Homeಚಳವಳಿಮಾನವಹಕ್ಕುಗಳ ಹೋರಾಟಗಾರ ಪ್ರೊ. ಜಿ.ಎನ್. ಸಾಯಿಬಾಬಾ ನಿಧನ

ಮಾನವಹಕ್ಕುಗಳ ಹೋರಾಟಗಾರ ಪ್ರೊ. ಜಿ.ಎನ್. ಸಾಯಿಬಾಬಾ ನಿಧನ

- Advertisement -
- Advertisement -

ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ, ಮಾನವಹಕ್ಕುಗಳ ಹೋರಾಟಗಾರ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರು ಹೈದರಾಬಾದ್‌ನ ನಿಜಾಮ್‌ ವೈದ್ಯಕೀಯ ವಿಜ್ಞಾನ ಆಸ್ಪತ್ರೆ(ನಿಮ್ಸ್‌)ಯಲ್ಲಿ ಶನಿವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಹೃದಯ ಸ್ತಂಭನಕ್ಕೆ ಒಳಗಾಗಿದ್ದ ಅವರು ರಾತ್ರಿ 8.30 ಕ್ಕೆ ನಿಧನರಾದರು ಎಂದು ಆಪ್ತರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

57 ವರ್ಷದ ಸಾಯಿಬಾಬಾ ಅವರು ಅನಾರೋಗ್ಯದ ಕಾರಣ 10 ದಿನಗಳ ಹಿಂದೆ ನಿಮ್ಸ್‌ಗೆ ದಾಖಲಾಗಿದ್ದರು. ಪಿತ್ತಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಭೀಮಾ ಕೊರೆಗಾವ್ ಪ್ರಕರಣದಲ್ಲಿ ಮಾವೋವಾದಿಗಳೊಂದಿಗೆ ನಂಟಿದೆ ಎಂದು ಆರೋಪಿಸಿ ಬಂಧನಕ್ಕೆ ಒಳಗಾಗಿದ್ದ ಅವರನ್ನು ಏಳು ತಿಂಗಳ ಹಿಂದೆ ಪ್ರಕರಣದಿಂದ ಖುಲಾಸೆ ಮಾಡಲಾಗಿತ್ತು.

ವಿಕಲಚೇತನರಾಗಿದ್ದ ಮತ್ತು ಗಾಲಿಕುರ್ಚಿಯನ್ನು ಬಳಸುತ್ತಿದ್ದ ಸಾಯಿಬಾಬಾ ಅವರನ್ನು 2014ರ ಮೇ ತಿಂಗಳಲ್ಲಿ ಮೊದಲ ಬಾರಿಗೆ ಬಂಧಿಸಲಾಗಿತ್ತು. ಈ ಪ್ರಕಣದಲ್ಲಿ ಅವರ ಮೇಲೆ ಮಾವೋವಾದಿ ಸಂಪರ್ಕದ ಆರೋಪ ಹೊರಿಸಲಾಗಿತ್ತು. ಪ್ರಕರಣದಲ್ಲಿ ಅವರು ಏಳು ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದರು. ಜೈಲಿನಲ್ಲಿ ಅವರಿಗೆ ವೈದ್ಯಕೀಯ ಸೇವೆಯನ್ನು ನಿರಾಕರಿಸಲಾಗಿತ್ತು.

ಇದನ್ನೂಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅವರು, ತನ್ನನ್ನು ಮೊದಲಿಗೆ ಅಪಹರಿಸಲಾಯಿತು ನಂತರ ಬಂಧಿಸಲಾಗಿತ್ತು ಎಂದು ಹೇಳಿದ್ದಾರೆ. ಈ ವೇಳೆ ಪೊಲೀಸರು ತನ್ನನ್ನು ತಪ್ಪಾಗಿ ನಿರ್ವಹಿಸಿದ್ದರಿಂದ ನರಮಂಡಲಕ್ಕೆ ಹಾನಿಯಾಗಿತ್ತು ಮತ್ತು ಜೈಲಿನಲ್ಲಿದ್ದ ವೇಳೆ ಹೃದಯದ ಸಮಸ್ಯೆ ಪ್ರಾರಂಭವಾಗಿತ್ತು ಎಂದು ಹೇಳಿದ್ದಾರೆ. ಜೈಲಿನಲ್ಲಿ ದೀರ್ಘಕಾಲದವರೆಗೆ ಆಹಾರ ಸೇವಿಸದ ಕಾರಣ ಪಿತ್ತಕೋಶದಲ್ಲಿ ಕಲ್ಲುಗಳು ಕಾಣಿಸಿಕೊಂಡಿತ್ತು ಎಂದು ಅವರು ಹೇಳಿದ್ದರು.

ಸಾಯಿಬಾಬಾ ಅವರನ್ನು ಮಾರ್ಚ್ 7, 2017 ರಂದು ಸೆಷನ್ಸ್ ನ್ಯಾಯಾಲಯವು ತಪ್ಪಿತಸ್ಥ ಎಂದು ಘೋಷಿಸಿದಾಗಿನಿಂದ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಈ ವರ್ಷದ ಮಾರ್ಚ್‌ನಲ್ಲಿ ಬಾಂಬೆ ಹೈಕೋರ್ಟ್ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿತು. ನಂತರ ಅವರನ್ನು ಮಾರ್ಚ್ 7 ರಂದು ನಾಗ್ಪುರ ಜೈಲಿನಿಂದ ಬಿಡುಗಡೆ ಮಾಡಲಾಯಿತು.

ಮಾನವಹಕ್ಕುಗಳ ಹೋರಾಟಗಾರ ಆಗಿದ್ದ ಸಾಯಿಬಾಬಾ ಅವರು ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಶಂಕಿತ ಮಾವೋವಾದಿ ಸಂಪರ್ಕಕ್ಕಾಗಿ ಮಹಾರಾಷ್ಟ್ರ ಪೊಲೀಸರು ಅವರನ್ನು ಬಂಧಿಸಿದ ನಂತರ 2014 ರಲ್ಲಿ ಅಮಾನತುಗೊಳಿಸಲಾಗಿತ್ತು.

ವಿಡಿಯೊ ನೋಡಿ: ‘ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಇರುವುದರಿಂದ ಯಾವುದೇ ಉಪಯೋಗವಿಲ್ಲ’ : ವೀರಸಂಗಯ್ಯ, ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...