Homeಮುಖಪುಟ'ಪೆನ್ ಪಿಂಟರ್' ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡಿದ ಲೇಖಕಿ

- Advertisement -
- Advertisement -

ಖ್ಯಾತ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರು ತಮ್ಮ ‘ಪೆನ್ ಪಿಂಟರ್’ (PEN Pinter) ಪ್ರಶಸ್ತಿಯ ಹಣವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿಗೆ ತನ್ನ ಹೆಸರು ಘೋಷಣೆಯಾಗುತ್ತಿದ್ದಂತೆ ಅರುಂಧತಿ ರಾಯ್ ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳಿಗಾಗಿ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಬ್ರಿಟಿಷ್-ಈಜಿಪ್ಟ್‌ ಬರಹಗಾರ ಮತ್ತು ಹೋರಾಟಗಾರ ಅಲಾ ಅಬ್ದುಲ್ ಫತ್ತಾಹ್ ಅವರನ್ನು ‘ರೈಟರ್ ಆಫ್ ಕರೇಜ್’ (ಧೈರ್ಯದ ಬರಹಗಾರ) ಎಂದು ಹೆಸರಿಸಿದ್ದಾರೆ. ಈಜಿಪ್ಟ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಬ್ದುಲ್ ಫತ್ತಾಹ್ ಅವರ ಧೈರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್ 10ರಂದು ಲಂಡನ್‌ನ ಬ್ರಿಟಿಷ್ ಲೈಬ್ರರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಪ್ರಶಸ್ತಿಯ ಮಹತ್ವ ಮತ್ತು ಬರಹಗಾರರ ಪಾತ್ರದ ಬಗ್ಗೆ ಅರುಂಧತಿ ರಾಯ್ ಮಾತನಾಡಿದರು. ಅಲಾ ಅಬ್ದುಲ್ ಫತ್ತಾಹ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಾಯ್, “ನೀವು ಈ ಕೋಣೆಯಲ್ಲಿ ನಮ್ಮೊಂದಿಗೆ ಇದ್ದೀರಿ. ನೀವು ಇಲ್ಲಿಯ ಅತ್ಯಂತ ಪ್ರಮುಖ ವ್ಯಕ್ತಿ” ಎಂದರು. ಅಬ್ದುಲ್ ಫತ್ತಾಹ್ ಅವರ ವಾಕ್ಯಗಳನ್ನು ಉಲ್ಲೇಖಿಸಿದ ರಾಯ್ ಜಗತ್ತಿನ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅಬ್ದುಲ್ ಫತ್ತಾಹ್ ಅವರ ಉತ್ಸಾಹ ಮತ್ತು ಬರಹಗಳಿಗೆ ಗೌರವ ಸಲ್ಲಿಸಿದ ರಾಯ್, ಇದು ಫತ್ತಾಹ್ ಅವರ ‘ಅನ್ಯಾಯದ ಸೆರೆವಾಸದ ಬಗೆಗಿನ ಅತಿ ಮಹತ್ವದ ಜಾಗೃತಿ” ಎಂದರು.

ಬ್ರಿಟಿಷ್-ಈಜಿಪ್ಟಿನ ಬರಹಗಾರ, ಸಾಫ್ಟ್‌ವೇರ್ ಡೆವಲಪರ್ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಅಲಾ ಅಬ್ದುಲ್ ಫತ್ತಾಹ್ ಅವರು ಈಜಿಪ್ಟ್ ಜೈಲಿನಲ್ಲಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಜೈಲು ಶಿಕ್ಷೆ ಪೂರ್ಣವಾದರೂ ಇನ್ನು ಈಜಿಪ್ಟ್ ಜೈಲಿನಲ್ಲಿದ್ದಾರೆ.

