Homeಫ್ಯಾಕ್ಟ್‌ಚೆಕ್FACT CHECK : ಶಾಲಾ ಮಕ್ಕಳು ಕೇಬಲ್ ಕಾರ್ ಬಳಸಿ ನದಿ ದಾಟುವ ವಿಡಿಯೋ ಭಾರತದ್ದಲ್ಲ

FACT CHECK : ಶಾಲಾ ಮಕ್ಕಳು ಕೇಬಲ್ ಕಾರ್ ಬಳಸಿ ನದಿ ದಾಟುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ, ಅನಿರೀಕ್ಷಿತ ಪ್ರವಾಹಗಳು ಸಂಭವಿಸಿವೆ. ಅನೇಕ ಜನರು ತಮ್ಮ  ಗ್ರಾಮ ಮತ್ತು ಮನೆಗಳನ್ನು ತೊರೆದು ಕಾಳಜಿ ಕೇಂದ್ರವನ್ನು ಆಶ್ರಯಿಸಿದ್ದಾರೆ. ಇತ್ತ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಶಾಲಾ ಸಮವಸ್ತ್ರ ಧರಿಸಿ ಮಕ್ಕಳು ತಮ್ಮ ಜೀವವನ್ನು ಲೆಕ್ಕಿಸದೆ ಕೇಬಲ್ ಸಹಾಯದಿಂದ ನದಿ ದಾಟುತ್ತಿರುವುದನ್ನು ಕಾಣಬಹುದು.

 

ತಮ್ಮ ಜೀವವನ್ನು ಲೆಕ್ಕಿಸದೆ ಪುಲ್ಲಿ ಕೇಬಲ್ ಬಳಸಿ ನದಿ ದಾಟುತ್ತಿರುವ ವಿಡಿಯೋ ವೈರಲ್ ಆಗಿದೆ. ಮಕ್ಕಳು ಕೇಬಲ್ ದಾಟುತ್ತಿರುವಾಗ ಕೆಳಗೆ ನದಿಯು ರಭಸವಾಗಿ ಹರಿಯುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ‘‘ಸರ್ಕಾರ ಧಾರ್ಮಿಕ ಯಾತ್ರೆಗಳತ್ತ ಗಮನ ಹರಿಸುವುದನ್ನು ಬಿಟ್ಟು. ಈ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ರಸ್ತೆ, ಮೂಲ ಸೌಕರ್ಯಗಳನ್ನು ಕಲ್ಪಿಸಲು  ಪ್ರಯತ್ನ ಪಡಬೇಕು ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೊಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್‌ಆದ  ವಿಡಿಯೋ ಭಾರತ ದೇಶಕ್ಕೆ ಸಂಬಂಧಿಸಿದ್ದಲ್ಲ, ಈ  ವಿಡಿಯೋ ನೇಪಾಳದ್ದು ಎಂಬ ಮಾಹಿತಿ ಲಭ್ಯವಾಗಿದೆ.

 

ಇನ್‌ಸ್ಟಾಗ್ರಾಮ್‌ ಖಾತೆದಾರರು ತಮ್ಮ ಖಾತೆಯಲ್ಲಿ “The Daily struggle of Nepal Students” ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್‌ ನಲ್ಲಿ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ.

ಫ್ರೀ ಡಾಕ್ಯುಮೆಂಟರಿ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “most Dangerous ways of School I Nepal I Free Documentary” ಎಂಬ ಶೀರ್ಷಿಕೆಯೊಂದಿಗಿರುವ ವಿಡಿಯೋವೊಂದು ಲಭ್ಯವಾಗಿದ್ದು, ಇದು ನೇಪಾಳದ ಶಾಲಾ ವಿದ್ಯಾರ್ಥಿಗಳು ಎದುರಿಸುತ್ತಿರುವ ಕಷ್ಟ ಎಂದು ವಿಡಿಯೋವಿನಲ್ಲಿ ಹೇಳಲಾಗಿದೆ. ವಿಡಿಯೋಗೆ ನೀಡಿರುವ ಡಿಸ್ಕ್ರಿಪ್ಷನ್‌ನಲ್ಲಿ ಕುಂಪೂರದ ಪರ್ವತ ಗ್ರಾಮದಲ್ಲಿರುವ ಶಾಲಾ ಮಕ್ಕಳು ಶಾಲೆಗೆ ಹೋಗಲು ವಿದ್ಯಾರ್ಥಿಗಳು ಬೆಟ್ಟ ಗುಡ್ಡಗಳನ್ನು ದಾಟಿ ನಡೆದುಕೊಂಡು ಹೋಗಬೇಕು ಎಂದಿದೆ.

ಮಕ್ಕಳ ಕುಟುಂಬದವರು ಪ್ರತಿ ನಿತ್ಯ ಭಯದಿಂದಲೇ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ತಮ್ಮ ಮಕ್ಕಳನ್ನು ಒಂದು ದಿನ ಬಿಟ್ಟು ಮತ್ತೊಂದು ದಿನ ಶಾಲೆಗೆ ಕಳುಹಿಸುತ್ತಾರೆ ಎಂದು ಬರೆಯಲಾಗಿದೆ. ನಾವು IMDb ಪೇಜ್‌ನಲ್ಲೂ ಈ ಸುದ್ದಿಗೆ ಸಂಬಂಧಿಸಿದ ವಿಡಯೋವೊಂದು ಕಂಡುಕೊಂಡಿದ್ದು,ಈ ವಿಡಿಯೋವಿಗೆ “The Most Dangerous Ways to School” ಎಂಬ ಸಾಕ್ಷ್ಯಚಿತ್ರ ಸರಣಿಯಲ್ಲಿರುವ ಒಂದು ಸಂಚಿಕೆಯಲ್ಲಿ ಈ ಸುದ್ದಿಯ ಕುರಿತು ನೋಡಬಹುದು. ಮೇ 2024ರಲ್ಲಿ ಕೇರಳದ ಶಾಲಾ ವಿದ್ಯಾರ್ಥಿಗಳ ದುಸ್ಥಿತಿಯಿದು ಎಂದು ವೈರಲ್‌ ಆದ ಸುದ್ದಿಯನ್ನು ಹಲವಾರು ಫ್ಯಾಕ್ಟ್‌ಚೆಕ್‌ ಸಂಸ್ಥೆಗಳು ವೈರಲ್‌ ಸುದ್ದಿ ನಿಜವಲ್ಲ ಎಂದು ವರದಿ ಮಾಡಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ನೇಪಾಳದ ಶಾಲಾ ವಿದ್ಯಾರ್ಥಿಗಳು ಕೇಬಲ್ ಕಾರ್ ಸೇತುವೆಯನ್ನು ಬಳಸಿ ನದಿ ದಾಟುತ್ತಿರುವ ದೃಶ್ಯವನ್ನು ಭಾರತದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಇಂಗ್ಲೆಂಡ್ ಪೊಲೀಸರು ಮುಸ್ಲಿಮರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...