Homeಮುಖಪುಟಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

ಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

- Advertisement -
- Advertisement -

“ಗೋಶಾಲೆಯನ್ನು ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು. ಹಸುವಿನ ಬೆನ್ನು ಸವರುವುದರಿಂದ ರಕ್ತದೊತ್ತಡ ಕಡಿಮೆ ಮಾಡಬಹುದು” ಎಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಸಂಜಯ್‌ ಸಿಂಗ್‌ ಗಂಗ್ವಾರ್‌ ಭಾನುವಾರ ಹೇಳಿದ್ದಾರೆ.

ನೌಗಾವಾನ್ ಪಕರಿಯಾದಲ್ಲಿ 55 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕನ್ಹಾ ಗೋಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಗಂಗ್ವಾರ್ ಈ ಹೇಳಿಕೆಗಳನ್ನು ನೀಡಿದ್ದಾರೆ.

“ರಕ್ತದೊತ್ತಡದ ರೋಗಿಗಳಿದ್ದರೆ ಇಲ್ಲಿ ಹಸುಗಳಿವೆ” ಎಂದಿರುವ ಗಂಗ್ವಾರ್ “ಒಬ್ಬರು ವ್ಯಕ್ತಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಹಸುವಿನ ಬೆನ್ನು ಸವರಬೇಕು. ಈ ಮೂಲಕ 20ಎಂಜಿ ಡೋಸ್ ರಕ್ತದೊತ್ತಡದ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದರೆ, ಅದು 10 ದಿನಗಳಲ್ಲಿ 10ಎಂಜಿಗೆ ಇಳಿಸಬಹುದು” ಎಂದಿದ್ದಾರೆ.

“ಕ್ಯಾನ್ಸರ್ ರೋಗಿಯು ದನದ ಕೊಟ್ಟಿಗೆಯನ್ನು ಸ್ವಚ್ಛಗೊಳಿಸಲು ಪ್ರಾರಂಭಿಸಿದರೆ, ಕ್ಯಾನ್ಸರ್ ಕೂಡ ವಾಸಿಯಾಗುತ್ತದೆ. ನೀವು ಹಸುವಿನ ಬೆರಣಿಯನ್ನು ಸುಟ್ಟರೆ ಸೊಳ್ಳೆಗಳಿಂದ ಪರಿಹಾರ ಸಿಗುತ್ತದೆ. ಹಸು ಉತ್ಪಾದಿಸುವ ಎಲ್ಲವೂ ಒಂದು ರೀತಿಯಲ್ಲಿ ಉಪಯುಕ್ತವಾಗಿದೆ” ಎಂದು ಗಂಗ್ವಾರ್‌ ಹೇಳಿದ್ದಾರೆ.

ಬಿಡಾಡಿ ದನಗಳ ಸಮಸ್ಯೆ ಬಗ್ಗೆಯೂ ಪ್ರತಿಕ್ರಿಯಿಸಿದ ಸಚಿವರು, “ನಾವು ನಮ್ಮ ತಾಯಿಯ ಸೇವೆ ಮಾಡುತ್ತಿಲ್ಲ, ಹೀಗಾಗಿ ತಾಯಿ ಎಲ್ಲೋ ನಮಗೆ ತೊಂದರೆ ಕೊಡುತ್ತಿದ್ದಾರೆ ಎಂದಿದ್ದಾರೆ. ಗೋಶಾಲೆಯಲ್ಲಿ ಈದ್ ಆಚರಿಸುವಂತೆ ಮುಸ್ಲಿಮರಿಗೆ ಕರೆ ನೀಡಿದ ಅವರು, ಈದ್ ಖಾದ್ಯವನ್ನು ಹಸುವಿನ ಹಾಲಿನಿಂದ ತಯಾರಿಸಿ ಎಂದು ಸೂಚಿಸಿದ್ದಾರೆ.

ನೌಗಾವಾನ್‌ನಲ್ಲಿ ಸಚಿವರು ಹೊಸದಾಗಿ ಉದ್ಘಾಟಿಸಿದ ಗೋಶಾಲೆಯು ಮೇವು, ಔಷಧಿ ಮತ್ತು ನಿರ್ಗತಿಕ ಹಸುಗಳಿಗೆ ಆಶ್ರಯವನ್ನು ಒದಗಿಸಲಿದೆ. ಗೋಶಾಲೆಗಳೊಂದಿಗೆ ಸಂಪರ್ಕ ಸಾಧಿಸಲು, ಮೇವು ದಾನ ಮಾಡುವ ಮೂಲಕ ವಿವಾಹ ವಾರ್ಷಿಕೋತ್ಸವಗಳು ಮತ್ತು ಮಕ್ಕಳ ಜನ್ಮದಿನಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ನಡೆಸುವಂತೆ ಗಂಗ್ವಾರ್ ಜನರಿಗೆ ಕರೆ ನೀಡಿದ್ದಾರೆ.

ಗಂಗ್ವಾರ್ ಅವರು 2012ರ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ಯಿಂದ ಸ್ಪರ್ಧಿಸಿ, ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆ ಸೇರಿದ್ದರು. 2017 ಮತ್ತು 2022ರಲ್ಲಿ ಪಿಲಿಭಿತ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿರುವ ಅವರು, ವಿಭಿನ್ನ ರಾಜಕೀಯ ಇತಿಹಾಸವನ್ನು ಹೊಂದಿದ್ದಾರೆ. ಬಿಜೆಪಿಯ ಮಾಜಿ ಸಂಸದ ವರುಣ್ ಗಾಂಧಿ ಅವರ ಕುರಿತು ವಿವಾದಾತ್ಮಕ ಹೇಳಿಕೆಗಳ ನೀಡುವುದು ಮತ್ತು ಟೀಕೆ ಮಾಡುವುದರಿಂದಲೇ ಇವರು ಹೆಚ್ಚು ಪ್ರಸಿದ್ದಿಯಾಗಿದ್ದಾರೆ.

ಇದನ್ನೂ ಓದಿ : ವೈದ್ಯೆ ಹತ್ಯೆ-ಅತ್ಯಾಚಾರ ಪ್ರಕರಣ: ಉಪವಾಸನಿರತ ವೈದ್ಯರು ಐಸಿಯುಗೆ ದಾಖಲು; ಇಂದು ರಾಜಭವನಕ್ಕೆ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...