ರಾಯ್ ತನ್ನ ಭಾಷಣದಲ್ಲಿ ಜಾಗತಿಕವಾಗಿ ನಡೆಯುತ್ತಿರುವ ಅನ್ಯಾಯದ ಗಡಿ ವಿವಾದಗಳು, ಜಾಗತಿಕ, ವಿಶೇಷವಾಗಿ ಭಾರತದ ರಾಜಕೀಯ ಕೈದಿಗಳ ಪರಿಸ್ಥಿತಿಯ ಬಗ್ಗೆ ಒತ್ತಿ ಹೇಳಿದರು. ತನ್ನ ಭಾಷಣದಲ್ಲಿ ಭಾರತ ಜೈಲುಗಳಲ್ಲಿ ಬಂಧಿಯಾಗಿರುವ ತನ್ನ ಸ್ನೇಹಿತರು ಹಾಗೂ ಹೋರಾಟಗಾರರಾದ ಉಮರ್ ಖಾಲಿದ್, ಗುಲ್ಫಿಶಾ ಫಾತಿಮಾ, ಖುರ್ರಮ್ ಫರ್ವೇಝ್ ಸೇರಿದಂತೆ ಹಲವರನ್ನು ನೆನಪಿಸಿದರು. ಅನ್ಯಾಯದ ಬಂಧನಗಳ ಕುರಿತು ಅವರು ಅತಂಕ ವ್ಯಕ್ತಪಡಿಸಿದರು.

ಪೆನ್ ಪಿಂಟರ್ ಪ್ರಶಸ್ತಿಯ ಕುರಿತು ಮಾತನಾಡಿದ ರಾಯ್ ಅವರು, ಹೆರಾಲ್ಡ್ ಪಿಂಟರ್ ಅವರು ‘ಅಚಲವಾದ ಧೈರ್ಯ’ದ ಕಲ್ಪನೆಯೊಂದಿಗೆ ಹೇಗೆ ಗುರುತಿಸಿಕೊಂಡರು ಎಂಬುವುದನ್ನು ವಿವರಿಸಿದರು.

ತನ್ನ ಭಾಷಣದ ಕೊನೆಯ ಭಾಗದಲ್ಲಿ ಗಾಝಾ ಮತ್ತು ಲೆಬನಾನ್‌ ಮೇಲಿನ ಇಸ್ರೇಲ್ ಆಕ್ರಮಣವನ್ನು ಉಲ್ಲೇಖಿಸಿದ ರಾಯ್, ಇಸ್ರೇಲ್‌ನ ಮಿಲಿಟರಿ ಕ್ರಮಗಳ ವಿರುದ್ದ ಕಿಡಿಕಾರಿದರು. ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳು ನರಮೇಧ ನಡೆಸುತ್ತಿವೆ ಎಂದರು. ಇಸ್ರೇಲ್‌ಗೆ ಯುಎಸ್‌ ಸರ್ಕಾರದ ಬೆಂಬಲವನ್ನು ಅವರು ಖಂಡಿಸಿದರು.

ಅಕ್ಟೋಬರ್ 7, 2023ರಿಂದ, ಇಸ್ರೇಲ್ ಗಾಝಾದಲ್ಲಿ ಸಾವಿರಾರು ಜನರನ್ನು ಕೊಂದಿದೆ. ಅದರ ಬಹುಪಾಲು ಜನರನ್ನು ಸ್ಥಳಾಂತರಿಸಿದೆ. ಈ ಕೃತ್ಯಗಳು ಕೇವಲ ಆತ್ಮರಕ್ಷಣೆಯಲ್ಲ, ಬದಲಾಗಿ ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್‌ನ ಆಕ್ರಮಣವನ್ನು ಗಟ್ಟಿಗೊಳಿಸುವ ಮತ್ತು ಅದರ ವರ್ಣಭೇದ ನೀತಿಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ಆಕ್ರಮಣಕಾರಿ ಯುದ್ಧದ ಲೆಕ್ಕಾಚಾರವಾಗಿದೆ ಎಂದು ರಾಯ್ ಒತ್ತಿ ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...