Homeಮುಖಪುಟಹರಿಯಾಣ ಸೋಲು | ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

ಹರಿಯಾಣ ಸೋಲು | ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

- Advertisement -
- Advertisement -

ಪ್ರಸ್ತುತ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವ್ಯವಸ್ಥೆಯು ಮತದಾರರ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡಿದೆ ಎಂದು ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಕಾಂಗ್ರೆಸ್‌ಗೆ ದಿಗ್ಭ್ರಮೆ ಮೂಡಿಸಿದ ಕೆಲವೇ ದಿನಗಳಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಹರಿಯಾಣ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಂತೆ, ಅಂಚೆ ಮತಪತ್ರಗಳಿಗೆ ಸಂಬಂಧಿಸಿದಂತೆ ಹರಿಯಾಣದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ ಎಂದು ಅವರು ಹೇಳಿದ್ದಾರೆ. ದಿಗ್ವಿಜಯ್ ಸಿಂಗ್ ಅವರು ಈ ಹಿಂದೆ ಕೂಡಾ ಹಲವಾರು ಸಂದರ್ಭಗಳಲ್ಲಿ ಇವಿಎಂಗಳ ಮೂಲಕ ಚಲಾಯಿಸಿದ ಮತಗಳ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಹರಿಯಾಣ ಸೋಲು

ಇದನ್ನೂಓದಿ: ‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

“ನಾನು ಮತದಾರನಾಗಿದ್ದು, ನನ್ನ ಮತ ನನ್ನ ಆಯ್ಕೆಯ ಅಭ್ಯರ್ಥಿಗೆ ಹೋಗಬೇಕೆಂಬುದು ನನ್ನ ಸಂವಿಧಾನದ ಹಕ್ಕು. ನಾನು ಮತಯಂತ್ರವನ್ನು ನನ್ನ ಕೈಯಿಂದ ಮತಪೆಟ್ಟಿಗೆಗೆ ಹಾಕಬೇಕು ಮತ್ತು ಈ ಮೂಲಕ ಚಲಾವಣೆಯಾದ ಮತಗಳನ್ನು 100 ಪ್ರತಿಶತ ಎಣಿಸಬೇಕು. ಆದರೆ ನನ್ನ ಸಾಂವಿಧಾನಿಕ ಹಕ್ಕನ್ನು ಪ್ರಸ್ತುತ ಇವಿಎಂ ವ್ಯವಸ್ಥೆಯಿಂದ ಕಸಿದುಕೊಳ್ಳಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನವೆಂಬರ್ 2023 ರಲ್ಲಿ ನಡೆದ ಎಂಪಿ ಚುನಾವಣೆಯಲ್ಲಿ, ಅಂಚೆ ಮತಪತ್ರಗಳ ಎಣಿಕೆಯಲ್ಲಿ ಅವರ ಪಕ್ಷವು 230 ಸ್ಥಾನಗಳಲ್ಲಿ 199 ಸ್ಥಾನಗಳನ್ನು ಗೆದ್ದಿದೆ ಎಂದು ದಿಗ್ವಿಜಯ್ ಸಿಂಗ್ ಹೇಳಿಕೊಂಡಿದ್ದಾರೆ. ಆದರೆ ಇವಿಎಂಗಳ ಮೂಲಕ ಚಲಾವಣೆಯಾದ ಮತಗಳ ಎಣಿಕೆಯ ನಂತರ ಅದು ಕೇವಲ 66 ಸ್ಥಾನಗಳನ್ನು ಪಡೆಯಲು ಸಾಧ್ಯವಾಯಿತು.

ಇದನ್ನೂಓದಿ: ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

ಅಂಚೆ ಮತ ಪದ್ಧತಿಯಲ್ಲಿ ಮತಪತ್ರಗಳ ವಿತರಣೆ ಮತ್ತು ಗುರುತು ಮಾಡಿದ ಮತಪತ್ರದ ವಾಪಸಾತಿ ಅಂಚೆ ಮೂಲಕವೇ ನಡೆಯುತ್ತದೆ. ಹರಿಯಾಣದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ 90 ಸ್ಥಾನಗಳ ಪೈಕಿ 76 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ, ಇವಿಎಂಗಳಲ್ಲಿ ದಾಖಲಾದ ಮತಗಳ ಎಣಿಕೆಯ ನಂತರ ಪಕ್ಷದ ಸ್ಥಾನಗಳ ಸಂಖ್ಯೆ 37ಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು ದೇಶದ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. “ನೀವು ಕಳೆದ ದಶಕಗಳ ಜನಸಂಖ್ಯೆಯ ಅಂಕಿಅಂಶಗಳನ್ನು ನೋಡಬಹುದು. ದೇಶದಲ್ಲಿ ಮುಸ್ಲಿಮರ ಜನಸಂಖ್ಯೆಯು ಹಿಂದೂಗಳಿಗಿಂತ ಹೆಚ್ಚು ವೇಗವಾಗಿ ಕುಸಿಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಅವರು ದೇಶದಲ್ಲಿ ಜಾತಿ ಆಧಾರಿತ ಜನಗಣತಿ ಮತ್ತು ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಯಬೇಕು ಎಂದು ಪ್ರತಿಪಾದಿಸಿದ್ದಾರೆ. “ಈ ಗಣತಿ ಮತ್ತು ಸಮೀಕ್ಷೆ ವಿವಿಧ ಜಾತಿಗಳು ಮತ್ತು ಉಪಜಾತಿಗಳ ಸಾಮಾಜಿಕ-ಆರ್ಥಿಕ ಹಿಂದುಳಿದಿರುವಿಕೆಯ ಬಗ್ಗೆ ನಿಖರವಾದ ಮಾಹಿತಿಯನ್ನು ಒದಗಿಸುತ್ತದೆ. ಈ ಮಾಹಿತಿ ಆಧರಿಸಿ ಅವರ ಅಭಿವೃದ್ಧಿಗೆ ಯೋಜನೆ ರೂಪಿಸಬಹುದು” ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ‘ಜಯವೋ ನಮ್ಮ ಭಾರತ, ಸಂವಿಧಾನವೇ ನಮ್ಮ ಗ್ರಂಥ’ -ದಲಿತ ಐಕ್ಯತಾ ಸಮಾವೇಶದಲ್ಲಿ ಗೊಲ್ಲಹಳ್ಳಿ ಶಿವಪ್ರಸಾದ್‌ರವರ ಹಾಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...