Homeಫ್ಯಾಕ್ಟ್‌ಚೆಕ್FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಶಾಲಾ ವಿದ್ಯಾರ್ಥಿಗಳ ಅಸಹಜ ವರ್ತನೆಯನ್ನು ಪ್ರದರ್ಶಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಅಸಹಜವಾಗಿ ವರ್ತಿಸುತ್ತಿರುವ ವಿದ್ಯಾರ್ಥಿಗಳನ್ನು ಕಂಡ ಶಾಲಾ ಸಿಬ್ಬಂದಿ ಮತ್ತು ಇತರ ವಿದ್ಯಾರ್ಥಿಗಳು ಭಯಭೀತರಾಗಿದ್ದು, ನೆಲದಲ್ಲಿ ಬಿದ್ದು ಒದ್ದಾಡುತ್ತಾ, ಕೂಗುತ್ತಾ ಅಸಹಜವಾಗಿ ವರ್ತಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ಒಂದು ಕಾಲದಲ್ಲಿ ಈ ಶಾಲೆಯನ್ನು ಕೋವಿಡ್-19 ಶವಗಳ ಶೇಖರಣಾ ಸ್ಥಳವಾಗಿ ಬಳಸಲಾಗುತ್ತಿತ್ತು ಮತ್ತು ಶಾಲೆಯ ಸಮೀಪದಲ್ಲಿ ಸ್ಮಶಾನವಿದೆ ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶದ ಶಾಲೆಯೊಂದರಲ್ಲಿ  ಶಾಲಾ ಮಕ್ಕಳು ಅಸಹಜವಾಗಿ ವರ್ತಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. COVID-19 ರ ಸಂದರ್ಭದಲ್ಲಿ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿದ್ದು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಅದರ ಕೆಲವು ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಜೂನ್ 2024 ರಂದು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ವಿಡಿಯೋಗಳು ಲಭ್ಯವಾಗಿದ್ದು,  ವೈರಲ್  ದೃಶ್ಯಗಲೊಂದಿಗೆ ಹೋಲಿಕೆಯಾಗಿದೆ. (ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು)  ಈ ಪೋಸ್ಟ್‌ಗಳ ಪ್ರಕಾರ, ಬೈತಾಡಿಯ ಸಿಗಾಸ್‌ನಲ್ಲಿರುವ ಭುವನೇಶ್ವರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮೇಲಿನ ಸುಳಿವನ್ನು ಆಧಾರವಾಗಿಟ್ಟುಕೊಂಡು ಕೀವರ್ಡ್ ವರ್ಡ್ ಸರ್ಚ್ ಮಾಡಿದಾಗ,  ವೈರಲ್ ವಿಡಿಯೋದಲ್ಲಿರುವ ದೃಶ್ಯಗಳನ್ನು ಒಳಗೊಂಡ ಸುದ್ದಿ ವರದಿಗಳು ಲಭ್ಯವಾಗಿದೆ.

ನೇಪಾಳದ ಈ ಸುದ್ದಿ ವರದಿಗಳ ಪ್ರಕಾರ, ಈ ಘಟನೆಯು ನೇಪಾಳದ ಬೈತಾಡಿ, ಸಿಗಾಸ್ ಗ್ರಾಮೀಣ ಪುರಸಭೆ -5 ರ ಭುವನೇಶ್ವರಿ ಶಾಲೆಯಲ್ಲಿ ನಡೆದಿದೆ. ಈ ಘಟನೆ ಸಂಭವಿಸಿದಾಗ ವಿದ್ಯಾರ್ಥಿಗಳು ಸಾಮೂಹಿಕ ಹಿಸ್ಟೀರಿಯಾ ಅಥವಾ ಅಸ್ವಸ್ಥತೆಯನ್ನು ಅನುಭವಿಸುತ್ತಿದ್ದರು ಎಂದು ವರದಿಯಾಗಿದೆ.

ಮಾಸ್‌ ಹಿಸ್ಟೀರಿಯಾ (ಇಲ್ಲಿ ಮತ್ತು ಇಲ್ಲಿ) ಒಂದು ಮಾನಸಿಕ ಸಾಮಾಜಿಕ ಆರೋಗ್ಯ ಸಮಸ್ಯೆಯಾಗಿದ್ದು, ಇದರಲ್ಲಿ ಜನರ ಗುಂಪು ‘ಅಸಹಜ ಮತ್ತು ಅಸಾಧಾರಣ ನಡವಳಿಕೆಗಳು, ಆಲೋಚನೆಗಳು ಮತ್ತು ಭಾವನೆಗಳು ಅಥವಾ ಆರೋಗ್ಯ ಲಕ್ಷಣಗಳ’  ಅನುಭವವನ್ನು ಹೊಂದಿದೆ.

ಭುವನೇಶ್ವರಿ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇಂತಹ ಸಮಸ್ಯೆ ಹೆಣ್ಣುಮಕ್ಕಳಲ್ಲಿ ಬಹಳ ದಿನಗಳಿಂದ (ಇದನ್ನು ಓದಿ) ಕಂಡುಬಬರುತ್ತಿದ್ದು, ಅವರ ಓದಿನ ಮೇಲೆ ಪರಿಣಾಮ ಬೀರಿದೆ. ಕೆಲವು ಹುಡುಗಿಯರು ಹಠಾತ್ತಾಗಿ ನೆಲದ ಮೇಲೆ ಬಿದ್ದು ಹೊರಳಾಡುವುದು, ಕಿರುಚಾಡುವುದು, ಇತ್ಯಾದಿ ಲಕ್ಷಣಗಳನ್ನು ತೋರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಹದಿಹರೆಯದ ಹುಡುಗಿಯರಲ್ಲಿ ಇಂತಹ ವರ್ತನೆಗಳು ಕಂಡುಬರುತ್ತಿರುವುದರಿಂದ ಶಾಲೆಯ ಪರಿಸರದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಆಶಾ ವ್ಯಾಪ್ತಿಯಲ್ಲಿ ಸ್ಮಶಾನ ಅಥವಾ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿ ಎಂಬುದನ್ನು ಯಾವ ಮಾಧ್ಯಮಗಳು ವರದಿ ಮಾಡಿಲ್ಲ ಅಥವಾ ಉಲ್ಲೇಖಿಸಿಲ್ಲ. ಗೂಗಲ್ ಮ್ಯಾಪ್‌ನಲ್ಲಿ ಶಾಲೆಯ ಸ್ಥಳವನ್ನು ಸರ್ಚ್ ಮಾಡಿದಾಗ, ಶಾಲೆಯ ಮೇಲ್ಛಾವಣಿಯ ಬಣ್ಣಗಳು ವೈರಲ್ ವೀಡಿಯೊದಲ್ಲಿ ಕಂಡುಬರುವ ಬಣ್ಣಕ್ಕೆ ಹೊಂದಿಕೆಯಾಗಿರುವುದನ್ನು ಕಂಡುಕೊಂಡಿದ್ದೇವೆ. ವೈರಲ್ ವಿಡಿಯೋವನ್ನು ನೇಪಾಳದ ಬೈತಾಡಿಯ ಸಿಗಾಸ್‌ನ ಭುವನೇಶ್ವರಿ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ನೇಪಾಳದ ವಿಡಿಯೋವನ್ನು ಆಂಧ್ರಪ್ರದೇಶದ ಶಾಲಾ ಮಕ್ಕಳು ಅಸಹಜ ನಡವಳಿಕೆಯನ್ನು ಪ್ರದರ್ಶಿಸುವ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...