Homeಮುಖಪುಟಬಾಬಾ ಸಿದ್ದಿಕ್ ಹತ್ಯೆ | ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೈವಾಡ ಖಚಿತಪಡಿಸಿದ ಪೊಲೀಸರು

ಬಾಬಾ ಸಿದ್ದಿಕ್ ಹತ್ಯೆ | ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೈವಾಡ ಖಚಿತಪಡಿಸಿದ ಪೊಲೀಸರು

- Advertisement -
- Advertisement -

ಶನಿವಾರ ತಡರಾತ್ರಿ ಗುಂಡಿಗೆ ಬಲಿಯಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಬಾಬಾ ಸಿದ್ದಿಕ್ ಅವರ ಅಂತ್ಯಕ್ರಿಯೆಯನ್ನು ಭಾನುವಾರ ರಾತ್ರಿ ಸರ್ಕಾರಿ ರೀತಿಯಲ್ಲಿ ನಡೆಸಲಾಗುತ್ತದೆ. 2004 ರಿಂದ 2008 ರವರೆಗೆ ಮಹಾರಾಷ್ಟ್ರ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಈ ಆದೇಶ ನೀಡಿದ್ದಾರೆ. ಬಾಬಾ ಸಿದ್ದಿಕ್ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ನಡುವೆ ಮುಂಬೈ ಪೊಲೀಸರು ಸಿದ್ದಿಕ್ ಹತ್ಯೆಯಲ್ಲಿ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಭಾಗಿಯಾಗಿರುವುದನ್ನು ಖಚಿತಪಡಿಸಿದ್ದಾರೆ. ವೈ ಮಟ್ಟದ ಭದ್ರತೆಯ ಹೊರತಾಗಿಯೂ, ನವೆಂಬರ್‌ನಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಗೆ ಮುನ್ನ ಅವರನ್ನು ಗುಂಡಿಕ್ಕಿ ಕೊಳ್ಳಲಾಗಿದೆ. ಬಾಬಾ ಸಿದ್ದಿಕ್ ಹತ್ಯೆ

ಆರೋಪಿಗಳಾದ ಗುರ್ಮೈಲ್ ಸಿಂಗ್ ಮತ್ತು ಧರ್ಮರಾಜ್ ಅವರನ್ನು ಮುಂಬೈನ ಕಿಲ್ಲಾ ನ್ಯಾಯಾಲಯಕ್ಕೆ ಪೊಲೀಸರು ಇಂದು ಹಾಜರುಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.

ರಾಜ್ಯದಲ್ಲಿ “ಬೆಳೆಯುತ್ತಿರುವ ಅಪರಾಧ ಚಟುವಟಿಕೆಗಳಿಗೆ” ಶಿಂಧೆ ನೇತೃತ್ವದ ಸರ್ಕಾರವೆ ಹೊಣೆ ಎಂದು ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಾದ್ಯಂತ ನಾಯಕರು ಆರೋಪಿಸಿದ್ದಾರೆ. ಶರದ್ ಪವಾರ್ ಸೇರಿದಂತೆ ಹಲವು ನಾಯಕರು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವಿಸ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಯುಪಿ ಉಪಚುನಾವಣೆ | ಎಸ್‌ಪಿ ಅಭ್ಯರ್ಥಿಗಳನ್ನು ಹೆಸರಿಸಿದ ನಂತರ ಕೂಡಾ ಕಾಂಗ್ರೆಸ್‌ನಲ್ಲಿ ‘ಮೈತ್ರಿ ಭರವಸೆ’!

ಮುಂಬೈ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಗುರುತಿಸಿ ಬಂಧಿಸಿದ್ದಾರೆ. ಒಬ್ಬ ಆರೋಪಿ ಹರಿಯಾಣವರಾಗಿದ್ದು, ಮತ್ತೊಬ್ಬರು ಉತ್ತರ ಪ್ರದೇಶದವರು. ಮೂರನೇ ವ್ಯಕ್ತಿ ತಲೆಮರೆಸಿಕೊಂಡಿದ್ದು, ಪ್ರಕರಣವನ್ನು ಮುಂಬೈ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.

ಸಿದ್ದಿಕ್ ಬಾಂದ್ರಾ ಪೂರ್ವದಲ್ಲಿರುವ ತಮ್ಮ ಪುತ್ರ, ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯಿಂದ ಹೊರಟು ತಮ್ಮ ಕಾರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ದುಷ್ಕರ್ಮಿಗಳು ಅವರ ಮೇಲೆ ಆರರಿಂದ ಏಳು ಸುತ್ತು ಗುಂಡು ಹಾರಿಸಿದ್ದಾರೆ. ಅದರಲ್ಲಿ ಎರಡು ಗುಂಡುಗಳು ಅವರ ಎದೆಗೆ ಹೊಕ್ಕಿದ್ದು, ಒಂದು ಗುಂಡು ಅವರ ಹೊಟ್ಟೆಗೆ ತಗುಲಿದೆ.

ದಾಳಿಯಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅದರೆ ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಸಿದ್ದಿಕ್ ಅವರು ಮೂರು ಬಾರಿ ಕಾಂಗ್ರೆಸ್‌ನಿಂದ 1999 ರಿಂದ 2014 ರವರೆಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರು ಬಾಂದ್ರಾ ಪಶ್ಚಿಮ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ವಿಡಿಯೊ ನೋಡಿ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?: ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಸ್ಥಳೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...