HomeUncategorized20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

- Advertisement -
- Advertisement -

ಕಳೆದ 20 ವರ್ಷಗಳಲ್ಲಿ ರಾಜ್ಯದ ವಿವಿಧ ಯೋಜನೆಗಳಿಗಾಗಿ ಅರಣ್ಯ ಇಲಾಖೆಯು ತನ್ನ ಅಡಿಯಲ್ಲಿ ಇದ್ದ ಸುಮಾರು 20,805.72 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗಾಗಿ ನೀಡಿದೆ ಎಂದು ವರದಿಯೊಂದು ಹೇಳಿದೆ. ಇದರಲ್ಲಿ ಗಣಿ, ನೀರಾವರಿ ಹಾಗೂ ಮೊಬೈಲ್ ಟವರ್ ಸ್ಥಾಪನೆಯ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. 20 ವರ್ಷಗಳಲ್ಲಿ ಬೇರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2004-05 ರಿಂದ 2023-24 ರವರೆಗೆ ಅರಣ್ಯ ಸಂರಕ್ಷಣಾ ಕಾಯ್ದೆ (1980) ಅಡಿಯಲ್ಲಿ ಅರಣ್ಯೇತರ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಿದ ಮಾಹಿತಿಯ ಪ್ರಕಾರ, ವಿವಿಧ ಯೋಜನೆಗಳಿಗೆ ಭೂಮಿಗೆ ಮಂಜೂರಾತಿ ಕೋರಿ 534 ಪ್ರಸ್ತಾವನೆಗಳನ್ನು ಇಲಾಖೆಗೆ ಸಲ್ಲಿಸಲಾಗಿದೆ. ಗಣಿಗಾರಿಕೆ ಮತ್ತು ನೀರಾವರಿ ಸೇರಿದಂತೆ ಪ್ರಮುಖ ಯೋಜನೆಗಳಿಗೆ ದೊಡ್ಡ ಮತ್ತು ಸಣ್ಣ ಜಮೀನುಗಳನ್ನು ನೀಡಲಾಯಿತು ಎಂದು ವರದಿ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಶಿವಮೊಗ್ಗದಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ 449.55 ಹೆಕ್ಟೇರ್, ಬಳ್ಳಾರಿಯಲ್ಲಿ ಗಣಿಗಾರಿಕೆಗೆ 335.04ಹೆಕ್ಟೇರ್ ಮತ್ತು 232.76ಹೆಕ್ಟೇರ್, ಬೆಳಗಾವಿಯಲ್ಲಿ ಪವನ ವಿದ್ಯುತ್ ಉತ್ಪಾದನೆಗೆ 215.55ಹೆಕ್ಟೇರ್, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 0.78ಹೆಕ್ಟೇರ್ ರಸ್ತೆ ಯೋಜನೆಗಳಿಗೆ ಮತ್ತು 0.4ಹೆಕ್ಟೇರ್ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಅರಣ್ಯ ಭೂಮಿಯನ್ನು ನೀಡಿಲಾಗಿದೆ.

ಸೆಲ್ ಫೋನ್ ನೆಟ್‌ವರ್ಕ್ ಟವರ್‌ಗಳನ್ನು ಸ್ಥಾಪಿಸಲು ಕೂಡಾ ರಾಜ್ಯ ಸರ್ಕಾರ ಅರಣ್ಯ ಭೂಮಿಯನ್ನು ನೀಡಿದೆ. ಕಳೆದ ಒಂದು ವರ್ಷದಲ್ಲಿ, ಕೇಂದ್ರ ಸರ್ಕಾರದ ಇಂಟರ್ನೆಟ್ ಮತ್ತು ಮೊಬೈಲ್ ಸಂಪರ್ಕವನ್ನು ಹೆಚ್ಚಿಸುವ ಯೋಜನೆಯಡಿ 256 BSNL ಟವರ್‌ಗಳನ್ನು ಸ್ಥಾಪಿಸಲು ಭೂಮಿಯನ್ನು ನೀಡಲಾಗಿದೆ. ಅವುಗಳಲ್ಲಿ ಹೆಚ್ಚಿನವು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಪಶ್ಚಿಮ ಘಟ್ಟಗಳ ಇತರ ಸ್ಥಳಗಳಲ್ಲಿ ನೀಡಲಾಗಿದೆ.

