Homeಮುಖಪುಟಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

ಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

- Advertisement -
- Advertisement -

ತನ್ನ ಮಗಳ ಪ್ರೇಮ ಸಂಬಂಧದಿಂದ ಅಸಮಾಧಾನಗೊಂಡಿದ್ದ ತಾಯಿಯೊಬ್ಬರು, ಮಗಳನ್ನು ಕೊಲ್ಲಲು ಬಾಡಿಗೆ ಕೊಲೆಗಾರನನ್ನು ನೇಮಿಸಿದ್ದು, ಕೊನೆಗೆ ತಾಯಿ ಆತನಿಂದಲೇ ಕೊಲೆಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿಪರ್ಯಾಸವೇನೆಂದರೆ, ತನ್ನ ಮಗಳನ್ನು ಕೊಲ್ಲಲು ತಾಯಿ ಸುಪಾರಿ ನೀಡಿದ್ದ ವ್ಯಕ್ತಿಯೆ ಮಗಳ ಪ್ರಿಯಕರನಾಗಿದ್ದ ಎಂಬುವುದು ಅವರಿಗೆ ತಿಳಿದಿರಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಮಗಳನ್ನು ಕೊಲ್ಲಲು ನೇಮಿಸಿದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 6 ರಂದು ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಜಸ್ರತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಗದ್ದೆಯಲ್ಲಿ ಅಲ್ಕಾ ಅವರ ಮೃತದೇಹ ಪತ್ತೆಯಾದಾಗ ಘಟನೆ ಬೆಳಕಿಗೆ ಬಂದಿತ್ತು. ಮಗಳನ್ನು ಕೊಲ್ಲಲು ನೇಮಿಸಿದ

ಕಳೆದ ವಾರ, ಅಕ್ಟೋಬರ್ 5 ರಂದು, ಅಲ್ಕಾ ದೇವಿ ಅವರು ತಮ್ಮ ಮಗಳ ಪ್ರೇಮ ಪ್ರಕರಣದ ವಿಚಾರದ ಬಗ್ಗೆ ಮಾತನಾಡಲು ಇಟಾಹ್‌ಗೆ ಹೋಗಿದ್ದರು. ಸಂಜೆಯವರೆಗೂ ಅವರು ವಾಪಸ್ ಬಾರದೆ ಇದ್ದಾಗ, ಅವರ ಪತಿ ರಮಾಕಾಂತ್ ಅವರು ಅಲ್ಕಾ ಅವರ ಮೊಬೈಲ್‌ಗೆ ಕರೆ ಮಾಡಿದ್ದರು. ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಎಷ್ಟು ಹುಡುಕಿದರೂ ಸಿಗದಿದ್ದಾಗ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಭಾನುವಾರ ಸಂಜೆಯ ನಂತರ ಮೃತ ದೇಹವೊಂದನ್ನು ಗುರುತಿಸಲು ಪೊಲೀಸರು ಕರೆಸಿದ್ದು, ಅಲ್ಲಿ ಅವರು ತನ್ನ ಪತ್ನಿ ಅಲ್ಕಾ ಅವರ ಮೃತದೇಹವನ್ನು ಗುರುತಿಸಿದ್ದರು. ನಂತರ, ಅಲ್ಕಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

ಪತ್ನಿಯ ಸಾವಿನ ಬಗ್ಗೆ ರಮಾಕಾಂತ್ ತನ್ನ ಗ್ರಾಮದ ಅಖಿಲೇಶ್ ಮತ್ತು ಅನಿಕೇತ್ ಎಂಬ ಇಬ್ಬರ ವಿರುದ್ಧ ಜಸ್ರತ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಇಬ್ಬರು ಹಿಂದೆ ಅವರ ಅಪ್ತಾಪ್ತ ಮಗಳನ್ನು ಆಮಿಷವೊಡ್ಡಿ ಅಪಹರಿಸಿದ್ದರು ಎಂಬ ಆರೋಪವಿತ್ತು. ಹಾಗಾಗಿ ಪೊಲೀಸರು ಅಖಿಲೇಶ್ ಅವರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಕುಟುಂಬಕ್ಕೆ ವರ್ಗಾಯಿಸಲಾಗಿತ್ತು.

