಲ್ಪನೆಯೊಂದಿಗೆ ಹೇಗೆ ಗುರುತಿಸಿಕೊಂಡರು ಎಂಬುವುದನ್ನು ವಿವರಿಸಿದರು.

ತನ್ನ ಭಾಷಣದ ಕೊನೆಯ ಭಾಗದಲ್ಲಿ ಗಾಝಾ ಮತ್ತು ಲೆಬನಾನ್‌ ಮೇಲಿನ ಇಸ್ರೇಲ್ ಆಕ್ರಮಣವನ್ನು ಉಲ್ಲೇಖಿಸಿದ ರಾಯ್, ಇಸ್ರೇಲ್‌ನ ಮಿಲಿಟರಿ ಕ್ರಮಗಳ ವಿರುದ್ದ ಕಿಡಿಕಾರಿದರು. ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳು ನರಮೇಧ ನಡೆಸುತ್ತಿವೆ ಎಂದರು. ಇಸ್ರೇಲ್‌ಗೆ ಯುಎಸ್‌ ಸರ್ಕಾರದ ಬೆಂಬಲವನ್ನು ಅವರು ಖಂಡಿಸಿದರು.

ಅಕ್ಟೋಬರ್ 7, 2023ರಿಂದ, ಇಸ್ರೇಲ್ ಗಾಝಾದಲ್ಲಿ ಸಾವಿರಾರು ಜನರನ್ನು ಕೊಂದಿದೆ. ಅದರ ಬಹುಪಾಲು ಜನರನ್ನು ಸ್ಥಳಾಂತರಿಸಿದೆ. ಈ ಕೃತ್ಯಗಳು ಕೇವಲ ಆತ್ಮರಕ್ಷಣೆಯಲ್ಲ, ಬದಲಾಗಿ ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್‌ನ ಆಕ್ರಮಣವನ್ನು ಗಟ್ಟಿಗೊಳಿಸುವ ಮತ್ತು ಅದರ ವರ್ಣಭೇದ ನೀತಿಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ಆಕ್ರಮಣಕಾರಿ ಯುದ್ಧದ ಲೆಕ್ಕಾಚಾರವಾಗಿದೆ ಎಂದು ರಾಯ್ ಒತ್ತಿ ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...