ಎತ್ತಿನಹೊಳೆ ಯೋಜನೆಗೆ ಸುಮಾರು 500 ಎಕರೆ ಮತ್ತು ಕಳಸಾ-ಬಂಡೂರಿ ಯೋಜನೆಗಳಿಗೆ 50 ಹೆಕ್ಟೇರ್ ಭೂಮಿಯನ್ನು ನೀಡುವ ಬಗ್ಗೆ ಪಟ್ಟಿಯಲ್ಲಿ ಇದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಸ್ತೆ ಮತ್ತು ಕುಡಿಯುವ ನೀರಿನ ಯೋಜನೆಗಳು ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಕೂಡಾ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗೆ ನಿಷೇಧ | ಇಸ್ರೇಲ್ ನಿರ್ಧಾರಕ್ಕೆ ಜಾಗತಿಕ ಖಂಡನೆ; ಹೊರಗುಳಿದ ಭಾರತ!

ನಿಯಮಗಳ ಪ್ರಕಾರ, 2023 ರಲ್ಲಿ ತಿದ್ದುಪಡಿಯಾದ ಅರಣ್ಯ ಸಂರಕ್ಷಣಾ ಕಾಯಿದೆ, 1980 ರ ಅಡಿಯಲ್ಲಿ ಭೂಮಿಯನ್ನು ನೀಡಲಾಗಿದೆ. ಅರಣ್ಯೇತರ ಉದ್ದೇಶಗಳಿಗೆ ಅರಣ್ಯ ಭೂಮಿ ಅಗತ್ಯವಿದ್ದರೆ, ಪ್ರತಿ ಹೆಕ್ಟೇರ್‌ಗೆ ಸಮಾನ ಆಯಾಮದ ಭೂಮಿಯನ್ನು ಅರಣ್ಯೀಕರಣಕ್ಕಾಗಿ ಇಲಾಖೆಗೆ ಹಸ್ತಾಂತರಿಸಬೇಕಾಗಿದೆ. ಜೊತೆಗೆ ಅರಣ್ಯೀಕರಣಕ್ಕೆ ಪರಿಹಾರ ನೀಡಬೇಕಿದೆ.

ಅಷ್ಟೆ ಅಲ್ಲದೆ, ಅರ್ಜಿದಾರರು ಮರಗಳನ್ನು ಕಡಿಯುವ ವೆಚ್ಚವನ್ನು ಸಹ ಭರಿಸಬೇಕು ಮತ್ತು ಅವುಗಳ ಪ್ರಸ್ತುತ ಮೌಲ್ಯವನ್ನು ಪಾವತಿಸಬೇಕು ಎಂದು ನಿಯಮ ಹೇಳುತ್ತದೆ. ವನ್ಯಜೀವಿಗಳ ಉಪಶಮನಕ್ಕಾಗಿ ಯೋಜನಾ ವೆಚ್ಚದ 2% ಮತ್ತು ಮಣ್ಣು ತಗ್ಗಿಸುವ ಕ್ರಮಗಳಿಗಾಗಿ 0.5% ಕೂಡಾ ಪಾವತಿಸಬೇಕು ಎಂದು ಅಧಿಕಾರಿ ಹೇಳಿದ್ದಾರೆ.

ಅರಣ್ಯದ ಬಳಿ ಪರಿಹಾರವಾಗಿ ಭೂಮಿ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆದರೆ ಹಲವು ಪ್ರಕರಣಗಳಲ್ಲಿ ಅರಣ್ಯದಿಂದ ದೂರವಿರುವ ಸ್ಥಳಗಳಲ್ಲಿ ಭೂಮಿ ನೀಡಲಾಗಿದೆ. ಇಲಾಖೆಗೆ ನೀಡಿರುವ ಕೆಲವು ಜಮೀನುಗಳು ವ್ಯಾಜ್ಯ ಅಥವಾ ಅತಿಕ್ರಮಣಕ್ಕೆ ಒಳಗಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಡಿಯೊ ನೋಡಿ: ತನ್ನ ತಂಗಿಗೆ ಕಿರುಕುಳ ಕೊಡುತ್ತಿದ್ದ ಆರೋಪ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...