Homeಮುಖಪುಟಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ ಮಾಫಿಯಾದ ಆರೋಪಿಗಳು ಉಪ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಜಗದೀಶ್ ದೇವದಾ ಅವರ ಆಪ್ತರು ಎಂದು ಆರೋಪಿಸಿರುವ ಕಾಂಗ್ರೆಸ್, ದೇವದಾ ಅವರ ರಾಜೀನಾಮೆಗೆ ಆಗ್ರಹಿಸಿದೆ.

ಬಂಧಿತ ಡ್ರಗ್ ಸ್ಮಗ್ಲರ್‌ಗಳಲ್ಲಿ ಒಬ್ಬನಾಗಿರುವ ಹರೀಶ್ ಅಂಜನಾ ಜೊತೆಗಿನ ಡಿಸಿಎಂ ದೇವದಾ ಅವರ ಹಲವಾರು ಪೋಟೋಗಳನ್ನು ಪ್ರದರ್ಶಿಸಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿತು ಪಟ್ವಾರಿ, ಡ್ರಗ್ ಸ್ಮಗ್ಲರ್ ಡಿಸಿಎಂಗೆ ಆಪ್ತ, ಆದ್ದರಿಂದ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಾರದ ಆರಂಭದಲ್ಲಿ ಭೋಪಾಲ್‌ನ ಹೊರವಲಯದಲ್ಲಿ ಮೆಫೆಡ್ರೋನ್ (ಎಂಡಿ) ಡ್ರಗ್‌ನ ಬೃಹತ್ ಅಕ್ರಮ ಕಾರ್ಖಾನೆ ಪತ್ತೆಯಾಗಿತ್ತು. ಅಲ್ಲಿಂದ ಬರೋಬ್ಬರಿ 1,814 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ “ಪ್ರಧಾನಿ ನರೇಂದ್ರ ಮೋದಿ ಅಥವಾ ಅವರ ಪಕ್ಷವು ನಿಜವಾಗಿಯೂ ಮಾದಕ ವ್ಯಸನದ ವಿರುದ್ಧವಾಗಿದ್ದರೆ, ಮಧ್ಯ ಪ್ರದೇಶದ ಉಪ ಮುಖ್ಯಮಂತ್ರಿ ಜಗದೀಶ್ ದೇವದಾ ರಾಜೀನಾಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎರಡು ವರ್ಷಗಳ ಹಿಂದೆ ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ವರದಿಯ ಪ್ರಕಾರ ದೇಶದಲ್ಲಿ ಸುಮಾರು 40 ಕೋಟಿ ಜನರು ಮಾದಕ ದ್ರವ್ಯಗಳನ್ನು ಸೇವಿಸುತ್ತಿದ್ದಾರೆ. ದೇಶದಲ್ಲಿ ವಾರ್ಷಿಕವಾಗಿ 2 ಕೋಟಿ ಹೊಸ ಮಾದಕ ವ್ಯಸನಿಗಳು ಸೃಷ್ಟಿಯಾಗುತ್ತಿದ್ದಾರೆ. ಈ ಪೈಕಿ ಸುಮಾರು 50% ರಷ್ಟು ಮಂದಿ 25 ವರ್ಷ ವಯಸ್ಸಿನವರು. ಪ್ರಧಾನಿ ದೇಶದಲ್ಲಿ ವಾರ್ಷಿಕವಾಗಿ 2 ಕೋಟಿ ಉದ್ಯೋಗಗಳನ್ನು ಒದಗಿಸದಿದ್ದರೂ, ಪ್ರತಿ ವರ್ಷ 2 ಕೋಟಿ ಹೊಸ ಮಾದಕ ವ್ಯಸನಿಗಳು ಸೇರ್ಪಡೆಯಾಗುತ್ತಿದ್ದಾರೆ. ಭೋಪಾಲ್‌ನಲ್ಲಿ ಭೇದಿಸಲಾದ ಅಕ್ರಮ ಡ್ರಗ್ ಕಾರ್ಖಾನೆಯು ದೇಶದಾದ್ಯಂತ ತನ್ನ ಜಾಲವನ್ನು ಹೊಂದಿದೆ. ಅದಕ್ಕಾಗಿಯೇ ನಾವು ಈ ವಿಷಯವನ್ನು ಪ್ರಸ್ತಾಪಿಸಲು ದೆಹಲಿಗೆ ಬಂದಿದ್ದೇವೆ. ರಾಜ್ಯದ ಗೃಹ ಸಚಿವರೂ ಆಗಿರುವ ಸಿಎಂ ಮೋಹನ್ ಯಾದವ್ ಈ ವಿಚಾರದಲ್ಲಿ ಮೌನವಾಗಿದ್ದಾರೆ. ಅವರ ಇಬ್ಬರು ಉಪಮುಖ್ಯಮಂತ್ರಿಗಳ ಪೈಕಿ ಒಬ್ಬರಾದ ಜಗದೀಶ್ ದೇವದಾ ಅವರು ಬಂಧಿತ ಆರೋಪಿಗಳ ಪೈಕಿ ಒಬ್ಬನ ಜೊತೆ ಇರುವ ಫೋಟೋಗಳಿವೆ” ಎಂದಿದ್ದಾರೆ.

ಅಕ್ಟೋಬರ್ 7ರಂದು ಹರೀಶ್ ಅಂಜನಾ (ಪ್ರಕರಣದಲ್ಲಿ ಬಂಧಿತ ಮೂರನೇ ವ್ಯಕ್ತಿ) ಬಂಧನಕ್ಕೆ ಒಳಗಾದ ನಂತರ, ಡಿಸಿಎಂ ಜೊತೆಗಿನ ಹರೀಶ್ ಫೋಟೋಗಳು ವೈರಲ್ ಆಗಿದೆ. ಹಾಗಾಗಿ, ಪಟ್ವಾರಿ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಉಪ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕರ ಆರೋಪಗಳನ್ನು ತಳ್ಳಿ ಹಾಕಿರುವ ಜಗದೀಶ್ ದೇವದಾ, “ಹಲವು ಜನರು ಬಂದು ಸಾರ್ವಜನಿಕ ಮತ್ತು ರಾಜಕೀಯ ಜೀವನದಲ್ಲಿ ಇರುವ ವ್ಯಕ್ತಿಗಳೊಂದಿಗೆ ಫೋಟೋಗಳನ್ನು ತೆಗೆದುಕೊಳ್ಳುತ್ತಾರೆ. ಹಾಗೆಯೇ ಆತನೂ ನನ್ನ ಜೊತೆ ಫೋಟೊ ತೆಗೆಸಿಕೊಂಡಿರಬಹುದು. ಹಾಗಂತ, ನನಗೆ ಆತ ಆಪ್ತ ಎಂದಲ್ಲ. ಅಂತಹ ಕ್ರಿಮಿನಲ್‌ಗಳೊಂದಿಗೆ ನನಗೋ, ಬಿಜೆಪಿಗೋ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ರೈಲು ಅಪಘಾತ | ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...