ಮೇಲಿನ ಘಟನೆಯ ನಂತರ ಹೆದರಿದ್ದ ಅಲ್ಕಾ ದೇವಿ ಅವರು ತನ್ನ ಮಗಳನ್ನು ಫರೂಕಾಬಾದ್ ಜಿಲ್ಲೆಯ ಸಿಕಂದರಪುರ ಖಾಸ್ ಗ್ರಾಮದಲ್ಲಿರುವ ತನ್ನ ತಾಯಿಯ ಮನೆಗೆ ಕಳುಹಿಸಿದ್ದರು. ಇಲ್ಲಿ ಬಾಲಕಿ 38 ವರ್ಷದ ಸುಭಾಷ್ ಜೊತೆ ಸಂಬಂಧ ಬೆಳೆಸಿದ್ದರು. ಸುಭಾಷ್‌ ಈ ಹಿಂದೆ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಅಪರಾಧಿಯಾಗಿದ್ದ. ಈತ ಬಾಲಕಿಗೆ ಮಾತನಾಡಲು ಮೊಬೈಲ್ ಫೋನ್ ಖರೀದಿಸಿಕೊಟ್ಟಿದ್ದ.

ಇದನ್ನೂ ಓದಿ: ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ಆದರೆ ಇದನ್ನು ಅರಿಯದ ಅಲ್ಕಾ ಮಗಳ ಪ್ರೇಮ ಪ್ರಕರಣದಿಂದ ಬೇಸತ್ತು ಬೇಸರಗೊಂಡಿದ್ದರು. ಹೀಗಾಗಿ ಮಗಳನ್ನು ಕೊಲ್ಲಲು ನಿರ್ಧರಿಸಿ, ಕೊಲೆ ಮಾಡಲು ಸುಭಾಷ್‌ಗೆ ₹ 50,000 ನೀಡಿದ್ದಾರೆ. ಆದರೆ, ತನ್ನ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ವ್ಯಕ್ತಿ ಸುಭಾಷ್ ಎಂಬುವುದು ತಾಯಿಗೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ.

ತಾಯಿಯ ಯೋಜನೆಯನ್ನು ಸುಭಾಷ್ ಹುಡುಗಿಗೆ ಬಹಿರಂಗಪಡಿಸಿದ್ದು, ಈ ವೇಳೆ ಚುರುಕಾದ ಹುಡುಗಿ ತನ್ನ ತಾಯಿಯನ್ನು ಕೊಂದರೆ ಮದುವೆಯಾಗುವುದಾಗಿ ಹೇಳಿದ್ದಾರೆ. ನಂತರ ಒಟ್ಟಾಗಿ, ಮೂಲಕ ತಂತ್ರ ರೂಪಿಸಿ, ಕೊಲೆ ನಡೆಸಿದ ಹಾಗೆ ನಟಿಸಿ ಅಲ್ಕಾ ದೇವಿಯನ್ನು ಮೂರ್ಖರನ್ನಾಗಿಸಿದ್ದರು.

ಆದರೆ ಅಲ್ಕಾ ದೇವಿ ಭರವಸೆ ನೀಡಿದ ₹50,000 ಪಾವತಿಸದಿದ್ದಾಗ, ಸುಭಾಷ್ ಅವರನ್ನು ಆಗ್ರಾಕ್ಕೆ ಕರೆದು ಅವರ ಮಗಳ ಜೊತೆಗೆ ಭೇಟಿ ಮಾಡಿಸಿದ್ದಾರೆ. ಮೂವರು ಆಗ್ರಾದಿಂದ ಇಟಾಹ್‌ಗೆ ಪ್ರಯಾಣಿಸಿ ರಾಮಲೀಲಾ ಜಾತ್ರೆಗೆ ಹೋಗಿದ್ದಾರೆ. ಅಲ್ಲಿಂದ ಅಲಿಗಂಜ್‌ಗಿಂತ ಮೊದಲು ಇಳಿದು ಅಲ್ಕಾ ಅವರನ್ನು ನಾಗ್ಲಾ ಚಂದನ್‌ಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಗಳು ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?: ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಸ್ಥಳೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...